<p><strong>ಶಿರಾ:</strong> ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ಧಾರ್ಮಿಕ ಸ್ಥಳದಲ್ಲಿ ಶವ ಹೂಳುವುದಾಗಿ ಪಟ್ಟು ಹಿಡಿದು ಜಾತಿ ಸಂಘರ್ಷಕ್ಕೆ ಕಾರಣವಾಗಿದ್ದ ಪ್ರಕರಣ ಅಂತ್ಯ ಕಂಡಿದೆ. ಮೃತರ ಸಂಬಂಧಿಕರ ಜಮೀನಿನಲ್ಲಿ ಮಂಗಳವಾರ ಮಧ್ಯಾಹ್ನ ಶವ ಸಂಸ್ಕಾರ ನೆರವೇರಿತು.<br /> <br /> ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ ಸ್ಥಳಕ್ಕೆ ಆಗಮಿಸಿ ಸ್ವತಃ ಶವ ಎತ್ತಿ ಪೊಲೀಸರ ಸಹಾಯದಿಂದ ಮಠಕ್ಕೆ ಸುಮಾರು ಅರ್ಧ ಕಿ.ಮೀ. ದೂರದ ಖಾಸಗಿ ಜಮೀನಿಗೆ ಮೃತ ದೇಹ ಸಾಗಿಸಿದರು. ಅಲ್ಲಿ ಜೆಸಿಬಿಯಿಂದ ಗುಂಡಿ ತೆಗೆದು ಮೃತರ ಸಂಬಂಧಿಕರ ಸಮ್ಮುಖದಲ್ಲಿಯೇ ಸಂಸ್ಕಾರ ನಡೆಸಿದರು.<br /> <br /> `ತಮ್ಮ ಪೂರ್ವಿಕರು ಗುರುಗುಂಡ ಬ್ರಹ್ಮೇಶ್ವರ ಮಠಕ್ಕೆ ಜಮೀನು ದಾನ ನೀಡಿದ್ದು, ಮಠದ ಆವರಣದಲ್ಲಿಯೇ ಶವ ಹೂಳಲು ಅವಕಾಶ ನೀಡಬೇಕು' ಎಂದು ಪಟ್ಟು ಹಿಡಿದಿದ್ದ ಮೃತರ ಸಂಬಂಧಿಕ ಮಹಿಳೆಯರು ಶವ ಸಂಸ್ಕಾರದ ವೇಳೆ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹಾಗೂ ಪೊಲೀಸರನ್ನು ನಿಂದಿಸಿದರು.<br /> <br /> ಶವ ಸಂಸ್ಕಾರಕ್ಕೂ ಮೊದಲು ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕಲಿಗ, ಕುರುಬ ಸಮಾಜದ ಮುಖಂಡರ ಜತೆ ಜಿಲ್ಲಾಧಿಕಾರಿ ಸತ್ಯಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮಣ ಗುಪ್ತ ಸಂಧಾನದ ಮಾತುಕತೆ ನಡೆಸಿದರು.<br /> <br /> ಈ ವೇಳೆ ಕುರುಬ ಸಮಾಜದ ಮುಖಂಡರು, ನಮ್ಮ ಪೂರ್ವಿಕರ ಸಮಾಧಿಗಳೆಂದು ಹೇಳಲಾಗುವ ಸ್ಥಳದಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡಬೇಕು. ಇಲ್ಲವೆ ಮಠದ ಆವರಣದಲ್ಲಿ ಪರ್ಯಾಯ ಜಾಗ ನೀಡಬೇಕು ಎಂದು ಪಟ್ಟು ಹಿಡಿದರು.<br /> <br /> ಇದಕ್ಕೆ ಮಠದ ಭಕ್ತ ಮಂಡಳಿ ಪ್ರತಿಕ್ರಿಯಿಸಿ, ಮಠದ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿರುವ ಪ್ರಕರಣ ಹಿಂಪಡೆದರೆ ಮಾತ್ರ ಪರ್ಯಾಯ ಜಾಗ ನೀಡುವ ಬಗ್ಗೆ ಚಿಂತಿಸುವುದಾಗಿ ಹೇಳಿದರು ಎನ್ನಲಾಗಿದೆ.<br /> <br /> ಸಂಧಾನ ವಿಫಲವಾದ ಕಾರಣ, ಜಿಲ್ಲಾಧಿಕಾರಿ ಸತ್ಯಮೂರ್ತಿ ಮೃತ ಜಯಮ್ಮ ಸಂಬಂಧಿಕರಿಗೆ `ಮಧ್ಯಾಹ್ನ 1 ಗಂಟೆಯೊಳಗೆ ಅಂತ್ಯಸಂಸ್ಕಾರ ನಡೆಸಬೇಕು. ಇಲ್ಲದಿದ್ದರೆ ಮೃತ ದೇಹದ ವಾಸನೆ ಹಲವು ರೀತಿಯ ಸಂಕ್ರಾಮಿಕ ರೋಗಗಳಿಗೆ ಕಾರಣವಾಗಿ ಕಿರಿಕಿರಿಯಾಗಲಿದೆ' ಎಂದು ಎಚ್ಚರಿಸಿದರು.