<p>ನವದೆಹಲಿ (ಪಿಟಿಐ): ಪ್ರಬಲ ಜನ ಲೋಕಪಾಲ ಮಸೂದೆಯನ್ನು ತರದಿದ್ದರೆ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆಯನ್ನು ಆರಂಭಿಸಬೇಕಾಗುತ್ತದೆ ಎಂದು ಅಣ್ಣಾ ಹಜಾರೆ ಅವರು ಬೆದರಿಕೆ ಹಾಕಿದ್ದಾರೆ.<br /> <br /> ಮುಂದಿನ ಲೋಕಸಭೆ ಚುನಾವಣೆಯವರೆಗೂ ಪ್ರಬಲ ಲೋಕಪಾಲ ಮಸೂದೆಗೆ ಪ್ರಚಾರ ಮಾಡಲಾಗುತ್ತದೆ. ಆಗಲೂ ತಮ್ಮ ಬೇಡಿಕೆ ಈಡೇರಿದಿದ್ದರೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಧರಣಿ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.<br /> <br /> `ಏ ದಿಲ್ ಮಾಂಗೆ ನೋ ಮೋರ್ ಕರಪ್ಷನ್~ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಜಾರೆ, ಈ ಸರ್ಕಾರ ಪ್ರಬಲ ಲೋಕಪಾಲ ಕಾಯ್ದೆ ತರಬೇಕು, ಇಲ್ಲವೆ ಹೋಗಬೇಕು ಎಂದು ಗುಡುಗಿದರು.<br /> <br /> ಸಂಸತ್ತಿನಲ್ಲಿ ಪ್ರಬಲ ಲೋಕಪಾಲ ಮಸೂದೆ ಅಂಗೀಕಾರವಾದರೆ ಯುಪಿಎ ಸರ್ಕಾರದ ಅರ್ಧಕ್ಕಿಂತ ಹೆಚ್ಚು ಸಚಿವರು ಜೈಲು ಸೇರಬೇಕಾಗುತ್ತದೆ ಎಂದು ಹೇಳಿದರು.<br /> <br /> ಮಾಹಿತಿ ಹಕ್ಕು ಕಾಯ್ದೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಮಾಹಿತಿ ಪಡೆಯಲು ಅವಕಾಶವಿದ್ದರೂ ಭ್ರಷ್ಟರನ್ನು ಜೈಲಿಗೆ ಕಳುಹಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರಬಲ ಲೋಕಪಾಲ ಕಾಯ್ದೆ ಇಂದಿನ ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.<br /> <br /> ನಿಮ್ಮ ಮುಂಬೈ ಪ್ರತಿಭಟನೆಗೆ ಜನರ ಸ್ಪಂದನೆ ಅಷ್ಟೊಂದು ಇರಲಿಲ್ಲವಲ್ಲ ಎಂದು ಕೇಳಿದಾಗ, `ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ತಂಡದಲ್ಲಿ ಒಡಕು ಮೂಡಿಸಲು ಮತ್ತು ಜನರಲ್ಲಿ ತಪ್ಪು ಅಭಿಪ್ರಾಯ ಬರುವಂತೆ ಮಾಡಲು ಯತ್ನಿಸಿದರು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಪ್ರಬಲ ಜನ ಲೋಕಪಾಲ ಮಸೂದೆಯನ್ನು ತರದಿದ್ದರೆ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆಯನ್ನು ಆರಂಭಿಸಬೇಕಾಗುತ್ತದೆ ಎಂದು ಅಣ್ಣಾ ಹಜಾರೆ ಅವರು ಬೆದರಿಕೆ ಹಾಕಿದ್ದಾರೆ.<br /> <br /> ಮುಂದಿನ ಲೋಕಸಭೆ ಚುನಾವಣೆಯವರೆಗೂ ಪ್ರಬಲ ಲೋಕಪಾಲ ಮಸೂದೆಗೆ ಪ್ರಚಾರ ಮಾಡಲಾಗುತ್ತದೆ. ಆಗಲೂ ತಮ್ಮ ಬೇಡಿಕೆ ಈಡೇರಿದಿದ್ದರೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಧರಣಿ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.<br /> <br /> `ಏ ದಿಲ್ ಮಾಂಗೆ ನೋ ಮೋರ್ ಕರಪ್ಷನ್~ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಜಾರೆ, ಈ ಸರ್ಕಾರ ಪ್ರಬಲ ಲೋಕಪಾಲ ಕಾಯ್ದೆ ತರಬೇಕು, ಇಲ್ಲವೆ ಹೋಗಬೇಕು ಎಂದು ಗುಡುಗಿದರು.<br /> <br /> ಸಂಸತ್ತಿನಲ್ಲಿ ಪ್ರಬಲ ಲೋಕಪಾಲ ಮಸೂದೆ ಅಂಗೀಕಾರವಾದರೆ ಯುಪಿಎ ಸರ್ಕಾರದ ಅರ್ಧಕ್ಕಿಂತ ಹೆಚ್ಚು ಸಚಿವರು ಜೈಲು ಸೇರಬೇಕಾಗುತ್ತದೆ ಎಂದು ಹೇಳಿದರು.<br /> <br /> ಮಾಹಿತಿ ಹಕ್ಕು ಕಾಯ್ದೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಮಾಹಿತಿ ಪಡೆಯಲು ಅವಕಾಶವಿದ್ದರೂ ಭ್ರಷ್ಟರನ್ನು ಜೈಲಿಗೆ ಕಳುಹಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರಬಲ ಲೋಕಪಾಲ ಕಾಯ್ದೆ ಇಂದಿನ ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.<br /> <br /> ನಿಮ್ಮ ಮುಂಬೈ ಪ್ರತಿಭಟನೆಗೆ ಜನರ ಸ್ಪಂದನೆ ಅಷ್ಟೊಂದು ಇರಲಿಲ್ಲವಲ್ಲ ಎಂದು ಕೇಳಿದಾಗ, `ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ತಂಡದಲ್ಲಿ ಒಡಕು ಮೂಡಿಸಲು ಮತ್ತು ಜನರಲ್ಲಿ ತಪ್ಪು ಅಭಿಪ್ರಾಯ ಬರುವಂತೆ ಮಾಡಲು ಯತ್ನಿಸಿದರು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>