<p>ವಿಜಾಪುರ: `ಜಾಗತೀಕರಣದ ಬೆನ್ನು ಹತ್ತಿರುವ ನಾವು ನಮ್ಮ ಸ್ಥಳೀಯ ಸಂಸ್ಕೃತಿ ಮರೆತು ಮಾನವೀಯತೆಯನ್ನು ಕಳೆದುಕೊಳ್ಳುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಜನಪದ ಪರಂಪರೆ ಹಾಗೂ ಸಾಹಿತ್ಯವನ್ನು ಪುನರ್ ಮೌಲ್ಯೀಕರಣ ಮಾಡುವ ಅವಶ್ಯಕತೆ ಇದೆ~ ಎಂದು ಪ್ರೊ. ಸೋಮಶೇಖರ ಇಮ್ರೋಪುರ ಅವರು ಅಭಿಪ್ರಾಯಪಟ್ಟರು.<br /> <br /> ಇಲ್ಲಿಯ ಮಹಿಳಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದಿಂದ ಕರ್ನಾಟಕ ಜಾನಪದ ಅಕಾಡೆಮಿಯ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಿಳಾ ಜಾನಪದ ಕುರಿತ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಕಳೆದ ಶತಮಾನದಿಂದ ಮಹಿಳಾ ಜಾನಪದ ಅಧ್ಯಯನದ ಬಗ್ಗೆ ಜಾಗತಿಕ ಮಟ್ಟದಲ್ಲಿ ಗಂಭೀರವಾದ ಚಿಂತನೆ ನಡೆಯುತ್ತಿದೆ. ಆದರೂ, ಜಾನಪದ ಸಂಸ್ಕೃತಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಚನಾತ್ಮಕ ಕೆಲಸಗಳು ಆಗಿಲ್ಲ~ ಎಂದು ವಿಷಾದಿಸಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ಕುಲಪತಿ ಡಾ.ಮೀನಾ ಚಂದಾವರಕರ, ಮಾಹಿತಿ ತಂತ್ರಜ್ಞಾನದ ಯುಗದೊಂದಿಗೆ ನಮ್ಮ ಜಾನಪದ ಕಲೆಗಳು ಹೊಂದಿಕೊಂಡು ಹೋಗುವ ಅನಿವಾರ್ಯತೆ ಉಂಟಾಗಿದೆ. ದೇಸಿ ಸಂಸ್ಕೃತಿಯ ಅನನ್ಯತೆಯನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದರು.<br /> <br /> ಮಹಿಳಾ ವಿವಿ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ವಿಜಯಶ್ರಿ ಸಬರದ, ಡಾ.ಮಹೇಶ ಚಿಂತಾಮಣಿ ವೇದಿಕೆಯಲ್ಲಿದ್ದರು.<br /> <br /> ಕಾಳವ್ವ ವಾಲಿ, ಮಹಾದೇವಿ ಜೈನಾಪುರ, ಅನ್ನಪೂರ್ಣಾ ವಾಲಿ, ಡಾ. ಬಸವರಾಜ ಮಲಶೆಟ್ಟಿ, ಬಿ.ಆರ್. ಪೊಲೀಸ್ ಪಾಟೀಲ ಜನಪದ ಗೀತೆಗಳನ್ನು ಹಾಡಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಾಪುರ: `ಜಾಗತೀಕರಣದ ಬೆನ್ನು ಹತ್ತಿರುವ ನಾವು ನಮ್ಮ ಸ್ಥಳೀಯ ಸಂಸ್ಕೃತಿ ಮರೆತು ಮಾನವೀಯತೆಯನ್ನು ಕಳೆದುಕೊಳ್ಳುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಜನಪದ ಪರಂಪರೆ ಹಾಗೂ ಸಾಹಿತ್ಯವನ್ನು ಪುನರ್ ಮೌಲ್ಯೀಕರಣ ಮಾಡುವ ಅವಶ್ಯಕತೆ ಇದೆ~ ಎಂದು ಪ್ರೊ. ಸೋಮಶೇಖರ ಇಮ್ರೋಪುರ ಅವರು ಅಭಿಪ್ರಾಯಪಟ್ಟರು.<br /> <br /> ಇಲ್ಲಿಯ ಮಹಿಳಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದಿಂದ ಕರ್ನಾಟಕ ಜಾನಪದ ಅಕಾಡೆಮಿಯ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಿಳಾ ಜಾನಪದ ಕುರಿತ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಕಳೆದ ಶತಮಾನದಿಂದ ಮಹಿಳಾ ಜಾನಪದ ಅಧ್ಯಯನದ ಬಗ್ಗೆ ಜಾಗತಿಕ ಮಟ್ಟದಲ್ಲಿ ಗಂಭೀರವಾದ ಚಿಂತನೆ ನಡೆಯುತ್ತಿದೆ. ಆದರೂ, ಜಾನಪದ ಸಂಸ್ಕೃತಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಚನಾತ್ಮಕ ಕೆಲಸಗಳು ಆಗಿಲ್ಲ~ ಎಂದು ವಿಷಾದಿಸಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ಕುಲಪತಿ ಡಾ.ಮೀನಾ ಚಂದಾವರಕರ, ಮಾಹಿತಿ ತಂತ್ರಜ್ಞಾನದ ಯುಗದೊಂದಿಗೆ ನಮ್ಮ ಜಾನಪದ ಕಲೆಗಳು ಹೊಂದಿಕೊಂಡು ಹೋಗುವ ಅನಿವಾರ್ಯತೆ ಉಂಟಾಗಿದೆ. ದೇಸಿ ಸಂಸ್ಕೃತಿಯ ಅನನ್ಯತೆಯನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದರು.<br /> <br /> ಮಹಿಳಾ ವಿವಿ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ವಿಜಯಶ್ರಿ ಸಬರದ, ಡಾ.ಮಹೇಶ ಚಿಂತಾಮಣಿ ವೇದಿಕೆಯಲ್ಲಿದ್ದರು.<br /> <br /> ಕಾಳವ್ವ ವಾಲಿ, ಮಹಾದೇವಿ ಜೈನಾಪುರ, ಅನ್ನಪೂರ್ಣಾ ವಾಲಿ, ಡಾ. ಬಸವರಾಜ ಮಲಶೆಟ್ಟಿ, ಬಿ.ಆರ್. ಪೊಲೀಸ್ ಪಾಟೀಲ ಜನಪದ ಗೀತೆಗಳನ್ನು ಹಾಡಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>