<p>ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಜೊತೆಗೆ ಅಕ್ರಮ ಆಸ್ತಿ ಗಳಿಕೆ ವಿವಾದದಲ್ಲಿ ಸಿಲುಕಿರುವ ಅವರ ಸ್ನೇಹಿತೆ ಶಶಿಕಲಾ ನಟರಾಜನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.<br /> <br /> ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಪರ ವಕೀಲರು ನೀಡಿರುವ ಕೆಲವೊಂದು ದಾಖಲೆಗಳನ್ನು ಕೋರ್ಟ್ ಮಾನ್ಯ ಮಾಡದೇ ಇರುವುದನ್ನು (ನಾನ್ ಎಕ್ಸಿಬಿಟ್ಸ್) ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. <br /> <br /> ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಎರಡನೆಯ ಆರೋಪಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಕೆಲವೊಂದು ದಾಖಲೆಗಳನ್ನು ನೀಡಿದೆ. ಆದರೆ ಕೆಲವು ತಾಂತ್ರಿಕ ದೋಷಗಳು ಇರುವ ಹಿನ್ನೆಲೆಯಲ್ಲಿ ಕೋರ್ಟ್ ಅದನ್ನು ಮಾನ್ಯ ಮಾಡಲಿಲ್ಲ. ಇದನ್ನು ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.<br /> <br /> ಈ ದಾಖಲೆಗಳನ್ನು ಮಾನ್ಯ ಮಾಡದೇ ಹೋದರೆ ತಮಗೆ ವಿಶೇಷ ಕೋರ್ಟ್ನಲ್ಲಿ ಕೇಳುವ ಕೆಲವೊಂದು ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗುವುದಿಲ್ಲ ಎನ್ನುವುದು ಅವರ ವಾದ. ಆದರೆ ಈ ವಾದವನ್ನು ವಿಶೇಷ ಕೋರ್ಟ್ ತಳ್ಳಿಹಾಕಿದ್ದು, ಈ ಆದೇಶ ರದ್ದತಿಗೆ ಅವರು ಕೋರಿದ್ದಾರೆ. ಈ ಅರ್ಜಿಯು ಬುಧವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಜೊತೆಗೆ ಅಕ್ರಮ ಆಸ್ತಿ ಗಳಿಕೆ ವಿವಾದದಲ್ಲಿ ಸಿಲುಕಿರುವ ಅವರ ಸ್ನೇಹಿತೆ ಶಶಿಕಲಾ ನಟರಾಜನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.<br /> <br /> ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಪರ ವಕೀಲರು ನೀಡಿರುವ ಕೆಲವೊಂದು ದಾಖಲೆಗಳನ್ನು ಕೋರ್ಟ್ ಮಾನ್ಯ ಮಾಡದೇ ಇರುವುದನ್ನು (ನಾನ್ ಎಕ್ಸಿಬಿಟ್ಸ್) ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. <br /> <br /> ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಎರಡನೆಯ ಆರೋಪಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಕೆಲವೊಂದು ದಾಖಲೆಗಳನ್ನು ನೀಡಿದೆ. ಆದರೆ ಕೆಲವು ತಾಂತ್ರಿಕ ದೋಷಗಳು ಇರುವ ಹಿನ್ನೆಲೆಯಲ್ಲಿ ಕೋರ್ಟ್ ಅದನ್ನು ಮಾನ್ಯ ಮಾಡಲಿಲ್ಲ. ಇದನ್ನು ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.<br /> <br /> ಈ ದಾಖಲೆಗಳನ್ನು ಮಾನ್ಯ ಮಾಡದೇ ಹೋದರೆ ತಮಗೆ ವಿಶೇಷ ಕೋರ್ಟ್ನಲ್ಲಿ ಕೇಳುವ ಕೆಲವೊಂದು ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗುವುದಿಲ್ಲ ಎನ್ನುವುದು ಅವರ ವಾದ. ಆದರೆ ಈ ವಾದವನ್ನು ವಿಶೇಷ ಕೋರ್ಟ್ ತಳ್ಳಿಹಾಕಿದ್ದು, ಈ ಆದೇಶ ರದ್ದತಿಗೆ ಅವರು ಕೋರಿದ್ದಾರೆ. ಈ ಅರ್ಜಿಯು ಬುಧವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>