<br /> <br /> ಇದಕ್ಕೆ ಸಮ್ಮತಿಸಿ ಒಂದು ಗಂಟೆಯೊಳಗೆ ತೀರ್ಮಾನಕ್ಕೆ ಬರಬೇಕು. ಇಲ್ಲವೇ ಕಾನೂನು ರೀತಿ ಕ್ರಮ ಜರುಗಿಸುವುದಾಗಿ ಎಚ್ಚರಿಸಿ ಮೃತರ ಕುಟುಂಬದವರಿಗೆ ತುರ್ತು ನೋಟಿಸ್ ಜಾರಿಗೊಳಿಸಿದ್ದರು.<br /> <br /> ಆಗ ಮೃತರ ಸಂಬಂಧಿಕರು ತಮ್ಮ ಸಂಬಂಧಿಕರ ಜಮೀನಿನಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನಿಗದಿಗೊಳಿಸಿದರು. ಗಡುವು ಮುಗಿದ ಕೂಡಲೇ ಶವದ ಬಳಿಗೆ ಬಂದ ಜಿಲ್ಲಾಧಿಕಾರಿ ಸತ್ಯಮೂರ್ತಿ ಮೃತ ದೇಹವನ್ನು ಪೊಲೀಸರ ನೆರವಿನೊಂದಿಗೆ ಅಂತ್ಯ ಸಂಸ್ಕಾರ ಸ್ಥಳಕ್ಕೆ ಸಾಗಿಸಿದರು.<br /> <br /> ಇದೇ ವೇಳೆ ವಿವಾದಕ್ಕೆ ಸಂಬಂಧಿಸಿದಂತೆ ಜುಲೈ 17ರಂದು ಎರಡು ಸಮಾಜದ ಮುಖಂಡರ ಸಭೆ ಕರೆದು ಚರ್ಚಿಸುವ ಭರವಸೆ ನೀಡಿದರು.<br /> <br /> ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ 144ರ ಕಲಂ ಅನ್ವಯ ನಿಷೇಧಾಜ್ಞೆ ಜಾರಿಯಿದೆ. ಪರಿಸ್ಥಿತಿ ಅವಲೋಕಿಸಿ ನಿಷೇಧಾಜ್ಞೆ ತೆರವುಗೊಳಿಸಲಾಗುವುದು ಎಂದು ಎಸ್ಪಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ಧಾರ್ಮಿಕ ಸ್ಥಳದಲ್ಲಿ ಶವ ಹೂಳುವುದಾಗಿ ಪಟ್ಟು ಹಿಡಿದು ಜಾತಿ ಸಂಘರ್ಷಕ್ಕೆ ಕಾರಣವಾಗಿದ್ದ ಪ್ರಕರಣ ಅಂತ್ಯ ಕಂಡಿದೆ. ಮೃತರ ಸಂಬಂಧಿಕರ ಜಮೀನಿನಲ್ಲಿ ಮಂಗಳವಾರ ಮಧ್ಯಾಹ್ನ ಶವ ಸಂಸ್ಕಾರ ನೆರವೇರಿತು.<br /> <br /> ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ ಸ್ಥಳಕ್ಕೆ ಆಗಮಿಸಿ ಸ್ವತಃ ಶವ ಎತ್ತಿ ಪೊಲೀಸರ ಸಹಾಯದಿಂದ ಮಠಕ್ಕೆ ಸುಮಾರು ಅರ್ಧ ಕಿ.ಮೀ. ದೂರದ ಖಾಸಗಿ ಜಮೀನಿಗೆ ಮೃತ ದೇಹ ಸಾಗಿಸಿದರು. ಅಲ್ಲಿ ಜೆಸಿಬಿಯಿಂದ ಗುಂಡಿ ತೆಗೆದು ಮೃತರ ಸಂಬಂಧಿಕರ ಸಮ್ಮುಖದಲ್ಲಿಯೇ ಸಂಸ್ಕಾರ ನಡೆಸಿದರು.<br /> <br /> `ತಮ್ಮ ಪೂರ್ವಿಕರು ಗುರುಗುಂಡ ಬ್ರಹ್ಮೇಶ್ವರ ಮಠಕ್ಕೆ ಜಮೀನು ದಾನ ನೀಡಿದ್ದು, ಮಠದ ಆವರಣದಲ್ಲಿಯೇ ಶವ ಹೂಳಲು ಅವಕಾಶ ನೀಡಬೇಕು' ಎಂದು ಪಟ್ಟು ಹಿಡಿದಿದ್ದ ಮೃತರ ಸಂಬಂಧಿಕ ಮಹಿಳೆಯರು ಶವ ಸಂಸ್ಕಾರದ ವೇಳೆ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹಾಗೂ ಪೊಲೀಸರನ್ನು ನಿಂದಿಸಿದರು.