<p><strong>ಬೆಂಗಳೂರು: </strong>ರಾಮನಗರ ತಾಲ್ಲೂಕಿನ ರಂಗೇನಹಳ್ಳಿಯ ಚನ್ನಬಸಪ್ಪ ಅವರಿಗೆ ಸೇರಿದ 2.2 ಎಕರೆ ಜಮೀನಿಗೆ ಸಂಬಂಧಿಸಿದ ವ್ಯಾಜ್ಯವನ್ನು 35 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಚನ್ನಬಸಪ್ಪ ಅವರಿಗೆ ₨ 1 ಲಕ್ಷ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.<br /> <br /> ಚನ್ನಬಸಪ್ಪ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಮತ್ತು ರವಿ ಮಳಿಮಠ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.<br /> <br /> 1978ರಲ್ಲಿ ಚನ್ನಬಸಪ್ಪ ಅವರಿಗೆ ಈ ಜಮೀನನ್ನು ಅಲ್ಲಿನ ಜಿಲ್ಲಾಧಿಕಾರಿ ಮಂಜೂರು ಮಾಡಿದ್ದರು. ಇದಕ್ಕೆ ಕೆಲವರು ತಕರಾರು ಎತ್ತಿದರು. ಇದರ ವಿಚಾರಣೆ ನಡೆಸಿದ ಅಂದಿನ ಜಿಲ್ಲಾಧಿ ಕಾರಿ, ಮಂಜೂರಾತಿ ಹಿಂಪಡೆದರು. ಇದನ್ನು ಪ್ರಶ್ನಿಸಿ ಚನ್ನಬಸಪ್ಪ ಅವರು ಕರ್ನಾಟಕ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದರು.<br /> <br /> ಪ್ರಕರಣವನ್ನು ಆರು ತಿಂಗಳಲ್ಲಿ ಪುನರ್ ಪರಿಶೀಲಿಸಬೇಕು ಎಂದು ಪ್ರಾಧಿಕಾರ 1980ರಲ್ಲಿ ಜಿಲ್ಲಾಧಿಕಾರಿಗೆ ಆದೇಶಿಸಿತು. ಆದರೆ ಅದು ಅನುಷ್ಠಾನಕ್ಕೆ ಬರಲಿಲ್ಲ. ಇದನ್ನು ಪ್ರಶ್ನಿಸಿ ಚನ್ನಬಸಪ್ಪ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದರು. ಆದೇಶ ಪುನರ್ ಪರಿಶೀಲಿಸುವಂತೆ ಹೈಕೋರ್ಟ್ ಕೂಡ ಆದೇಶಿಸಿತು.<br /> <br /> ಅದೂ ಜಾರಿಗೆ ಬರಲಿಲ್ಲ. ನಂತರ ಚನ್ನಬಸಪ್ಪ ಅವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದರು. ‘ಚನ್ನಬಸಪ್ಪ ಅವರ ಜಮೀನಿಗೆ ಸಂಬಂಧಿಸಿದ ವ್ಯಾಜ್ಯವನ್ನು ಐದು ತಿಂಗಳಲ್ಲಿ ಇತ್ಯರ್ಥಪಡಿಸಬೇಕು. ಅವರಿಗೆ ಪರಿಹಾರ ರೂಪದಲ್ಲಿ ₨ 1 ಲಕ್ಷ ನೀಡಬೇಕು’ ಎಂದು ಆದೇಶಿಸಿ, ವಿಭಾಗೀಯ ಪೀಠ ಅರ್ಜಿ ಇತ್ಯರ್ಥಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಮನಗರ ತಾಲ್ಲೂಕಿನ ರಂಗೇನಹಳ್ಳಿಯ ಚನ್ನಬಸಪ್ಪ ಅವರಿಗೆ ಸೇರಿದ 2.2 ಎಕರೆ ಜಮೀನಿಗೆ ಸಂಬಂಧಿಸಿದ ವ್ಯಾಜ್ಯವನ್ನು 35 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಚನ್ನಬಸಪ್ಪ ಅವರಿಗೆ ₨ 1 ಲಕ್ಷ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.<br /> <br /> ಚನ್ನಬಸಪ್ಪ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಮತ್ತು ರವಿ ಮಳಿಮಠ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.<br /> <br /> 1978ರಲ್ಲಿ ಚನ್ನಬಸಪ್ಪ ಅವರಿಗೆ ಈ ಜಮೀನನ್ನು ಅಲ್ಲಿನ ಜಿಲ್ಲಾಧಿಕಾರಿ ಮಂಜೂರು ಮಾಡಿದ್ದರು. ಇದಕ್ಕೆ ಕೆಲವರು ತಕರಾರು ಎತ್ತಿದರು. ಇದರ ವಿಚಾರಣೆ ನಡೆಸಿದ ಅಂದಿನ ಜಿಲ್ಲಾಧಿ ಕಾರಿ, ಮಂಜೂರಾತಿ ಹಿಂಪಡೆದರು. ಇದನ್ನು ಪ್ರಶ್ನಿಸಿ ಚನ್ನಬಸಪ್ಪ ಅವರು ಕರ್ನಾಟಕ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದರು.<br /> <br /> ಪ್ರಕರಣವನ್ನು ಆರು ತಿಂಗಳಲ್ಲಿ ಪುನರ್ ಪರಿಶೀಲಿಸಬೇಕು ಎಂದು ಪ್ರಾಧಿಕಾರ 1980ರಲ್ಲಿ ಜಿಲ್ಲಾಧಿಕಾರಿಗೆ ಆದೇಶಿಸಿತು. ಆದರೆ ಅದು ಅನುಷ್ಠಾನಕ್ಕೆ ಬರಲಿಲ್ಲ. ಇದನ್ನು ಪ್ರಶ್ನಿಸಿ ಚನ್ನಬಸಪ್ಪ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದರು. ಆದೇಶ ಪುನರ್ ಪರಿಶೀಲಿಸುವಂತೆ ಹೈಕೋರ್ಟ್ ಕೂಡ ಆದೇಶಿಸಿತು.<br /> <br /> ಅದೂ ಜಾರಿಗೆ ಬರಲಿಲ್ಲ. ನಂತರ ಚನ್ನಬಸಪ್ಪ ಅವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದರು. ‘ಚನ್ನಬಸಪ್ಪ ಅವರ ಜಮೀನಿಗೆ ಸಂಬಂಧಿಸಿದ ವ್ಯಾಜ್ಯವನ್ನು ಐದು ತಿಂಗಳಲ್ಲಿ ಇತ್ಯರ್ಥಪಡಿಸಬೇಕು. ಅವರಿಗೆ ಪರಿಹಾರ ರೂಪದಲ್ಲಿ ₨ 1 ಲಕ್ಷ ನೀಡಬೇಕು’ ಎಂದು ಆದೇಶಿಸಿ, ವಿಭಾಗೀಯ ಪೀಠ ಅರ್ಜಿ ಇತ್ಯರ್ಥಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>