<p>ಚಿತ್ರದುರ್ಗ: ಕುಡಿಯುವ ನೀರು ಪೂರೈಸುವ ನಿರ್ವಹಣೆಯನ್ನು ಸ್ಥಳೀಯ ಸಂಸ್ಥೆಗಳೇ ನಿಭಾಯಿಸಬೇಕು. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ನೀರು ನಿರ್ವಹಣೆಯನ್ನು ಹಸ್ತಾಂತರಿಸುವ ಪ್ರಸ್ತಾವಗಳು ಕಾರ್ಯ ಸಾಧುವಲ್ಲ ಎಂದು ಕಾನೂನು ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವ ಎಸ್. ಸುರೇಶ್ಕುಮಾರ್ ಅಭಿಪ್ರಾಯಪಟ್ಟರು.<br /> <br /> ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳ ಕುರಿತು ಮಂಗಳವಾರ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.<br /> <br /> ನಗರದಲ್ಲಿನ ನೀರು ನಿರ್ವಹಣೆಯನ್ನು ಮಂಡಳಿಗೆ ಹಸ್ತಾಂತರಿಸುವ ಬಗ್ಗೆ ಪ್ರಸ್ತಾಪಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ನಿರ್ವಹಣೆಯನ್ನು ಸ್ಥಳೀಯ ಸಂಸ್ಥೆಗಳೇ ನಿಭಾಯಿಸಬೇಕು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದು ವಿವರಿಸಿದರು.<br /> <br /> ನೀರು ನಿರ್ವಹಣೆಯ ಅನುಭವವಿಲ್ಲ ಎಂದಾದರೆ ಬೆಂಗಳೂರಿನ ಜಲಮಂಡಳಿ ವತಿಯಿಂದ ತರಬೇತಿ ನೀಡಲಾಗುವುದು. ಆದಾಗ್ಯೂ ಸಾಧ್ಯವಿಲ್ಲ ಎನ್ನುವುದಾದರೆ ಸರ್ಕಾರದ ಜತೆ ಕೆಲವು ಷರತ್ತುಗಳ ಬಗ್ಗೆ `ಸಿ~ ಒಡಂಬಡಿಕೆಗೆ ಸಹಿ ಹಾಕಬೇಕಾಗುತ್ತದೆ. ಒಟ್ಟು ನಿರ್ವಹಣೆ ವೆಚ್ಚವನ್ನು ನಗರಸಭೆ ವಹಿಸಿಕೊಳ್ಳಬೇಕು ಮತ್ತು ನೀರಿನ ಕಂದಾಯವನ್ನು ಸಂಗ್ರಹವನ್ನು ನಗರಸಭೆಯೇ ಮಾಡಬೇಕು. ಈ ರೀತಿಯ ಹಲವು ಷರತ್ತುಗಳನ್ನು ಒಪ್ಪುವುದಾದರೆ ಸರ್ಕಾರ ಪರಿಶೀಲನೆ ನಡೆಸುತ್ತದೆ ಎಂದು ತಿಳಿಸಿದರು.<br /> <br /> ಚಿತ್ರದುರ್ಗದಲ್ಲಿ `ಬಲ್ಕ್ ವಾಟರ್ ಮೀಟರ್ (ಫ್ಲೋಮೀಟರ್)~ ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದ ನೀರು ಪೂರೈಕೆ ಪ್ರಮಾಣ ಬಗ್ಗೆ ವಿವರ ದೊರೆಯಲಿದೆ. ಬೆಂಗಳೂರಿನಲ್ಲಿ `ನರ್ಮ್~ ಯೋಜನೆ ಅಡಿ ಈ ಮೀಟರ್ ಅಳವಡಿಸಲಾಗಿದೆ. ಈ ಮೀಟರ್ ಅನ್ನು ಯಾರು ನಿರ್ವಹಿಸುತ್ತಾರೆ ಎನ್ನುವ ಆಧಾರದ ಮೇಲೆ ಮೀಟರ್ ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು.<br /> <br /> ಚಳ್ಳಕೆರೆಗೆ ವಾಣಿವಿಲಾಸ ಸಾಗರದಿಂದ ಶಾಶ್ವತ ಕುಡಿಯುವ ನೀರು ಪೂರೈಸಲು ್ಙ 170 ಕೋಟಿ ಯೋಜನೆ ರೂಪಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆಗಳು ಮುಗಿದ್ದಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿದೆ. 24 ತಿಂಗಳಲ್ಲಿ ಈ ಕಾಮಗಾರಿ ಮುಗಿಸಲು ಗಡುವು ನೀಡಲಾಗಿದೆ ಎಂದು ತಿಳಿಸಿದರು.