<p><strong>ಮೂಡುಬಿದಿರೆ</strong>: ಗ್ರಾಮಸ್ಥರಿಗೆ ತೊಂದರೆ ನೀಡುತ್ತಿರುವ ಎರಡು ಜಲ್ಲಿ ಕ್ರಷರ್ಗಳ ಪರವಾನಗಿ ನವೀಕರಿಸಬಾರದು ಎಂದು ಶುಕ್ರವಾರ ನಡೆದ ನೆಲ್ಲಿಕಾರು ಗ್ರಾಮಸಭೆಯಲ್ಲಿಗ್ರಾಮಸ್ಥರು ಆಗ್ರಹಿಸಿದರು.<br /> <br /> ಪಂಚಾಯತಿ ಅಧ್ಯಕ್ಷೆ ಸರೋಜಾ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸಭೆ ನಡೆಯಿತು. ಪಂಚಾಯತಿ ವ್ಯಾಪ್ತಿಯಲ್ಲಿ 5 ಜಲ್ಲಿ ಕ್ರಷರ್ಗಳಿದ್ದು ಈ ಪೈಕಿ ರೋಬೊ ಸಿಲಿಕಾನ್ ಮತ್ತು ಶ್ರಿನಿವಾಸ ಪ್ರಸಾದ್ ಕ್ರಷರ್ಗಳಿಂದ ಪರಿಸರಕ್ಕೆ ತೊಂದರೆಯಾಗುತ್ತಿದ್ದು, ಗ್ರಾಮ ಪಂಚಾಯತಿಗೆ ಈ ಹಿಂದೆಯೆ ದೂರು ನೀಡಲಾಗಿದೆ. ಈ ಎರಡು ಕ್ರಷರ್ಗಳನ್ನು ಮುಚ್ಚಬೇಕು ಮತ್ತು ಪರವಾನಿಗೆಯನ್ನು ಪಂಚಾಯತಿ ನವೀಕರಿಸಬಾರದು ಎಂದು ಗ್ರಾಮಸ್ಥರು ಒತ್ತಾಯಿಸಿದರು.<br /> <br /> ಇದಕ್ಕೆ ಉತ್ತರಿಸಿದ ಉಪಾಧ್ಯಕ್ಷ ಶಶಿಧರ್, ಗ್ರಾಮಸ್ಥರ ವಿರೋಧವಿದ್ದರೆ ಈ ಎರಡು ಕ್ರಷರ್ಗಳ ಪರವಾನಗಿ ನವೀಕರಿಸುವುದಿಲ್ಲ. ಅಲ್ಲದೆ ಮುಂದೆ ಈ ಪ್ರದೇಶದಲ್ಲಿ ಹೊಸ ಗಣಿಗಾರಿಕೆಗೆ ಪರವಾನಗಿ ನೀಡದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಪತ್ರ ಬರೆಯಲಾಗುವುದು ಎಂದರು.<br /> <br /> ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಯೋಜನೆ ಇನ್ನೂ ಹಳ್ಳಿಯನ್ನು ತಲುಪುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಮಾತನಾಡಿಸಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥ ರಮೇಶ್ ಬೋಧಿ ಆರೋಪಿಸಿದರು. ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರಭಾರ ಅಭಿವೃದ್ಧಿ ಅಧಿಕಾರಿ ಡಾ. ಮನೋಹರ ಉದ್ಯೋಗ ಖಾತ್ರಿ ಯೋಜನೆ, ಮಾರ್ಗಸೂಚಿ ಪ್ರಕಾರ ಕೆಲಸ ನಡೆಯುತ್ತಿದೆ.<br /> ಯೋಜನೆ ಅನುಷ್ಠಾನ ವಿಳಂಬದ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.