<p><strong>ಮೈಸೂರು</strong>: ‘ಜನಸಂಖ್ಯೆಗಿಂತಲೂ ಇಂಗಾಲದ ಡೈಆಕ್ಸೈಡ್ ಪ್ರಮಾಣ ಹೆಚ್ಚಾಗುತ್ತಿದ್ದು, ಇದರಿಂದ ಜಾಗತಿಕ ತಾಪಮಾನದಲ್ಲಿ ಹೆಚ್ಚಳ ಉಂಟಾಗುತ್ತಿದೆ’ ಎಂದು ಎನ್ಐಇ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಶ್ಯಾಂ ಸುಂದರ ಸುಬ್ಬರಾವ್ ಆತಂಕ ವ್ಯಕ್ತಪಡಿಸಿದರು.<br /> <br /> ಎಂಜಿನಿಯರ್ ಸಂಸ್ಥೆ ವತಿಯಿಂದ ಬುಧವಾರ ಏರ್ಪಡಿಸಿದ್ದ ‘ಸುಸ್ಥಿರ ಅಭಿವೃದ್ಧಿಗೆ ನವೀಕರಿಸ ಬಹುದಾದ ಶಕ್ತಿ ಹಾಗೂ ಪರಿಸರ ಸ್ನೇಹಿ ತಂತ್ರಜ್ಞಾನಗಳು’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ‘ಪ್ರಸ್ತುತ ಶೇ 64.7 ಉಷ್ಣ ವಿದ್ಯುಚ್ಛಕ್ತಿ, ಶೇ 24 ಹೈಡ್ರೋಜನ್, ಶೇ 2.7 ನ್ಯೂಕ್ಲಿಯರ್ ಹಾಗೂ ನವೀಕರಿಸಬಹುದಾದ ಮೂಲಗಳಿಂದ ಶೇ 7.7ರಷ್ಟು ವಿದ್ಯುಚ್ಛಕ್ತಿಯನ್ನು ಬಳಸಲಾಗುತ್ತಿದೆ. ಆದರೆ ಭಾರತೀಯರಲ್ಲಿ ಇಂಧನದ ಬಳಕೆ ಕುರಿತು ಬದ್ಧತೆ ಇಲ್ಲದಿರುವುದು ಬೇಸರದ ಸಂಗತಿ’ ಎಂದರು.<br /> <br /> ‘ಒಂದೆಡೆ ಪರಿಸರದಲ್ಲಿ ಸ್ವಾಭಾವಿಕ ಸಂಪನ್ಮೂಲಗಳು ಕಡಿಮೆ ಆಗುತ್ತಿವೆ. ಇನ್ನೊಂದೆಡೆ ಇಂಗಾಲದ ಡೈಆಕ್ಸೈಡ್ನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ನವೀಕರಿಸಬಹುದಾದ ಸಂಪನ್ಮೂಲಗಳ ಬಳಕೆ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಶಕ್ತಿ ಮೂಲಗಳಾದ ಬಯೋ ಗ್ಯಾಸ್, ಸೌರಶಕ್ತಿ, ಪವನ ಶಕ್ತಿ, ಮಳೆ ನೀರು ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವತ್ತ ಗಮನ ಹರಿಸಬೇಕಾಗಿದೆ’ ಎಂದು ಹೇಳಿದರು.<br /> <br /> ‘ಮೈಸೂರು ನಗರದಲ್ಲಿ ಪ್ರತಿ ನಿತ್ಯ 400 ಟನ್ ಘನ ತ್ಯಾಜ್ಯ ವಸ್ತು ಉತ್ಪತ್ತಿಯಾಗುತ್ತಿದೆ. ತಂತ್ರಜ್ಞಾನ ಬಳಕೆಯಿಂದ ಈ ತ್ಯಾಜ್ಯವನ್ನು ಶಕ್ತಿಯಾಗಿ ಬಳಸಬಹುದು. ಅದೇ ರೀತಿ ಮನೆಯಲ್ಲಿ ಉತ್ಪತ್ತಿ ಆಗುವ ಘನ ತ್ಯಾಜ್ಯದಿಂದ ಅಡುಗೆ ಗ್ಯಾಸ್ ಪಡೆಯಬಹುದು’ ಎಂದು ತಿಳಿಸಿದರು.ಎಂಜಿನಿಯರ್ಸ್ ಸಂಸ್ಥೆ ಅಧ್ಯಕ್ಷ ಎ.ಎಸ್.ಸತೀಶ್, ಕಾರ್ಯಕ್ರಮ ಸಂಚಾಲಕ ಡಾ.