<p>ನವದೆಹಲಿ (ಪಿಟಿಐ): ಕಾಬೂಲ್ನಲ್ಲಿ ಭಾನುವಾರ ನಡೆದ ತಾಲಿಬಾನ್ ಸರಣಿ ದಾಳಿಗಳ ಹಿನ್ನೆಲೆಯಲ್ಲಿ ಜಾಗರೂಕರಾಗಿರುವಂತೆ ಸೇನಾಪಡೆಗಳ ಮುಖ್ಯಸ್ಥರಿಗೆ ರಕ್ಷಣಾ ಸಚಿವ ಎ.ಕೆ.ಆಂಟನಿ ಎಚ್ಚರಿಕೆ ನೀಡಿದ್ದಾರೆ.<br /> <br /> ಸೋಮವಾರ ಇಲ್ಲಿ ಆರಂಭವಾದ ಉನ್ನತ ಸೇನಾ ಕಮಾಂಡರ್ಗಳ ಮೂರು ದಿನಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು, ಆಫ್ಘಾನಿಸ್ತಾನದ ಬೆಳವಣಿಗೆ ಹಿನ್ನೆಲೆಯಲ್ಲಿ ಅತ್ಯಂತ ಎಚ್ಚರಿಕೆಯಿಂದ ಇದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.<br /> <br /> ಆಫ್ಘಾನಿಸ್ತಾನ, ಬಾಹ್ಯ ಶಕ್ತಿಗಳ ಮಧ್ಯ ಪ್ರವೇಶದಿಂದ ಸಂಪೂರ್ಣ ಮುಕ್ತವಾಗಿ ಸ್ಥಿರ ಹಾಗೂ ಸದೃಢ ರಾಷ್ಟ್ರವಾಗಿ ಮಾರ್ಪಡಲು ಅಗತ್ಯವಾದ ಎಲ್ಲ ನೆರವನ್ನೂ ಭಾರತ ನೀಡಲಿದೆ ಎಂದರು.<br /> <br /> ಈ ಮಧ್ಯೆ, ಸೇನಾಪಡೆಗಳ ರೆಜಿಮೆಂಟ್ಗಳಲ್ಲಿ ಕೇವಲ ನಾಲ್ಕು ದಿನಗಳಿಗಾಗುವಷ್ಟು ಆಯುಧಗಳು ಮಾತ್ರ ಸಂಗ್ರಹಗೊಂಡಿವೆ ಎಂಬ ವರದಿ ತಳ್ಳಿಹಾಕಿದ ಆಂಟನಿ, ಹಿಂದಿನ ದಿನಗಳಿಗೆ ಹೋಲಿಸಿದಲ್ಲಿ ಭಾರತ ಹೆಚ್ಚು ದೃಢವಾಗಿದೆ ಎಂದರು.<br /> <br /> ದೇಶದ ರಕ್ಷಣೆಗೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮ್ಮೇಳನದಲ್ಲಿ ಕಮಾಂಡರ್ಗಳು ಪರಾಮರ್ಶೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಕಾಬೂಲ್ನಲ್ಲಿ ಭಾನುವಾರ ನಡೆದ ತಾಲಿಬಾನ್ ಸರಣಿ ದಾಳಿಗಳ ಹಿನ್ನೆಲೆಯಲ್ಲಿ ಜಾಗರೂಕರಾಗಿರುವಂತೆ ಸೇನಾಪಡೆಗಳ ಮುಖ್ಯಸ್ಥರಿಗೆ ರಕ್ಷಣಾ ಸಚಿವ ಎ.ಕೆ.ಆಂಟನಿ ಎಚ್ಚರಿಕೆ ನೀಡಿದ್ದಾರೆ.<br /> <br /> ಸೋಮವಾರ ಇಲ್ಲಿ ಆರಂಭವಾದ ಉನ್ನತ ಸೇನಾ ಕಮಾಂಡರ್ಗಳ ಮೂರು ದಿನಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು, ಆಫ್ಘಾನಿಸ್ತಾನದ ಬೆಳವಣಿಗೆ ಹಿನ್ನೆಲೆಯಲ್ಲಿ ಅತ್ಯಂತ ಎಚ್ಚರಿಕೆಯಿಂದ ಇದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.<br /> <br /> ಆಫ್ಘಾನಿಸ್ತಾನ, ಬಾಹ್ಯ ಶಕ್ತಿಗಳ ಮಧ್ಯ ಪ್ರವೇಶದಿಂದ ಸಂಪೂರ್ಣ ಮುಕ್ತವಾಗಿ ಸ್ಥಿರ ಹಾಗೂ ಸದೃಢ ರಾಷ್ಟ್ರವಾಗಿ ಮಾರ್ಪಡಲು ಅಗತ್ಯವಾದ ಎಲ್ಲ ನೆರವನ್ನೂ ಭಾರತ ನೀಡಲಿದೆ ಎಂದರು.<br /> <br /> ಈ ಮಧ್ಯೆ, ಸೇನಾಪಡೆಗಳ ರೆಜಿಮೆಂಟ್ಗಳಲ್ಲಿ ಕೇವಲ ನಾಲ್ಕು ದಿನಗಳಿಗಾಗುವಷ್ಟು ಆಯುಧಗಳು ಮಾತ್ರ ಸಂಗ್ರಹಗೊಂಡಿವೆ ಎಂಬ ವರದಿ ತಳ್ಳಿಹಾಕಿದ ಆಂಟನಿ, ಹಿಂದಿನ ದಿನಗಳಿಗೆ ಹೋಲಿಸಿದಲ್ಲಿ ಭಾರತ ಹೆಚ್ಚು ದೃಢವಾಗಿದೆ ಎಂದರು.<br /> <br /> ದೇಶದ ರಕ್ಷಣೆಗೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮ್ಮೇಳನದಲ್ಲಿ ಕಮಾಂಡರ್ಗಳು ಪರಾಮರ್ಶೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>