<br /> <br /> ಶಿಕ್ಷಣ ಇಲಾಖೆಯ ಬಗ್ಗೆ ಮಾಹಿತಿ ನೀಡಿದ ಮಾರ್ಗರೇಟ್ ಪಿಂಟೊ ಜುಲೈನಲ್ಲಿ ಪ್ರಾಥಮಿಕ ಶಿಕ್ಷಕಕರ ಕೌನ್ಸಿಲಿಂಗ್ ನಡೆಯಲಿದ್ದು, ಶಿಕ್ಷಕರ ಕೊರೆತೆಯಿರುವ ಶಾಲೆಗಳ ಸಮಸ್ಯೆ ಬಗೆಹರಿಯಲಿದೆ. ಶಿಕ್ಷಕರ ಕೊರತೆ ನೀಗಿಸಲು ಗುತ್ತಿಯಾಧಾರದಲ್ಲೂ ನೇಮಕ ನಡೆಯಲಿದೆ. ಭುವನಜ್ಯೋತಿ ರೆಸಿಡೆನ್ಸಿಯಲ್ ಶಾಲೆಯವರು ಕೂಡ ಶಿಕ್ಷಕರನ್ನು ಒದಗಿಸುತ್ತಿದ್ದಾರೆ ಎಂದರು.<br /> <br /> ಇಂಟರ್ನೆಟ್ ಸಮಸ್ಯೆಯಿಂದಾಗಿ ಪಡಿತರ ಚೀಟಿ ಅನ್ಲೈನ್ ನೋಂದಾಣಿ ಪ್ರಕ್ರಿಯೆ ವಿಳಂಬವಾಗುವುದನ್ನು ತಪ್ಪಿಸಲು ಶೀಘ್ರದಲ್ಲಿ ಬ್ರಾಡ್ಬ್ಯಾಂಡ್ ಸೌಲಭ್ಯ ಒದಗಿಸಿ ಅವ್ಯವಸ್ಥೆ ಸರಿಪಡಿಸಲಾಗುವುದು ಎಂದು ಅಭಿವೃದ್ಧಿ ಅಧಿಕಾರಿ ಸಭೆಗೆ ತಿಳಿಸಿದರು.<br /> <br /> ಜಿಲ್ಲಾ ಪಂಚಾಯತಿ ಸದಸ್ಯೆ ಅಂಬಿಕಾ.ಡಿ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ರುಕ್ಕಯ್ಯ ಪೂಜಾರಿ, ನೋಡೆಲ್ ಅಧಿಕಾರಿ ಜಲಾನಯನ ಇಲಾಖೆಯ ಯುವರಾಜ್, ಕಾರ್ಯದರ್ಶಿ ಸುನಂದ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ</strong>: ಗ್ರಾಮಸ್ಥರಿಗೆ ತೊಂದರೆ ನೀಡುತ್ತಿರುವ ಎರಡು ಜಲ್ಲಿ ಕ್ರಷರ್ಗಳ ಪರವಾನಗಿ ನವೀಕರಿಸಬಾರದು ಎಂದು ಶುಕ್ರವಾರ ನಡೆದ ನೆಲ್ಲಿಕಾರು ಗ್ರಾಮಸಭೆಯಲ್ಲಿಗ್ರಾಮಸ್ಥರು ಆಗ್ರಹಿಸಿದರು.<br /> <br /> ಪಂಚಾಯತಿ ಅಧ್ಯಕ್ಷೆ ಸರೋಜಾ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸಭೆ ನಡೆಯಿತು. ಪಂಚಾಯತಿ ವ್ಯಾಪ್ತಿಯಲ್ಲಿ 5 ಜಲ್ಲಿ ಕ್ರಷರ್ಗಳಿದ್ದು ಈ ಪೈಕಿ ರೋಬೊ ಸಿಲಿಕಾನ್ ಮತ್ತು ಶ್ರಿನಿವಾಸ ಪ್ರಸಾದ್ ಕ್ರಷರ್ಗಳಿಂದ ಪರಿಸರಕ್ಕೆ ತೊಂದರೆಯಾಗುತ್ತಿದ್ದು, ಗ್ರಾಮ ಪಂಚಾಯತಿಗೆ ಈ ಹಿಂದೆಯೆ ದೂರು ನೀಡಲಾಗಿದೆ. ಈ ಎರಡು ಕ್ರಷರ್ಗಳನ್ನು ಮುಚ್ಚಬೇಕು ಮತ್ತು ಪರವಾನಿಗೆಯನ್ನು ಪಂಚಾಯತಿ ನವೀಕರಿಸಬಾರದು ಎಂದು ಗ್ರಾಮಸ್ಥರು ಒತ್ತಾಯಿಸಿದರು.