<p><strong>ವಾಷಿಂಗ್ಟನ್ (ಪಿಟಿಐ):</strong> ಸದ್ಯದ ಜಾಗತಿಕ ಆರ್ಥಿಕ ಅಸ್ಥಿರತೆಗೆ `ಯೂರೋಪ್~ ಕೇಂದ್ರ ಬಿಂದುವಾಗಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ತಜ್ಞರು ಅಭಿಪ್ರಾಯಪಟ್ಟಿದ್ದಾರೆ. <br /> <br /> ಯೂರೋಪ್ ಒಕ್ಕೂಟದಲ್ಲಿ ಕಾಣಿಸಿಕೊಂಡಿರುವ ಸಾಲ ಮತ್ತು ಬ್ಯಾಂಕಿಂಗ್ ಬಿಕ್ಕಟ್ಟು ಜಗತ್ತಿನ ಇತರ ಭಾಗಗಳಿಗೂ ತೀವ್ರವಾಗಿ ವ್ಯಾಪಿಸಿದೆ. ಇದರ ಪರಿಣಾಮಗಳು ಪ್ರವರ್ಧಮಾನಕ್ಕೆ ಬರುತ್ತಿರುವ ಮತ್ತು ಬಡ ದೇಶಗಳ ಮೇಲೆ ಹೆಚ್ಚಾಗಿ ಕಾಣಿಸಿಕೊಂಡಿವೆ ಎಂದು ಸಿಂಗಪುರದ ಹಣಕಾಸು ಸಚಿವ ಟಿ. ಷಣ್ಮುಗರತ್ನಂ ಅಭಿಪ್ರಾಯಪಟ್ಟಿದ್ದಾರೆ. <br /> <br /> ಸದ್ಯಕ್ಕೆ, ಜಗತ್ತು ದುರ್ಬಲ ಆರ್ಥಿಕತೆಯ ಜತೆಗೆ ತೀವ್ರತರವಾದ ಹಣಕಾಸು ಬಿಕ್ಕಟ್ಟು ಎದುರಿಸುತ್ತಿದೆ. ಈ ಪರಿಸ್ಥಿತಿಯು ಹೂಡಿಕೆದಾರರ ಆತ್ಮವಿಶ್ವಾಸವನ್ನು ಸಂಪೂರ್ಣವಾಗಿ ಕುಗ್ಗಿಸಿದೆ. ಆರ್ಥಿಕ ಆತ್ಮವಿಶ್ವಾಸದ ಕೊರತೆಯಿಂದ ಸಮರ್ಪಕವಾದ ನೀತಿಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ, ವಿಶ್ವಾಸಾರ್ಹತೆಯ ಕೊರತೆ ಗಮನಾರ್ಹವಾಗಿ ಕಾಣುತ್ತಿದೆ ಎಂದರು. ಇಲ್ಲಿ ನಡೆದ `ಐಎಂಎಫ್~ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.<br /> <br /> ಯೂರೋಪ್ ಒಕ್ಕೂಟದಲ್ಲಿ ಕಾಣಿಸಿಕೊಂಡಿರುವುದು ಇಡೀ ವಿಶ್ವದ ಸಮಸ್ಯೆ. ಯಾವುದೇ ಒಂದು ದೇಶವೂ ಇದರ ಪರಿಣಾಮಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಅಂತರರಾಷ್ಟೀಯ ಸಮುದಾಯ ಜಾಗತಿಕ ಆರ್ಥಿಕ ಬಿಕ್ಕಟ್ಟು ತಡೆಗೆ ಸಂಘಟಿತ ಪ್ರಯತ್ನ ನಡೆಸಬೇಕು ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್ (ಪಿಟಿಐ):</strong> ಸದ್ಯದ ಜಾಗತಿಕ ಆರ್ಥಿಕ ಅಸ್ಥಿರತೆಗೆ `ಯೂರೋಪ್~ ಕೇಂದ್ರ ಬಿಂದುವಾಗಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ತಜ್ಞರು ಅಭಿಪ್ರಾಯಪಟ್ಟಿದ್ದಾರೆ. <br /> <br /> ಯೂರೋಪ್ ಒಕ್ಕೂಟದಲ್ಲಿ ಕಾಣಿಸಿಕೊಂಡಿರುವ ಸಾಲ ಮತ್ತು ಬ್ಯಾಂಕಿಂಗ್ ಬಿಕ್ಕಟ್ಟು ಜಗತ್ತಿನ ಇತರ ಭಾಗಗಳಿಗೂ ತೀವ್ರವಾಗಿ ವ್ಯಾಪಿಸಿದೆ. ಇದರ ಪರಿಣಾಮಗಳು ಪ್ರವರ್ಧಮಾನಕ್ಕೆ ಬರುತ್ತಿರುವ ಮತ್ತು ಬಡ ದೇಶಗಳ ಮೇಲೆ ಹೆಚ್ಚಾಗಿ ಕಾಣಿಸಿಕೊಂಡಿವೆ ಎಂದು ಸಿಂಗಪುರದ ಹಣಕಾಸು ಸಚಿವ ಟಿ. ಷಣ್ಮುಗರತ್ನಂ ಅಭಿಪ್ರಾಯಪಟ್ಟಿದ್ದಾರೆ. <br /> <br /> ಸದ್ಯಕ್ಕೆ, ಜಗತ್ತು ದುರ್ಬಲ ಆರ್ಥಿಕತೆಯ ಜತೆಗೆ ತೀವ್ರತರವಾದ ಹಣಕಾಸು ಬಿಕ್ಕಟ್ಟು ಎದುರಿಸುತ್ತಿದೆ. ಈ ಪರಿಸ್ಥಿತಿಯು ಹೂಡಿಕೆದಾರರ ಆತ್ಮವಿಶ್ವಾಸವನ್ನು ಸಂಪೂರ್ಣವಾಗಿ ಕುಗ್ಗಿಸಿದೆ. ಆರ್ಥಿಕ ಆತ್ಮವಿಶ್ವಾಸದ ಕೊರತೆಯಿಂದ ಸಮರ್ಪಕವಾದ ನೀತಿಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ, ವಿಶ್ವಾಸಾರ್ಹತೆಯ ಕೊರತೆ ಗಮನಾರ್ಹವಾಗಿ ಕಾಣುತ್ತಿದೆ ಎಂದರು. ಇಲ್ಲಿ ನಡೆದ `ಐಎಂಎಫ್~ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.<br /> <br /> ಯೂರೋಪ್ ಒಕ್ಕೂಟದಲ್ಲಿ ಕಾಣಿಸಿಕೊಂಡಿರುವುದು ಇಡೀ ವಿಶ್ವದ ಸಮಸ್ಯೆ. ಯಾವುದೇ ಒಂದು ದೇಶವೂ ಇದರ ಪರಿಣಾಮಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಅಂತರರಾಷ್ಟೀಯ ಸಮುದಾಯ ಜಾಗತಿಕ ಆರ್ಥಿಕ ಬಿಕ್ಕಟ್ಟು ತಡೆಗೆ ಸಂಘಟಿತ ಪ್ರಯತ್ನ ನಡೆಸಬೇಕು ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>