<p><strong>ಚೆನ್ನೈ (ಪಿಟಿಐ) :</strong> ಅಣ್ಣಾಡಿಎಂಕೆ ಪಕ್ಷದ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಭವಿಷ್ಯದ ಪ್ರಧಾನಿಯನ್ನಾಗಿ ಮಾಡುವುದು ನಮ್ಮ ಗುರಿ. ಇದಕ್ಕೆ ಪೂರಕ ವಾತಾವರಣ ಸೃಷ್ಟಿಸಲು ಒಗ್ಗೂಡಿ ಕೆಲಸ ಮಾಡುತ್ತೇವೆ ಎಂದು ಪಕ್ಷದ ಬೆಂಬಲಿಗರು ಮಂಗಳವಾರ ಪ್ರತಿಜ್ಞೆ ಕೈಗೊಂಡಿದ್ದಾರೆ.</p>.<p>ಅಣ್ಣಾಡಿಎಂಕೆ ಸಂಸ್ಥಾಪಕ ಎಂ. ಜಿ. ರಾಚಂದ್ರನ್ (ಎಂಜಿಆರ್) ಅವರ 26ನೇ ಪುಣ್ಯಸ್ಮರಣೆ ಸಂದರ್ಭದಲ್ಲಿ ಪಕ್ಷದ ಬೆಂಬಲಿಗರು ಈ ಪ್ರತಿಜ್ಞೆ ಮಾಡಿದ್ದಾರೆ.ರಾಜ್ಯದಲ್ಲಿ 40 ಸ್ಥಾನಗಳನ್ನು ಗೆಲ್ಲಲು ಒಟ್ಟಾಗಿ ಕೆಲಸ ಮಾಡುವ ಮೂಲಕ ಜಯಲಲಿತಾ ಅವರು ದೇಶವನ್ನು ಮುನ್ನಡೆಸಲು ಸಹಾಯ ಮಾಡುತ್ತೇವೆ ಎಂದು ಅವರು ಪ್ರಮಾಣ ಮಾಡಿದರು.</p>.<p>ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ತಮಿಳು ವಿರೋಧಿ ನೀತಿ ಮತ್ತು ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ಸೇನೆಯ ದಾಳಿಯನ್ನು ಪಕ್ಷ ತೀವ್ರವಾಗಿ ಖಂಡಿಸಿತು.</p>.<p>ದೇಶವನ್ನು ಸೂಪರ್ ಪವರ್ ಆಗಿ ಮಾಡುವ ಅರ್ಹತೆ ಜಯಲಲಿತಾ ಅವರಿಗಿದೆ. ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುವ ದಿಕ್ಕಿನಲ್ಲಿ ಪಕ್ಷ ಕಾರ್ಯನಿರ್ವಹಿಸಲಿದೆ ಎಂದು ಅಣ್ಣಾಡಿಎಂಕೆ ಪಕ್ಷದ ಕಾರ್ಯಕಾರಿಣಿ ಮತ್ತು ಸಾಮಾನ್ಯ ಸಭೆ ಡಿಸೆಂಬರ್ 19ರಂದು ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಪಿಟಿಐ) :</strong> ಅಣ್ಣಾಡಿಎಂಕೆ ಪಕ್ಷದ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಭವಿಷ್ಯದ ಪ್ರಧಾನಿಯನ್ನಾಗಿ ಮಾಡುವುದು ನಮ್ಮ ಗುರಿ. ಇದಕ್ಕೆ ಪೂರಕ ವಾತಾವರಣ ಸೃಷ್ಟಿಸಲು ಒಗ್ಗೂಡಿ ಕೆಲಸ ಮಾಡುತ್ತೇವೆ ಎಂದು ಪಕ್ಷದ ಬೆಂಬಲಿಗರು ಮಂಗಳವಾರ ಪ್ರತಿಜ್ಞೆ ಕೈಗೊಂಡಿದ್ದಾರೆ.</p>.<p>ಅಣ್ಣಾಡಿಎಂಕೆ ಸಂಸ್ಥಾಪಕ ಎಂ. ಜಿ. ರಾಚಂದ್ರನ್ (ಎಂಜಿಆರ್) ಅವರ 26ನೇ ಪುಣ್ಯಸ್ಮರಣೆ ಸಂದರ್ಭದಲ್ಲಿ ಪಕ್ಷದ ಬೆಂಬಲಿಗರು ಈ ಪ್ರತಿಜ್ಞೆ ಮಾಡಿದ್ದಾರೆ.ರಾಜ್ಯದಲ್ಲಿ 40 ಸ್ಥಾನಗಳನ್ನು ಗೆಲ್ಲಲು ಒಟ್ಟಾಗಿ ಕೆಲಸ ಮಾಡುವ ಮೂಲಕ ಜಯಲಲಿತಾ ಅವರು ದೇಶವನ್ನು ಮುನ್ನಡೆಸಲು ಸಹಾಯ ಮಾಡುತ್ತೇವೆ ಎಂದು ಅವರು ಪ್ರಮಾಣ ಮಾಡಿದರು.</p>.<p>ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ತಮಿಳು ವಿರೋಧಿ ನೀತಿ ಮತ್ತು ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ಸೇನೆಯ ದಾಳಿಯನ್ನು ಪಕ್ಷ ತೀವ್ರವಾಗಿ ಖಂಡಿಸಿತು.</p>.<p>ದೇಶವನ್ನು ಸೂಪರ್ ಪವರ್ ಆಗಿ ಮಾಡುವ ಅರ್ಹತೆ ಜಯಲಲಿತಾ ಅವರಿಗಿದೆ. ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುವ ದಿಕ್ಕಿನಲ್ಲಿ ಪಕ್ಷ ಕಾರ್ಯನಿರ್ವಹಿಸಲಿದೆ ಎಂದು ಅಣ್ಣಾಡಿಎಂಕೆ ಪಕ್ಷದ ಕಾರ್ಯಕಾರಿಣಿ ಮತ್ತು ಸಾಮಾನ್ಯ ಸಭೆ ಡಿಸೆಂಬರ್ 19ರಂದು ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>