<br /> <br /> ಇದಕ್ಕೆ ಉತ್ತರಿಸಿದ ಉಪಾಧ್ಯಕ್ಷ ಶಶಿಧರ್, ಗ್ರಾಮಸ್ಥರ ವಿರೋಧವಿದ್ದರೆ ಈ ಎರಡು ಕ್ರಷರ್ಗಳ ಪರವಾನಗಿ ನವೀಕರಿಸುವುದಿಲ್ಲ. ಅಲ್ಲದೆ ಮುಂದೆ ಈ ಪ್ರದೇಶದಲ್ಲಿ ಹೊಸ ಗಣಿಗಾರಿಕೆಗೆ ಪರವಾನಗಿ ನೀಡದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಪತ್ರ ಬರೆಯಲಾಗುವುದು ಎಂದರು.<br /> <br /> ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಯೋಜನೆ ಇನ್ನೂ ಹಳ್ಳಿಯನ್ನು ತಲುಪುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಮಾತನಾಡಿಸಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥ ರಮೇಶ್ ಬೋಧಿ ಆರೋಪಿಸಿದರು. ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರಭಾರ ಅಭಿವೃದ್ಧಿ ಅಧಿಕಾರಿ ಡಾ. ಮನೋಹರ ಉದ್ಯೋಗ ಖಾತ್ರಿ ಯೋಜನೆ, ಮಾರ್ಗಸೂಚಿ ಪ್ರಕಾರ ಕೆಲಸ ನಡೆಯುತ್ತಿದೆ.<br /> ಯೋಜನೆ ಅನುಷ್ಠಾನ ವಿಳಂಬದ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.<br /> <br /> ಶಿಕ್ಷಣ ಇಲಾಖೆಯ ಬಗ್ಗೆ ಮಾಹಿತಿ ನೀಡಿದ ಮಾರ್ಗರೇಟ್ ಪಿಂಟೊ ಜುಲೈನಲ್ಲಿ ಪ್ರಾಥಮಿಕ ಶಿಕ್ಷಕಕರ ಕೌನ್ಸಿಲಿಂಗ್ ನಡೆಯಲಿದ್ದು, ಶಿಕ್ಷಕರ ಕೊರೆತೆಯಿರುವ ಶಾಲೆಗಳ ಸಮಸ್ಯೆ ಬಗೆಹರಿಯಲಿದೆ. ಶಿಕ್ಷಕರ ಕೊರತೆ ನೀಗಿಸಲು ಗುತ್ತಿಯಾಧಾರದಲ್ಲೂ ನೇಮಕ ನಡೆಯಲಿದೆ. ಭುವನಜ್ಯೋತಿ ರೆಸಿಡೆನ್ಸಿಯಲ್ ಶಾಲೆಯವರು ಕೂಡ ಶಿಕ್ಷಕರನ್ನು ಒದಗಿಸುತ್ತಿದ್ದಾರೆ ಎಂದರು.<br /> <br /> ಇಂಟರ್ನೆಟ್ ಸಮಸ್ಯೆಯಿಂದಾಗಿ ಪಡಿತರ ಚೀಟಿ ಅನ್ಲೈನ್ ನೋಂದಾಣಿ ಪ್ರಕ್ರಿಯೆ ವಿಳಂಬವಾಗುವುದನ್ನು ತಪ್ಪಿಸಲು ಶೀಘ್ರದಲ್ಲಿ ಬ್ರಾಡ್ಬ್ಯಾಂಡ್ ಸೌಲಭ್ಯ ಒದಗಿಸಿ ಅವ್ಯವಸ್ಥೆ ಸರಿಪಡಿಸಲಾಗುವುದು ಎಂದು ಅಭಿವೃದ್ಧಿ ಅಧಿಕಾರಿ ಸಭೆಗೆ ತಿಳಿಸಿದರು.<br /> <br /> ಜಿಲ್ಲಾ ಪಂಚಾಯತಿ ಸದಸ್ಯೆ ಅಂಬಿಕಾ.ಡಿ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ರುಕ್ಕಯ್ಯ ಪೂಜಾರಿ, ನೋಡೆಲ್ ಅಧಿಕಾರಿ ಜಲಾನಯನ ಇಲಾಖೆಯ ಯುವರಾಜ್, ಕಾರ್ಯದರ್ಶಿ ಸುನಂದ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>