<p><strong>ವಿಜಾಪುರ:</strong> `ಗ್ರಾಮೀಣ ರೋಜಗಾರ ಯೋಜನೆಯಡಿ ಇಲ್ಲಿಯವರೆಗೆ ರೂ.2.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಜನರು ಇಲ್ಲಿಯವರೆಗೆ ಯಾರೂ ಗುಳೆ ಹೋಗಿರುವುದು ಕಂಡು ಬಂದಿಲ್ಲ~ ಎಂದು ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಹೇಳಿದರು. <br /> <br /> ಮಂಗಳವಾರ ನಡೆದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಜಿಲ್ಲಾಧಿಕಾರಿಗಳು ಈ ಮಾಹಿತಿ ನೀಡಿದರು!<br /> <br /> ಸೋಮವಾರದಿಂದ ಜಾರಿಯಾಗಿರುವ ಸಕಾಲ ಯೋಜನೆಯಡಿ 258 ಅರ್ಜಿಗಳು ಬಂದಿದ್ದು, ಅವುಗಳಲ್ಲಿ 37 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಸಕಾಲ ಯೋಜನೆಯನ್ನು ಯಶಸ್ವಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.<br /> <br /> ಜಿಲ್ಲೆಯಲ್ಲಿ 52 ಕೆರೆಗಳ ಹೂಳೆತ್ತುವ ಕಾರ್ಯಕ್ರಮ ಜಾರಿಯಲ್ಲಿದ್ದು, ಶೇ.99ರಷ್ಟು ಕಾಮಗಾರಿ ಮುಗಿದಿದೆ. ಜಿಲ್ಲೆಯಲ್ಲಿ ಬರ ನಿರ್ವಹಣೆ ಕುರಿತು ಯಾವುದೇ ಹಣದ ಕೊರತೆಯಿಲ್ಲ ಎಂದು ಹೇಳಿದರು.<br /> <br /> ಜಿಲ್ಲೆಯ 62 ಗ್ರಾಮಗಳ 100 ಜನವಸತಿ ಪ್ರದೇಶಗಳಲ್ಲಿ 130 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.<br /> <br /> ಆಲಮಟ್ಟಿ ಜಲಾಶಯದಲ್ಲಿ ನೀರಿನ ಮಟ್ಟ 508.9 ಮೀಟರ್ನಷ್ಟಿದ್ದು ಮೇ ಅಂತ್ಯದವರೆಗೆ ನೀರಿನ ಸಮಸ್ಯೆ ಪರಿಹಾರವಾಗಲಿದೆ ಎಂದು ಹೇಳಿದರು.<br /> <br /> ಜಿ.ಪಂ. ಸಿಇಒ ಎ.ಎನ್. ಪಾಟೀಲ, ಉಪ ವಿಭಾಗಾಧಿಕಾರಿ ಸುರೇಶ ಜಿರಲಿ ಹಾಗೂ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.<br /> <br /> <strong>ವಿಶ್ವ ಜಲ ದಿನಾಚರಣೆ:</strong> ವಿಜಾಪುರದ ಡಾ. ರಾಜೇಂದ್ರ ಪ್ರಸಾದ ಪ್ರಾಥಮಿಕ ಶಾಲೆಯಲ್ಲಿ ಸ್ಪಂದನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯಿಂದ ವಿಶ್ವ ಜಲ ದಿನ ಆಚರಿಸಲಾಯಿತು.<br /> <br /> ಎಸ್.ಎಂ. ಗೌರಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಈರಮ್ಮ ಮದರಿ, ಸ್ಪಂದನ ಸಂಸ್ಥೆಯ ಅಧ್ಯಕ್ಷೆ ಮಹಾದೇವಿ ಗೋಕಾಕ ಮುಖ್ಯ ಅತಿಥಿಯಾಗಿದ್ದರು. ನಿವೃತ್ತ ಶಿಕ್ಷಕ ಯಡಹಳ್ಳಿ, ರಾಧಾ ಶಿವಾಳೆ, ಗೋದಾಬಾಯಿ ನಲವಡೆ, ಸುಜಾತಾ, ಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.<br /> <strong><br /> ಪರಿಸರ ಸಂರಕ್ಷಣೆ ಉಪನ್ಯಾಸ: </strong>ವಿಜಾಪುರದ ಎಂ.ಆರ್. ಪ್ರೌಢ ಶಾಲೆಯಲ್ಲಿ ಡಾ. ಸಿ.ವಿ. ರಾಮನ್ ಇಕೋ ಕ್ಲಬ್ ಅಡಿಯಲ್ಲಿ ಇತ್ತೀಚೆಗೆ ಪರಿಸರ ಸಂರಕ್ಷಣೆಗಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.<br /> <br /> ಸಂಸ್ಥೆಯ ಕಾರ್ಯದರ್ಶಿ ತುಕಾರಾಮ ಚಂಚಲಕರ, ಎಸ್.ಆರ್. ಭೂಸರೆಡ್ಡಿ, ಮುಖ್ಯಾಧ್ಯಾಪಕ ಡಿ.ಎಂ. ಸೈಯ್ಯದ, ವಿಜ್ಞಾನ ಶಿಕ್ಷಕ ಎನ್.ಎಸ್. ಸೌದಾಗರ, ಜೆ.ಜೆ. ಅಂಜುಟಗಿ, ಪಿ.ಎಚ್. ನಾಯಕ, ವಿ.ಆರ್. ಪಟ್ಟಣ, ಆರ್.ಬಿ. ಕಾಖಂಡಕಿ ಮತ್ತಿತರರು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ:</strong> `ಗ್ರಾಮೀಣ ರೋಜಗಾರ ಯೋಜನೆಯಡಿ ಇಲ್ಲಿಯವರೆಗೆ ರೂ.2.