<p><strong>ಬೆಂಗಳೂರು:</strong> ಅಸೋಸಿಯೇಟೆಡ್ ಮೈನಿಂಗ್ ಕಂಪೆನಿ (ಎಎಂಸಿ) ಮೂಲಕ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಮೇಲೆ ಸಿಬಿಐ ವಶದಲ್ಲಿರುವ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಮತ್ತು ಅವರ ಬಂಟ ಮೆಹಫೂಜ್ ಅಲಿಖಾನ್ನನ್ನು ಸಿಬಿಐ ಪೊಲೀಸರು ಶುಕ್ರವಾರ ನ್ಯಾಯಾಲಯಕ್ಕೆಹಾಜರುಪಡಿಸುವರು.</p>.<p>ಓಬಳಾಪುರಂ ಮೈನಿಂಗ್ ಕಂಪೆನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಚಂಚಲಗುಡ ಕಾರಾಗೃಹದಲ್ಲಿದ್ದ ರೆಡ್ಡಿ ಅವರನ್ನು `ಸಂಚಾರ ವಾರೆಂಟ್~ ಮೇಲೆ ಮಾರ್ಚ್ 2ರಂದು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.</p>.<p>ಆರೋಪಿಯನ್ನು ಸಿಬಿಐ ಪೊಲೀಸರ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅಲಿಖಾನ್ ಕೂಡ ಅದೇ ದಿನ ನ್ಯಾಯಾಲಯಕ್ಕೆ ಶರಣಾಗಿದ್ದು. ಮಾರ್ಚ್ 5ರಿಂದ ಆತನನ್ನು ಸಿಬಿಐ ವಶಕ್ಕೆ ನೀಡಲಾಗಿತ್ತು.</p>.<p>ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಪ್ರಕಾರ ಆರೋಪಿಯನ್ನು ಗರಿಷ್ಠ 15 ದಿನಗಳ ಕಾಲ ಪೊಲೀಸ್ ಬಂಧನಕ್ಕೆ ನೀಡಲು ಅವಕಾಶವಿದೆ. ರೆಡ್ಡಿ ಅವರ ಪೊಲೀಸ್ ಬಂಧನದ ಅವಧಿ ಶುಕ್ರವಾರಕ್ಕೆ 15 ದಿನ ಪೂರ್ಣಗೊಳ್ಳಲಿದೆ.</p>.<p>ಆದ್ದರಿಂದ ರೆಡ್ಡಿ ಅವರನ್ನು ಮತ್ತೆ ತನ್ನ ವಶಕ್ಕೆ ನೀಡುವಂತೆ ಮನವಿ ಮಾಡಲು ಸಿಬಿಐಗೆ ಅವಕಾಶವಿಲ್ಲ. ಆದರೆ, ಅಲಿಖಾನ್ನನ್ನು ಇನ್ನೂ ನಾಲ್ಕು ದಿನಗಳ ಕಾಲ ವಶಕ್ಕೆ ಪಡೆಯಲು ಅವಕಾಶವಿದೆ.</p>.<p>ಆತನನ್ನು ನಾಲ್ಕು ದಿನಗಳ ಕಾಲ ವಿಚಾರಣೆಗಾಗಿ ಒಪ್ಪಿಸುವಂತೆ ಸಿಬಿಐ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡುವ ಸಾಧ್ಯತೆ ಇದೆ.</p>.<p>ಶುಕ್ರವಾರವೂ ಸಿಬಿಐ ವಿಶೇಷ ನ್ಯಾಯಾಲಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಆವರಣದಲ್ಲಿರುವ ಗಾಂಧಿ ಭವನದಲ್ಲಿ ಸ್ಥಾಪಿಸಲಾಗಿರುವ ನ್ಯಾಯಾಂಗಣದಲ್ಲಿ ಕಾರ್ಯನಿರ್ವಹಿಸಲಿದೆ.</p>.<p>ನ್ಯಾಯಾಧೀಶ ಬಿ.ಎಂ.