<p><strong>ಬಾಗಲಕೋಟೆ:</strong> ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದಲ್ಲಿ ಸರ್ಕಾರ ದಲಿತರಿಗೆ ಮಂಜೂರು ಮಾಡಿರುವ ಜಮೀನನ್ನು ಅತಿಕ್ರಮಿಸಿಕೊಂಡಿರುವವರನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಗ್ರಾಮದ ದಲಿತ ಕುಟುಂಬದ ಸದಸ್ಯರು ನವನಗರದ ಜಿಲ್ಲಾಡಳಿತ ಭವನದ ಮುಂಭಾಗ ಮಂಗಳವಾರ ಧರಣಿ ನಡೆಸಿದರು.<br /> <br /> ಕುಳಲಿ ಗ್ರಾಮದ ದಲಿತ ಮಲ್ಲಿಕಾರ್ಜುನ ಬಟಗಿ, ಅವರ ಪತ್ನಿ ಶಾಂತಮ್ಮ, ಮಕ್ಕಳಾದ ಶ್ವೇತಾ, ವಿಶ್ವನಾಥ, ಕಾವೇರಿ ಮತ್ತು ಚೆನ್ನಮ್ಮ ಉಪವಾಸ ಧರಣಿಯಲ್ಲಿ ಪಾಲ್ಗೊಂಡಿದ್ದರು.<br /> <br /> ಧರಣಿ ನಿರತ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಮೂಲತಃ ವಿಜಾಪುರ ಜಿಲ್ಲೆಯ ಸಾರವಾಡ ಗ್ರಾಮದವರಾದ ನಮಗೆ ಅಲ್ಲಿ 2007ರಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಿದ ಕಾರಣ ಸರ್ಕಾರ ಪರಿಹಾರವಾಗಿ ಕುಳಲಿ ಗ್ರಾಮದ ಸರ್ವೇ ನಂ. 23/2ರಲ್ಲಿ 4.4 ಎಕರೆ ಜಮೀನನ್ನು ಪರಿಹಾರವಾಗಿ ನೀಡಿದೆ ಎಂದರು.<br /> <br /> ಸರ್ಕಾರ ಮಂಜೂರು ಮಾಡಿರುವ ಜಮೀನಿನಲ್ಲಿ ಸುಮಾರು 1 ಎಕರೆಗಿಂತ ಅಧಿಕ ಜಮೀನನ್ನು ಗ್ರಾಮದ ಪ್ರಭಾವಿ ರಾಜಕಾರಣಿಯೊಬ್ಬರು ಅತಿಕ್ರಮಿಸಿಕೊಂಡಿದ್ದು, ತೆರವುಗೊಳಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.<br /> <br /> ಅತಿಕ್ರಮಣ ತೆರವುಗೊಳಿಸಿಕೊಡುವಂತೆ ಮುಧೋಳ ತಹಶೀಲ್ದಾರ್ ಮತ್ತು ಶಾಸಕ ಗೋವಿಂದ ಕಾರಜೋಳ ಅವರಿಗೆ ಹಲವಾರು ಭಾರಿ ಮನವಿ ಮಾಡಿದರೂ ಅವರೂ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ, ಜಮೀನನಲ್ಲಿ ವ್ಯವಸಾಯ ಮಾಡಲು ಅತಿಕ್ರಮಣಕಾರರು ಬಿಡುತ್ತಿಲ್ಲ, ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.<br /> <br /> ಕುಟುಂಬಕ್ಕೆ ಮಂಜೂರಾಗಿರುವ ಜಮೀನು ದಲಿತರಿಗೆ ಸೇರಿದೆ ಎಂಬ ಕಾರಣಕ್ಕೆ ಕುಳಲಿ ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರಿ ಬ್ಯಾಂಕಿನಲ್ಲಿ ಬೆಳೆ ಸಾಲವನ್ನೂ ನೀಡುತ್ತಿಲ್ಲ, ಇಡೀ ಕುಟುಂಬ ಚಿತ್ರಹಿಂಸೆ ಅನುಭವಿಸುವಂತಾಗಿದೆ ಎಂದು ಹೇಳಿದರು.<br /> <br /> ಜಮೀನು ಅತಿಕ್ರಮಣವನ್ನು ತಕ್ಷಣ ತೆರವುಗೊಳಿಸಿ ಸಣ್ಣ ನೀರಾವರಿ ಇಲಾಖೆಯಿಂದ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಬೇಕು, ಈ ಹಿಂದೆ ಸರ್ಕಾರ ಮಂಜೂರು ಮಾಡಿರುವಂತೆ ದಲಿತ ಕುಟುಂಬಕ್ಕೆ ಮುಧೋಳ ತಾಲ್ಲೂಕಿನ ಹಳೆಗುಡದಿನ್ನಿ ಪುನರ್ವಸತಿ ಕೇಂದ್ರದಲ್ಲಿ ಉಚಿತವಾಗಿ ಮನೆ ನಿರ್ಮಿಸಿಕೊಡಬೇಕು, ಅತಿಕ್ರಮಣ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದಲ್ಲಿ ಸರ್ಕಾರ ದಲಿತರಿಗೆ ಮಂಜೂರು ಮಾಡಿರುವ ಜಮೀನನ್ನು ಅತಿಕ್ರಮಿಸಿಕೊಂಡಿರುವವರನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಗ್ರಾಮದ ದಲಿತ ಕುಟುಂಬದ ಸದಸ್ಯರು ನವನಗರದ ಜಿಲ್ಲಾಡಳಿತ ಭವನದ ಮುಂಭಾಗ ಮಂಗಳವಾರ ಧರಣಿ ನಡೆಸಿದರು.