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಜನರು ಇಲ್ಲಿಯವರೆಗೆ ಯಾರೂ ಗುಳೆ ಹೋಗಿರುವುದು ಕಂಡು ಬಂದಿಲ್ಲ~ ಎಂದು ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಹೇಳಿದರು. <br /> <br /> ಮಂಗಳವಾರ ನಡೆದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಜಿಲ್ಲಾಧಿಕಾರಿಗಳು ಈ ಮಾಹಿತಿ ನೀಡಿದರು!<br /> <br /> ಸೋಮವಾರದಿಂದ ಜಾರಿಯಾಗಿರುವ ಸಕಾಲ ಯೋಜನೆಯಡಿ 258 ಅರ್ಜಿಗಳು ಬಂದಿದ್ದು, ಅವುಗಳಲ್ಲಿ 37 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಸಕಾಲ ಯೋಜನೆಯನ್ನು ಯಶಸ್ವಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.<br /> <br /> ಜಿಲ್ಲೆಯಲ್ಲಿ 52 ಕೆರೆಗಳ ಹೂಳೆತ್ತುವ ಕಾರ್ಯಕ್ರಮ ಜಾರಿಯಲ್ಲಿದ್ದು, ಶೇ.99ರಷ್ಟು ಕಾಮಗಾರಿ ಮುಗಿದಿದೆ. ಜಿಲ್ಲೆಯಲ್ಲಿ ಬರ ನಿರ್ವಹಣೆ ಕುರಿತು ಯಾವುದೇ ಹಣದ ಕೊರತೆಯಿಲ್ಲ ಎಂದು ಹೇಳಿದರು.<br /> <br /> ಜಿಲ್ಲೆಯ 62 ಗ್ರಾಮಗಳ 100 ಜನವಸತಿ ಪ್ರದೇಶಗಳಲ್ಲಿ 130 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.<br /> <br /> ಆಲಮಟ್ಟಿ ಜಲಾಶಯದಲ್ಲಿ ನೀರಿನ ಮಟ್ಟ 508.9 ಮೀಟರ್ನಷ್ಟಿದ್ದು ಮೇ ಅಂತ್ಯದವರೆಗೆ ನೀರಿನ ಸಮಸ್ಯೆ ಪರಿಹಾರವಾಗಲಿದೆ ಎಂದು ಹೇಳಿದರು.<br /> <br /> ಜಿ.ಪಂ. ಸಿಇಒ ಎ.ಎನ್. ಪಾಟೀಲ, ಉಪ ವಿಭಾಗಾಧಿಕಾರಿ ಸುರೇಶ ಜಿರಲಿ ಹಾಗೂ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.<br /> <br /> <strong>ವಿಶ್ವ ಜಲ ದಿನಾಚರಣೆ:</strong> ವಿಜಾಪುರದ ಡಾ. ರಾಜೇಂದ್ರ ಪ್ರಸಾದ ಪ್ರಾಥಮಿಕ ಶಾಲೆಯಲ್ಲಿ ಸ್ಪಂದನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯಿಂದ ವಿಶ್ವ ಜಲ ದಿನ ಆಚರಿಸಲಾಯಿತು.<br /> <br /> ಎಸ್.ಎಂ. ಗೌರಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಈರಮ್ಮ ಮದರಿ, ಸ್ಪಂದನ ಸಂಸ್ಥೆಯ ಅಧ್ಯಕ್ಷೆ ಮಹಾದೇವಿ ಗೋಕಾಕ ಮುಖ್ಯ ಅತಿಥಿಯಾಗಿದ್ದರು. ನಿವೃತ್ತ ಶಿಕ್ಷಕ ಯಡಹಳ್ಳಿ, ರಾಧಾ ಶಿವಾಳೆ, ಗೋದಾಬಾಯಿ ನಲವಡೆ, ಸುಜಾತಾ, ಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.<br /> <strong><br /> ಪರಿಸರ ಸಂರಕ್ಷಣೆ ಉಪನ್ಯಾಸ: </strong>ವಿಜಾಪುರದ ಎಂ.ಆರ್. ಪ್ರೌಢ ಶಾಲೆಯಲ್ಲಿ ಡಾ. ಸಿ.ವಿ. ರಾಮನ್ ಇಕೋ ಕ್ಲಬ್ ಅಡಿಯಲ್ಲಿ ಇತ್ತೀಚೆಗೆ ಪರಿಸರ ಸಂರಕ್ಷಣೆಗಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.<br /> <br /> ಸಂಸ್ಥೆಯ ಕಾರ್ಯದರ್ಶಿ ತುಕಾರಾಮ ಚಂಚಲಕರ, ಎಸ್.ಆರ್. ಭೂಸರೆಡ್ಡಿ, ಮುಖ್ಯಾಧ್ಯಾಪಕ ಡಿ.ಎಂ. ಸೈಯ್ಯದ, ವಿಜ್ಞಾನ ಶಿಕ್ಷಕ ಎನ್.ಎಸ್. ಸೌದಾಗರ, ಜೆ.ಜೆ. ಅಂಜುಟಗಿ, ಪಿ.ಎಚ್. ನಾಯಕ, ವಿ.ಆರ್. ಪಟ್ಟಣ, ಆರ್.ಬಿ. ಕಾಖಂಡಕಿ ಮತ್ತಿತರರು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>