<p><strong>ಬೆಂಗಳೂರು:</strong> ಕ್ಷಯರೋಗದಿಂದ ದುರ್ಬಲ ಶ್ವಾಸಕೋಶ ಹೊಂದಿದ್ದ ರೋಗಿಗೆ ಸಾಮಾನ್ಯ ಅರಿವಳಿಕೆ ನೀಡದೆ ಬೆನ್ನುಹುರಿಗೆ ಅರಿವಳಿಕೆ ನೀಡಿ ಎಚ್ಚರದ ಸ್ಥಿತಿಯಲ್ಲಿಯೇ ತೆರೆದ ಹೃದಯದ ಶಸ್ತ್ರಚಿಕಿತ್ಸೆಯನ್ನು ಸರ್ಕಾರಿ ಸ್ವಾಮ್ಯದ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಮಾಡಲಾಗಿದೆ.<br /> <br /> ಸಾಮಾನ್ಯವಾಗಿ ಬೈಪಾಸ್ ಶಸ್ತ್ರಚಿಕಿತ್ಸೆಯನ್ನು ಪ್ರಜ್ಞೆ ತಪ್ಪಿಸಿ ಮಾಡಲಾಗುತ್ತದೆ. ಆದರೆ 55 ವರ್ಷದ ಗುರುಸ್ವಾಮಿ ಅವರಿಗೆ ಸಾಮಾನ್ಯ ಅರಿವಳಿಕೆ ನೀಡದರೆ ಹೃದಯ ಬಡಿತ ನಿಲ್ಲಿಸದೆ ಡಾ.ಅಶೋಕ್ ಕುಮಾರ್ ನೇತೃತ್ವದ ತಂಡ ಯಶಸ್ವಿಯಾಗಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮಾಡಿದೆ.<br /> <br /> ಗುರುಸ್ವಾಮಿ ಅವರು ಸುಮಾರು 20 ವರ್ಷದಿಂದ ಕ್ಷಯರೋಗದಿಂದ ಬಳಲುತ್ತಿದ್ದು, ಶ್ವಾಸಕೋಶ ದುರ್ಬಲವಾಗಿತ್ತು. ಇದರ ಜೊತೆಯಲ್ಲಿ ಹೃದಯದ ಮೂರು ರಕ್ತನಾಳಗಳಲ್ಲಿ ಸರಾಗ ರಕ್ತಸಂಚಾರಕ್ಕೆ ತಡೆ ಉಂಟಾಗಿತ್ತು. ಇಂತಹ ರೋಗಿಗಳಿಗೆ ಶಸ್ತ್ರಚಿಕಿತ್ಸೆ ವೇಳೆಯಲ್ಲಿ ಕೃತಕ ಉಸಿರಾಟ ಅಳವಡಿಸಿದರೆ, ನಂತರವೂ ಕೃತಕ ಉಸಿರಾಟವನ್ನೇ ನೀಡಬೇಕಾಗುತ್ತದೆ. ಹೀಗಾಗಿ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಬೇಕಾಯಿತು ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.<br /> <br /> ಬೆನ್ನುಹುರಿಯ ಮೂಲಕ ಅರಿವಳಿಕೆ ನೀಡಿದ್ದರಿಂದ ಶಸ್ತ್ರಚಿಕಿತ್ಸೆಯ ನೋವು ರೋಗಿಗೆ ಗೊತ್ತಾಗಲಿಲ್ಲ. ಆದರೆ ಶಸ್ತ್ರಚಿಕಿತ್ಸೆ ನಡೆಯುತ್ತಿರುವುದು ಗೊತ್ತಿತ್ತು.ವೈದ್ಯರು, ಅರಿವಳಿಕೆ ತಜ್ಞರು ಹಾಗೂ ಸಿಬ್ಬಂದಿ ಮಾತನ್ನಾಡುವುದು ಕೇಳುತ್ತಿತ್ತು. ರೋಗಿಯು ಗಾಬರಿಗೊಳ್ಳದಂತೆ ಮಾನಸಿಕವಾಗಿ ತಯಾರಿ ನಡೆಸಲಾಗಿತ್ತು. <br /> ಶಸ್ತ್ರಚಿಕಿತ್ಸೆ ನಂತರ ರೋಗಿಯು ಗುಣಮುಖವಾಗುತ್ತಿದ್ದು, ಶೀಘ್ರವೇ ಮನೆಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕ್ಷಯರೋಗದಿಂದ ದುರ್ಬಲ ಶ್ವಾಸಕೋಶ ಹೊಂದಿದ್ದ ರೋಗಿಗೆ ಸಾಮಾನ್ಯ ಅರಿವಳಿಕೆ ನೀಡದೆ ಬೆನ್ನುಹುರಿಗೆ ಅರಿವಳಿಕೆ ನೀಡಿ ಎಚ್ಚರದ ಸ್ಥಿತಿಯಲ್ಲಿಯೇ ತೆರೆದ ಹೃದಯದ ಶಸ್ತ್ರಚಿಕಿತ್ಸೆಯನ್ನು ಸರ್ಕಾರಿ ಸ್ವಾಮ್ಯದ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಮಾಡಲಾಗಿದೆ.<br /> <br /> ಸಾಮಾನ್ಯವಾಗಿ ಬೈಪಾಸ್ ಶಸ್ತ್ರಚಿಕಿತ್ಸೆಯನ್ನು ಪ್ರಜ್ಞೆ ತಪ್ಪಿಸಿ ಮಾಡಲಾಗುತ್ತದೆ. ಆದರೆ 55 ವರ್ಷದ ಗುರುಸ್ವಾಮಿ ಅವರಿಗೆ ಸಾಮಾನ್ಯ ಅರಿವಳಿಕೆ ನೀಡದರೆ ಹೃದಯ ಬಡಿತ ನಿಲ್ಲಿಸದೆ ಡಾ.ಅಶೋಕ್ ಕುಮಾರ್ ನೇತೃತ್ವದ ತಂಡ ಯಶಸ್ವಿಯಾಗಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮಾಡಿದೆ.<br /> <br /> ಗುರುಸ್ವಾಮಿ ಅವರು ಸುಮಾರು 20 ವರ್ಷದಿಂದ ಕ್ಷಯರೋಗದಿಂದ ಬಳಲುತ್ತಿದ್ದು, ಶ್ವಾಸಕೋಶ ದುರ್ಬಲವಾಗಿತ್ತು. ಇದರ ಜೊತೆಯಲ್ಲಿ ಹೃದಯದ ಮೂರು ರಕ್ತನಾಳಗಳಲ್ಲಿ ಸರಾಗ ರಕ್ತಸಂಚಾರಕ್ಕೆ ತಡೆ ಉಂಟಾಗಿತ್ತು. ಇಂತಹ ರೋಗಿಗಳಿಗೆ ಶಸ್ತ್ರಚಿಕಿತ್ಸೆ ವೇಳೆಯಲ್ಲಿ ಕೃತಕ ಉಸಿರಾಟ ಅಳವಡಿಸಿದರೆ, ನಂತರವೂ ಕೃತಕ ಉಸಿರಾಟವನ್ನೇ ನೀಡಬೇಕಾಗುತ್ತದೆ. ಹೀಗಾಗಿ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಬೇಕಾಯಿತು ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.<br /> <br /> ಬೆನ್ನುಹುರಿಯ ಮೂಲಕ ಅರಿವಳಿಕೆ ನೀಡಿದ್ದರಿಂದ ಶಸ್ತ್ರಚಿಕಿತ್ಸೆಯ ನೋವು ರೋಗಿಗೆ ಗೊತ್ತಾಗಲಿಲ್ಲ. ಆದರೆ ಶಸ್ತ್ರಚಿಕಿತ್ಸೆ ನಡೆಯುತ್ತಿರುವುದು ಗೊತ್ತಿತ್ತು.ವೈದ್ಯರು, ಅರಿವಳಿಕೆ ತಜ್ಞರು ಹಾಗೂ ಸಿಬ್ಬಂದಿ ಮಾತನ್ನಾಡುವುದು ಕೇಳುತ್ತಿತ್ತು. ರೋಗಿಯು ಗಾಬರಿಗೊಳ್ಳದಂತೆ ಮಾನಸಿಕವಾಗಿ ತಯಾರಿ ನಡೆಸಲಾಗಿತ್ತು. <br /> ಶಸ್ತ್ರಚಿಕಿತ್ಸೆ ನಂತರ ರೋಗಿಯು ಗುಣಮುಖವಾಗುತ್ತಿದ್ದು, ಶೀಘ್ರವೇ ಮನೆಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>