<p><strong>ಬೆಂಗಳೂರು</strong>: ಬೆಂಗಳೂರು ಜಲಮಂಡಲಿಯಲ್ಲಿ ನಡೆದ ಬಹುಕೋಟಿ ರೂಪಾಯಿ ಮೊತ್ತದ ಕೊಳವೆ ಬಾವಿ ಸಾಮಗ್ರಿ ಖರೀದಿಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ.<br /> <br /> ಇಲಾಖೆಯು ಉಪಕರಣ ಖರೀದಿಯಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರ, ಖರೀದಿ ಪ್ರಕ್ರಿಯೆ ಉಲ್ಲಂಘನೆ ಹಾಗೂ ಕಡತಗಳ ನಿರ್ವಹಣೆಯಲ್ಲಿ ನಡೆದಿರುವ ಫೋರ್ಜರಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ವಿವರವಾದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರನ್ನು ಕೋರಿದೆ. <br /> <br /> ನಗರದಲ್ಲಿ ಒಟ್ಟು 3451 ಕೊಳವೆ ಬಾವಿಗಳು ಕಾರ್ಯ ನಿರ್ವಹಿಸುತ್ತಿದ್ದು ಇವುಗಳಿಗೆ ಸಂಬಂಧಪಟ್ಟ ಉಪಕರಣ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ `ಪ್ರಜಾವಾಣಿ~ ವಿಶೇಷ ವರದಿ ಪ್ರಕಟಿಸಿತ್ತು. <br /> <br /> ಜಲಮಂಡಲಿಯ ವಿಶೇಷ ಲೆಕ್ಕ ಪರಿಶೋಧನಾ ವಿಭಾಗ ಸಹ ತನಿಖೆ ನಡೆಸಿ 5.46 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ವರದಿ ನೀಡಿತ್ತು. ಆಗಸ್ಟ್ನಲ್ಲಿ ಜಲಮಂಡಲಿ ಅಧ್ಯಕ್ಷರು ಹಗರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸುವಂತೆ ಇಲಾಖೆಗೆ ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ಜಲಮಂಡಲಿಯಲ್ಲಿ ನಡೆದ ಬಹುಕೋಟಿ ರೂಪಾಯಿ ಮೊತ್ತದ ಕೊಳವೆ ಬಾವಿ ಸಾಮಗ್ರಿ ಖರೀದಿಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ.<br /> <br /> ಇಲಾಖೆಯು ಉಪಕರಣ ಖರೀದಿಯಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರ, ಖರೀದಿ ಪ್ರಕ್ರಿಯೆ ಉಲ್ಲಂಘನೆ ಹಾಗೂ ಕಡತಗಳ ನಿರ್ವಹಣೆಯಲ್ಲಿ ನಡೆದಿರುವ ಫೋರ್ಜರಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ವಿವರವಾದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರನ್ನು ಕೋರಿದೆ. <br /> <br /> ನಗರದಲ್ಲಿ ಒಟ್ಟು 3451 ಕೊಳವೆ ಬಾವಿಗಳು ಕಾರ್ಯ ನಿರ್ವಹಿಸುತ್ತಿದ್ದು ಇವುಗಳಿಗೆ ಸಂಬಂಧಪಟ್ಟ ಉಪಕರಣ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ `ಪ್ರಜಾವಾಣಿ~ ವಿಶೇಷ ವರದಿ ಪ್ರಕಟಿಸಿತ್ತು. <br /> <br /> ಜಲಮಂಡಲಿಯ ವಿಶೇಷ ಲೆಕ್ಕ ಪರಿಶೋಧನಾ ವಿಭಾಗ ಸಹ ತನಿಖೆ ನಡೆಸಿ 5.46 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ವರದಿ ನೀಡಿತ್ತು. ಆಗಸ್ಟ್ನಲ್ಲಿ ಜಲಮಂಡಲಿ ಅಧ್ಯಕ್ಷರು ಹಗರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸುವಂತೆ ಇಲಾಖೆಗೆ ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>