ರಾಜಾರಾಂ ಶಾಸ್ತ್ರಿ, ಭಾರದ್ವಾಜ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಜನಸಂಖ್ಯೆಗಿಂತಲೂ ಇಂಗಾಲದ ಡೈಆಕ್ಸೈಡ್ ಪ್ರಮಾಣ ಹೆಚ್ಚಾಗುತ್ತಿದ್ದು, ಇದರಿಂದ ಜಾಗತಿಕ ತಾಪಮಾನದಲ್ಲಿ ಹೆಚ್ಚಳ ಉಂಟಾಗುತ್ತಿದೆ’ ಎಂದು ಎನ್ಐಇ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಶ್ಯಾಂ ಸುಂದರ ಸುಬ್ಬರಾವ್ ಆತಂಕ ವ್ಯಕ್ತಪಡಿಸಿದರು.<br /> <br /> ಎಂಜಿನಿಯರ್ ಸಂಸ್ಥೆ ವತಿಯಿಂದ ಬುಧವಾರ ಏರ್ಪಡಿಸಿದ್ದ ‘ಸುಸ್ಥಿರ ಅಭಿವೃದ್ಧಿಗೆ ನವೀಕರಿಸ ಬಹುದಾದ ಶಕ್ತಿ ಹಾಗೂ ಪರಿಸರ ಸ್ನೇಹಿ ತಂತ್ರಜ್ಞಾನಗಳು’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ‘ಪ್ರಸ್ತುತ ಶೇ 64.7 ಉಷ್ಣ ವಿದ್ಯುಚ್ಛಕ್ತಿ, ಶೇ 24 ಹೈಡ್ರೋಜನ್, ಶೇ 2.7 ನ್ಯೂಕ್ಲಿಯರ್ ಹಾಗೂ ನವೀಕರಿಸಬಹುದಾದ ಮೂಲಗಳಿಂದ ಶೇ 7.7ರಷ್ಟು ವಿದ್ಯುಚ್ಛಕ್ತಿಯನ್ನು ಬಳಸಲಾಗುತ್ತಿದೆ. ಆದರೆ ಭಾರತೀಯರಲ್ಲಿ ಇಂಧನದ ಬಳಕೆ ಕುರಿತು ಬದ್ಧತೆ ಇಲ್ಲದಿರುವುದು ಬೇಸರದ ಸಂಗತಿ’ ಎಂದರು.<br /> <br /> ‘ಒಂದೆಡೆ ಪರಿಸರದಲ್ಲಿ ಸ್ವಾಭಾವಿಕ ಸಂಪನ್ಮೂಲಗಳು ಕಡಿಮೆ ಆಗುತ್ತಿವೆ. ಇನ್ನೊಂದೆಡೆ ಇಂಗಾಲದ ಡೈಆಕ್ಸೈಡ್ನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ನವೀಕರಿಸಬಹುದಾದ ಸಂಪನ್ಮೂಲಗಳ ಬಳಕೆ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಶಕ್ತಿ ಮೂಲಗಳಾದ ಬಯೋ ಗ್ಯಾಸ್, ಸೌರಶಕ್ತಿ, ಪವನ ಶಕ್ತಿ, ಮಳೆ ನೀರು ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವತ್ತ ಗಮನ ಹರಿಸಬೇಕಾಗಿದೆ’ ಎಂದು ಹೇಳಿದರು.<br /> <br /> ‘ಮೈಸೂರು ನಗರದಲ್ಲಿ ಪ್ರತಿ ನಿತ್ಯ 400 ಟನ್ ಘನ ತ್ಯಾಜ್ಯ ವಸ್ತು ಉತ್ಪತ್ತಿಯಾಗುತ್ತಿದೆ. ತಂತ್ರಜ್ಞಾನ ಬಳಕೆಯಿಂದ ಈ ತ್ಯಾಜ್ಯವನ್ನು ಶಕ್ತಿಯಾಗಿ ಬಳಸಬಹುದು. ಅದೇ ರೀತಿ ಮನೆಯಲ್ಲಿ ಉತ್ಪತ್ತಿ ಆಗುವ ಘನ ತ್ಯಾಜ್ಯದಿಂದ ಅಡುಗೆ ಗ್ಯಾಸ್ ಪಡೆಯಬಹುದು’ ಎಂದು ತಿಳಿಸಿದರು.ಎಂಜಿನಿಯರ್ಸ್ ಸಂಸ್ಥೆ ಅಧ್ಯಕ್ಷ ಎ.ಎಸ್.ಸತೀಶ್, ಕಾರ್ಯಕ್ರಮ ಸಂಚಾಲಕ ಡಾ.ರಾಜಾರಾಂ ಶಾಸ್ತ್ರಿ, ಭಾರದ್ವಾಜ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>