<br /> <br /> ಕುಳಲಿ ಗ್ರಾಮದ ದಲಿತ ಮಲ್ಲಿಕಾರ್ಜುನ ಬಟಗಿ, ಅವರ ಪತ್ನಿ ಶಾಂತಮ್ಮ, ಮಕ್ಕಳಾದ ಶ್ವೇತಾ, ವಿಶ್ವನಾಥ, ಕಾವೇರಿ ಮತ್ತು ಚೆನ್ನಮ್ಮ ಉಪವಾಸ ಧರಣಿಯಲ್ಲಿ ಪಾಲ್ಗೊಂಡಿದ್ದರು.<br /> <br /> ಧರಣಿ ನಿರತ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಮೂಲತಃ ವಿಜಾಪುರ ಜಿಲ್ಲೆಯ ಸಾರವಾಡ ಗ್ರಾಮದವರಾದ ನಮಗೆ ಅಲ್ಲಿ 2007ರಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಿದ ಕಾರಣ ಸರ್ಕಾರ ಪರಿಹಾರವಾಗಿ ಕುಳಲಿ ಗ್ರಾಮದ ಸರ್ವೇ ನಂ. 23/2ರಲ್ಲಿ 4.4 ಎಕರೆ ಜಮೀನನ್ನು ಪರಿಹಾರವಾಗಿ ನೀಡಿದೆ ಎಂದರು.<br /> <br /> ಸರ್ಕಾರ ಮಂಜೂರು ಮಾಡಿರುವ ಜಮೀನಿನಲ್ಲಿ ಸುಮಾರು 1 ಎಕರೆಗಿಂತ ಅಧಿಕ ಜಮೀನನ್ನು ಗ್ರಾಮದ ಪ್ರಭಾವಿ ರಾಜಕಾರಣಿಯೊಬ್ಬರು ಅತಿಕ್ರಮಿಸಿಕೊಂಡಿದ್ದು, ತೆರವುಗೊಳಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.<br /> <br /> ಅತಿಕ್ರಮಣ ತೆರವುಗೊಳಿಸಿಕೊಡುವಂತೆ ಮುಧೋಳ ತಹಶೀಲ್ದಾರ್ ಮತ್ತು ಶಾಸಕ ಗೋವಿಂದ ಕಾರಜೋಳ ಅವರಿಗೆ ಹಲವಾರು ಭಾರಿ ಮನವಿ ಮಾಡಿದರೂ ಅವರೂ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ, ಜಮೀನನಲ್ಲಿ ವ್ಯವಸಾಯ ಮಾಡಲು ಅತಿಕ್ರಮಣಕಾರರು ಬಿಡುತ್ತಿಲ್ಲ, ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.<br /> <br /> ಕುಟುಂಬಕ್ಕೆ ಮಂಜೂರಾಗಿರುವ ಜಮೀನು ದಲಿತರಿಗೆ ಸೇರಿದೆ ಎಂಬ ಕಾರಣಕ್ಕೆ ಕುಳಲಿ ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರಿ ಬ್ಯಾಂಕಿನಲ್ಲಿ ಬೆಳೆ ಸಾಲವನ್ನೂ ನೀಡುತ್ತಿಲ್ಲ, ಇಡೀ ಕುಟುಂಬ ಚಿತ್ರಹಿಂಸೆ ಅನುಭವಿಸುವಂತಾಗಿದೆ ಎಂದು ಹೇಳಿದರು.<br /> <br /> ಜಮೀನು ಅತಿಕ್ರಮಣವನ್ನು ತಕ್ಷಣ ತೆರವುಗೊಳಿಸಿ ಸಣ್ಣ ನೀರಾವರಿ ಇಲಾಖೆಯಿಂದ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಬೇಕು, ಈ ಹಿಂದೆ ಸರ್ಕಾರ ಮಂಜೂರು ಮಾಡಿರುವಂತೆ ದಲಿತ ಕುಟುಂಬಕ್ಕೆ ಮುಧೋಳ ತಾಲ್ಲೂಕಿನ ಹಳೆಗುಡದಿನ್ನಿ ಪುನರ್ವಸತಿ ಕೇಂದ್ರದಲ್ಲಿ ಉಚಿತವಾಗಿ ಮನೆ ನಿರ್ಮಿಸಿಕೊಡಬೇಕು, ಅತಿಕ್ರಮಣ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>