<br /> <br /> ಹೊಸದುರ್ಗದಲ್ಲಿ ಮಳೆ ಬಾರದ ಕಾರಣ ನೀರಿನ ಸಮಸ್ಯೆ ಉಂಟಾಗಿದೆ. ಹೊಸದುರ್ಗಕ್ಕೆ ಜಲಾಶಯ ಅಥವಾ ಕೆರೆಯಿಂದ ನೀರು ಪೂರೈಸುವಂತೆ ಅಭಿಪ್ರಾಯ ವ್ಯಕ್ತವಾಗಿದೆ. ಆದ್ದರಿಂದ, ಬ್ಯಾರೇಜ್ನಲ್ಲಿ ನೀರಿನ ಪ್ರಮಾಣ ಹೆಚ್ಚಿಸುವ ಬಗ್ಗೆ ಸಾಧಕ-ಬಾಧಕಗಳ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಯೋಜನೆ ರೂಪಿಸಿ ಪ್ರಸ್ತಾವನೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.<br /> <br /> ಜಿಲ್ಲೆಯ 6 ಸ್ಥಳೀಯ ಸಂಸ್ಥೆಗಳಲ್ಲಿ ಮನೆ-ಮನೆ ಕಸ ಸಂಗ್ರಹಣೆಗಾಗಿ 22 ಜೀಪ್ ಮೌಂಟೆಡ್ ವಾಹನಗಳು ಮತ್ತು 13 ಆಟೋ ಟಿಪ್ಪರ್ಗಳು ಬೇಕಾಗಿವೆ. ಎಸ್ಎಫ್ಸಿ ಅನುದಾನದ ಅಡಿ ಖರೀದಿಸಲು ಅನುಮೋದನೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.<br /> <br /> ಕಸ ನಿರ್ವಹಣೆಗಾಗಿ ಜಿಲ್ಲೆಯ 5 ತಾಲ್ಲೂಕು ಕೇಂದ್ರಗಳಲ್ಲಿ ನೆಲಭರ್ತಿಗಾಗಿ ್ಙ 5 ಕೋಟಿ ಯೋಜನೆ ರೂಪಿಸಲಾಗಿದ್ದು, ಸರ್ಕಾರದ ಅನುಮೋದನೆ ನೀಡಬೇಕಾಗಿದೆ. ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ನೆಲಭರ್ತಿ ಸ್ಥಳದಲ್ಲಿ ಕಸ ಬೇರ್ಪಡಿಸುವ ಘಟಕ ಸ್ಥಾಪಿಸಲು ಒಪ್ಪಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.<br /> <br /> ಚಿತ್ರದುರ್ಗ ನಗರಸಭೆಗೆ 44 ಪೌರಕಾರ್ಮಿಕರನ್ನು ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.<br /> <br /> ನರ್ಮ್ ಯೋಜನೆ ಅಡಿ ರಾಜ್ಯದ ಹೆಚ್ಚಿನ ನಗರಗಳನ್ನು ಸೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಕುಡಿಯುವ ನೀರು ಪೂರೈಸುವ ನಿರ್ವಹಣೆಯನ್ನು ಸ್ಥಳೀಯ ಸಂಸ್ಥೆಗಳೇ ನಿಭಾಯಿಸಬೇಕು. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ನೀರು ನಿರ್ವಹಣೆಯನ್ನು ಹಸ್ತಾಂತರಿಸುವ ಪ್ರಸ್ತಾವಗಳು ಕಾರ್ಯ ಸಾಧುವಲ್ಲ ಎಂದು ಕಾನೂನು ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವ ಎಸ್. ಸುರೇಶ್ಕುಮಾರ್ ಅಭಿಪ್ರಾಯಪಟ್ಟರು.<br /> <br /> ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳ ಕುರಿತು ಮಂಗಳವಾರ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.<br /> <br /> ನಗರದಲ್ಲಿನ ನೀರು ನಿರ್ವಹಣೆಯನ್ನು ಮಂಡಳಿಗೆ ಹಸ್ತಾಂತರಿಸುವ ಬಗ್ಗೆ ಪ್ರಸ್ತಾಪಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ನಿರ್ವಹಣೆಯನ್ನು ಸ್ಥಳೀಯ ಸಂಸ್ಥೆಗಳೇ ನಿಭಾಯಿಸಬೇಕು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದು ವಿವರಿಸಿದರು.<br /> <br /> ನೀರು ನಿರ್ವಹಣೆಯ ಅನುಭವವಿಲ್ಲ ಎಂದಾದರೆ ಬೆಂಗಳೂರಿನ ಜಲಮಂಡಳಿ ವತಿಯಿಂದ ತರಬೇತಿ ನೀಡಲಾಗುವುದು. ಆದಾಗ್ಯೂ ಸಾಧ್ಯವಿಲ್ಲ ಎನ್ನುವುದಾದರೆ ಸರ್ಕಾರದ ಜತೆ ಕೆಲವು ಷರತ್ತುಗಳ ಬಗ್ಗೆ `ಸಿ~ ಒಡಂಬಡಿಕೆಗೆ ಸಹಿ ಹಾಕಬೇಕಾಗುತ್ತದೆ. ಒಟ್ಟು ನಿರ್ವಹಣೆ ವೆಚ್ಚವನ್ನು ನಗರಸಭೆ ವಹಿಸಿಕೊಳ್ಳಬೇಕು ಮತ್ತು ನೀರಿನ ಕಂದಾಯವನ್ನು ಸಂಗ್ರಹವನ್ನು ನಗರಸಭೆಯೇ ಮಾಡಬೇಕು. ಈ ರೀತಿಯ ಹಲವು ಷರತ್ತುಗಳನ್ನು ಒಪ್ಪುವುದಾದರೆ ಸರ್ಕಾರ ಪರಿಶೀಲನೆ ನಡೆಸುತ್ತದೆ ಎಂದು ತಿಳಿಸಿದರು.