<br /> <br /> ಶವ ಸಂಸ್ಕಾರಕ್ಕೂ ಮೊದಲು ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕಲಿಗ, ಕುರುಬ ಸಮಾಜದ ಮುಖಂಡರ ಜತೆ ಜಿಲ್ಲಾಧಿಕಾರಿ ಸತ್ಯಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮಣ ಗುಪ್ತ ಸಂಧಾನದ ಮಾತುಕತೆ ನಡೆಸಿದರು.<br /> <br /> ಈ ವೇಳೆ ಕುರುಬ ಸಮಾಜದ ಮುಖಂಡರು, ನಮ್ಮ ಪೂರ್ವಿಕರ ಸಮಾಧಿಗಳೆಂದು ಹೇಳಲಾಗುವ ಸ್ಥಳದಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡಬೇಕು. ಇಲ್ಲವೆ ಮಠದ ಆವರಣದಲ್ಲಿ ಪರ್ಯಾಯ ಜಾಗ ನೀಡಬೇಕು ಎಂದು ಪಟ್ಟು ಹಿಡಿದರು.<br /> <br /> ಇದಕ್ಕೆ ಮಠದ ಭಕ್ತ ಮಂಡಳಿ ಪ್ರತಿಕ್ರಿಯಿಸಿ, ಮಠದ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿರುವ ಪ್ರಕರಣ ಹಿಂಪಡೆದರೆ ಮಾತ್ರ ಪರ್ಯಾಯ ಜಾಗ ನೀಡುವ ಬಗ್ಗೆ ಚಿಂತಿಸುವುದಾಗಿ ಹೇಳಿದರು ಎನ್ನಲಾಗಿದೆ.<br /> <br /> ಸಂಧಾನ ವಿಫಲವಾದ ಕಾರಣ, ಜಿಲ್ಲಾಧಿಕಾರಿ ಸತ್ಯಮೂರ್ತಿ ಮೃತ ಜಯಮ್ಮ ಸಂಬಂಧಿಕರಿಗೆ `ಮಧ್ಯಾಹ್ನ 1 ಗಂಟೆಯೊಳಗೆ ಅಂತ್ಯಸಂಸ್ಕಾರ ನಡೆಸಬೇಕು. ಇಲ್ಲದಿದ್ದರೆ ಮೃತ ದೇಹದ ವಾಸನೆ ಹಲವು ರೀತಿಯ ಸಂಕ್ರಾಮಿಕ ರೋಗಗಳಿಗೆ ಕಾರಣವಾಗಿ ಕಿರಿಕಿರಿಯಾಗಲಿದೆ' ಎಂದು ಎಚ್ಚರಿಸಿದರು.<br /> <br /> ಇದಕ್ಕೆ ಸಮ್ಮತಿಸಿ ಒಂದು ಗಂಟೆಯೊಳಗೆ ತೀರ್ಮಾನಕ್ಕೆ ಬರಬೇಕು. ಇಲ್ಲವೇ ಕಾನೂನು ರೀತಿ ಕ್ರಮ ಜರುಗಿಸುವುದಾಗಿ ಎಚ್ಚರಿಸಿ ಮೃತರ ಕುಟುಂಬದವರಿಗೆ ತುರ್ತು ನೋಟಿಸ್ ಜಾರಿಗೊಳಿಸಿದ್ದರು.<br /> <br /> ಆಗ ಮೃತರ ಸಂಬಂಧಿಕರು ತಮ್ಮ ಸಂಬಂಧಿಕರ ಜಮೀನಿನಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನಿಗದಿಗೊಳಿಸಿದರು. ಗಡುವು ಮುಗಿದ ಕೂಡಲೇ ಶವದ ಬಳಿಗೆ ಬಂದ ಜಿಲ್ಲಾಧಿಕಾರಿ ಸತ್ಯಮೂರ್ತಿ ಮೃತ ದೇಹವನ್ನು ಪೊಲೀಸರ ನೆರವಿನೊಂದಿಗೆ ಅಂತ್ಯ ಸಂಸ್ಕಾರ ಸ್ಥಳಕ್ಕೆ ಸಾಗಿಸಿದರು.<br /> <br /> ಇದೇ ವೇಳೆ ವಿವಾದಕ್ಕೆ ಸಂಬಂಧಿಸಿದಂತೆ ಜುಲೈ 17ರಂದು ಎರಡು ಸಮಾಜದ ಮುಖಂಡರ ಸಭೆ ಕರೆದು ಚರ್ಚಿಸುವ ಭರವಸೆ ನೀಡಿದರು.<br /> <br /> ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ 144ರ ಕಲಂ ಅನ್ವಯ ನಿಷೇಧಾಜ್ಞೆ ಜಾರಿಯಿದೆ. ಪರಿಸ್ಥಿತಿ ಅವಲೋಕಿಸಿ ನಿಷೇಧಾಜ್ಞೆ ತೆರವುಗೊಳಿಸಲಾಗುವುದು ಎಂದು ಎಸ್ಪಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>