ಅಂಗಡಿ ಅವರು ಬೆಳಿಗ್ಗೆ 11ರಿಂದ ಅಲ್ಲಿಯೇ ಪ್ರಕರಣದ ವಿಚಾರಣೆ ನಡೆಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಸೋಸಿಯೇಟೆಡ್ ಮೈನಿಂಗ್ ಕಂಪೆನಿ (ಎಎಂಸಿ) ಮೂಲಕ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಮೇಲೆ ಸಿಬಿಐ ವಶದಲ್ಲಿರುವ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಮತ್ತು ಅವರ ಬಂಟ ಮೆಹಫೂಜ್ ಅಲಿಖಾನ್ನನ್ನು ಸಿಬಿಐ ಪೊಲೀಸರು ಶುಕ್ರವಾರ ನ್ಯಾಯಾಲಯಕ್ಕೆಹಾಜರುಪಡಿಸುವರು.</p>.<p>ಓಬಳಾಪುರಂ ಮೈನಿಂಗ್ ಕಂಪೆನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಚಂಚಲಗುಡ ಕಾರಾಗೃಹದಲ್ಲಿದ್ದ ರೆಡ್ಡಿ ಅವರನ್ನು `ಸಂಚಾರ ವಾರೆಂಟ್~ ಮೇಲೆ ಮಾರ್ಚ್ 2ರಂದು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.</p>.<p>ಆರೋಪಿಯನ್ನು ಸಿಬಿಐ ಪೊಲೀಸರ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅಲಿಖಾನ್ ಕೂಡ ಅದೇ ದಿನ ನ್ಯಾಯಾಲಯಕ್ಕೆ ಶರಣಾಗಿದ್ದು. ಮಾರ್ಚ್ 5ರಿಂದ ಆತನನ್ನು ಸಿಬಿಐ ವಶಕ್ಕೆ ನೀಡಲಾಗಿತ್ತು.</p>.<p>ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಪ್ರಕಾರ ಆರೋಪಿಯನ್ನು ಗರಿಷ್ಠ 15 ದಿನಗಳ ಕಾಲ ಪೊಲೀಸ್ ಬಂಧನಕ್ಕೆ ನೀಡಲು ಅವಕಾಶವಿದೆ. ರೆಡ್ಡಿ ಅವರ ಪೊಲೀಸ್ ಬಂಧನದ ಅವಧಿ ಶುಕ್ರವಾರಕ್ಕೆ 15 ದಿನ ಪೂರ್ಣಗೊಳ್ಳಲಿದೆ.</p>.<p>ಆದ್ದರಿಂದ ರೆಡ್ಡಿ ಅವರನ್ನು ಮತ್ತೆ ತನ್ನ ವಶಕ್ಕೆ ನೀಡುವಂತೆ ಮನವಿ ಮಾಡಲು ಸಿಬಿಐಗೆ ಅವಕಾಶವಿಲ್ಲ. ಆದರೆ, ಅಲಿಖಾನ್ನನ್ನು ಇನ್ನೂ ನಾಲ್ಕು ದಿನಗಳ ಕಾಲ ವಶಕ್ಕೆ ಪಡೆಯಲು ಅವಕಾಶವಿದೆ.</p>.<p>ಆತನನ್ನು ನಾಲ್ಕು ದಿನಗಳ ಕಾಲ ವಿಚಾರಣೆಗಾಗಿ ಒಪ್ಪಿಸುವಂತೆ ಸಿಬಿಐ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡುವ ಸಾಧ್ಯತೆ ಇದೆ.</p>.<p>ಶುಕ್ರವಾರವೂ ಸಿಬಿಐ ವಿಶೇಷ ನ್ಯಾಯಾಲಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಆವರಣದಲ್ಲಿರುವ ಗಾಂಧಿ ಭವನದಲ್ಲಿ ಸ್ಥಾಪಿಸಲಾಗಿರುವ ನ್ಯಾಯಾಂಗಣದಲ್ಲಿ ಕಾರ್ಯನಿರ್ವಹಿಸಲಿದೆ.</p>.<p>ನ್ಯಾಯಾಧೀಶ ಬಿ.ಎಂ.ಅಂಗಡಿ ಅವರು ಬೆಳಿಗ್ಗೆ 11ರಿಂದ ಅಲ್ಲಿಯೇ ಪ್ರಕರಣದ ವಿಚಾರಣೆ ನಡೆಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>