<br /> <br /> ಚಿತ್ರದುರ್ಗದಲ್ಲಿ `ಬಲ್ಕ್ ವಾಟರ್ ಮೀಟರ್ (ಫ್ಲೋಮೀಟರ್)~ ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದ ನೀರು ಪೂರೈಕೆ ಪ್ರಮಾಣ ಬಗ್ಗೆ ವಿವರ ದೊರೆಯಲಿದೆ. ಬೆಂಗಳೂರಿನಲ್ಲಿ `ನರ್ಮ್~ ಯೋಜನೆ ಅಡಿ ಈ ಮೀಟರ್ ಅಳವಡಿಸಲಾಗಿದೆ. ಈ ಮೀಟರ್ ಅನ್ನು ಯಾರು ನಿರ್ವಹಿಸುತ್ತಾರೆ ಎನ್ನುವ ಆಧಾರದ ಮೇಲೆ ಮೀಟರ್ ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು.<br /> <br /> ಚಳ್ಳಕೆರೆಗೆ ವಾಣಿವಿಲಾಸ ಸಾಗರದಿಂದ ಶಾಶ್ವತ ಕುಡಿಯುವ ನೀರು ಪೂರೈಸಲು ್ಙ 170 ಕೋಟಿ ಯೋಜನೆ ರೂಪಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆಗಳು ಮುಗಿದ್ದಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿದೆ. 24 ತಿಂಗಳಲ್ಲಿ ಈ ಕಾಮಗಾರಿ ಮುಗಿಸಲು ಗಡುವು ನೀಡಲಾಗಿದೆ ಎಂದು ತಿಳಿಸಿದರು.<br /> <br /> ಹೊಸದುರ್ಗದಲ್ಲಿ ಮಳೆ ಬಾರದ ಕಾರಣ ನೀರಿನ ಸಮಸ್ಯೆ ಉಂಟಾಗಿದೆ. ಹೊಸದುರ್ಗಕ್ಕೆ ಜಲಾಶಯ ಅಥವಾ ಕೆರೆಯಿಂದ ನೀರು ಪೂರೈಸುವಂತೆ ಅಭಿಪ್ರಾಯ ವ್ಯಕ್ತವಾಗಿದೆ. ಆದ್ದರಿಂದ, ಬ್ಯಾರೇಜ್ನಲ್ಲಿ ನೀರಿನ ಪ್ರಮಾಣ ಹೆಚ್ಚಿಸುವ ಬಗ್ಗೆ ಸಾಧಕ-ಬಾಧಕಗಳ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಯೋಜನೆ ರೂಪಿಸಿ ಪ್ರಸ್ತಾವನೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.<br /> <br /> ಜಿಲ್ಲೆಯ 6 ಸ್ಥಳೀಯ ಸಂಸ್ಥೆಗಳಲ್ಲಿ ಮನೆ-ಮನೆ ಕಸ ಸಂಗ್ರಹಣೆಗಾಗಿ 22 ಜೀಪ್ ಮೌಂಟೆಡ್ ವಾಹನಗಳು ಮತ್ತು 13 ಆಟೋ ಟಿಪ್ಪರ್ಗಳು ಬೇಕಾಗಿವೆ. ಎಸ್ಎಫ್ಸಿ ಅನುದಾನದ ಅಡಿ ಖರೀದಿಸಲು ಅನುಮೋದನೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.<br /> <br /> ಕಸ ನಿರ್ವಹಣೆಗಾಗಿ ಜಿಲ್ಲೆಯ 5 ತಾಲ್ಲೂಕು ಕೇಂದ್ರಗಳಲ್ಲಿ ನೆಲಭರ್ತಿಗಾಗಿ ್ಙ 5 ಕೋಟಿ ಯೋಜನೆ ರೂಪಿಸಲಾಗಿದ್ದು, ಸರ್ಕಾರದ ಅನುಮೋದನೆ ನೀಡಬೇಕಾಗಿದೆ. ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ನೆಲಭರ್ತಿ ಸ್ಥಳದಲ್ಲಿ ಕಸ ಬೇರ್ಪಡಿಸುವ ಘಟಕ ಸ್ಥಾಪಿಸಲು ಒಪ್ಪಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.<br /> <br /> ಚಿತ್ರದುರ್ಗ ನಗರಸಭೆಗೆ 44 ಪೌರಕಾರ್ಮಿಕರನ್ನು ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.<br /> <br /> ನರ್ಮ್ ಯೋಜನೆ ಅಡಿ ರಾಜ್ಯದ ಹೆಚ್ಚಿನ ನಗರಗಳನ್ನು ಸೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>