<p>ಕಡೂರು: ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ವಿಶ್ವಕನ್ನಡ ಸಮ್ಮೇಳನದಲ್ಲಿ ಸವಿತಾ ಸಮಾಜದ ಜನಪದ ಗಾಯಕ ಹಳ್ಳಿ ಶ್ರೀನಿವಾಸ್ ಅವರನ್ನು ಸಂಗೀತ ನಿರ್ದೇಶಕ ಹಂಸಲೇಖ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸವಿತಾ ಸಮಾಜ ಮುಖಂಡರು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. <br /> <br /> ಮುಖಂಡರು ಮರವಂಜಿ ವೃತ್ತದಿಂದ ತಾಲ್ಲೂಕು ಕಚೇರಿಯವರೆಗೆ ಕಾಲು ನಡಿಗೆಯಲ್ಲಿ ಪ್ರತಿಭಟನೆ ನಡೆಸಿ ಹಂಸಲೇಖಾ ವಿರುದ್ಧ ಘೋಷಣೆ ಕೂಗಿದರು. <br /> <br /> ‘ಎಲ್ಲಾ ಶುಭ ಸಮಾರಂಭಗಳಿಗೂ ಸಮಾಜದ ಸಹಾಯ ಪಡೆಯುತ್ತಾರೆ. ನಮ್ಮ ವಿರುದ್ಧವೇ ಅಪಪ್ರಚಾರ ಮಾಡುತ್ತಾರೆ ಇನ್ನು ಮುಂದೆ ಇದನ್ನು ಸಹಿಸುವುದಿಲ್ಲ’ ಎಂದು ಜಿಲ್ಲಾ ಸವಿತಾ ಸಮಾಜದ ಉಪಾಧ್ಯಕ್ಷ ಬಿ.ಎಲ್.ಶ್ರೀನಿವಾಸ್ ತಿಳಿಸಿದರು.<br /> <br /> ‘ನಮ್ಮ ಸಮಾಜವನ್ನು ಶತಮಾನಗಳಿಂದ ಶೋಷಣೆ ಮಾಡುತ್ತಾ ಬಂದಿದ್ದು, ಈಗಲೂ ಶೋಷಣೆಗೆ ಪ್ರಯತ್ನಿಸುತ್ತಿದ್ದಾರೆ’ ಎಂದರು.<br /> <br /> ತಾಲ್ಲೂಕು ಸವಿತಾ ಸಮಾಜದ ಅಧ್ಯಕ್ಷ ಎಸ್.ಬಾಲು ಮಾತನಾಡಿ, ಸಮಾಜದ ವಿರುದ್ಧ ನಿಂದನೆಗಳು ತಕ್ಷಣ ನಿಲ್ಲಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದರು.<br /> <br /> ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಬಿ.ಆರ್.ರೂಪಾ ಅವರಿಗೆ ಮನವಿ ಸಲ್ಲಿಸಿದರು. <br /> <br /> ರಾಜ್ಯ ಸಹಕಾರ್ಯದರ್ಶಿ ಹಿ.ಶಿ.ರವಿಕುಮಾರ್, ಎನ್.ವೆಂಕಟೇಶ್, ಕೆ.ಟಿ.ನವೀನ್, ಎಂ.ಎಚ್.ಪ್ರಕಾಶ್, ಎನ್.ದೀಪು, ಸುನೀಲ್, ಉಮೇಶ್, ಬಿ.ಆರ್.ಜಗದೀಶ್, ಪ್ರಕಾಶ್, ರಾಜು, ಲೋಕೇಶ್ ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಡೂರು: ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ವಿಶ್ವಕನ್ನಡ ಸಮ್ಮೇಳನದಲ್ಲಿ ಸವಿತಾ ಸಮಾಜದ ಜನಪದ ಗಾಯಕ ಹಳ್ಳಿ ಶ್ರೀನಿವಾಸ್ ಅವರನ್ನು ಸಂಗೀತ ನಿರ್ದೇಶಕ ಹಂಸಲೇಖ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸವಿತಾ ಸಮಾಜ ಮುಖಂಡರು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. <br /> <br /> ಮುಖಂಡರು ಮರವಂಜಿ ವೃತ್ತದಿಂದ ತಾಲ್ಲೂಕು ಕಚೇರಿಯವರೆಗೆ ಕಾಲು ನಡಿಗೆಯಲ್ಲಿ ಪ್ರತಿಭಟನೆ ನಡೆಸಿ ಹಂಸಲೇಖಾ ವಿರುದ್ಧ ಘೋಷಣೆ ಕೂಗಿದರು. <br /> <br /> ‘ಎಲ್ಲಾ ಶುಭ ಸಮಾರಂಭಗಳಿಗೂ ಸಮಾಜದ ಸಹಾಯ ಪಡೆಯುತ್ತಾರೆ. ನಮ್ಮ ವಿರುದ್ಧವೇ ಅಪಪ್ರಚಾರ ಮಾಡುತ್ತಾರೆ ಇನ್ನು ಮುಂದೆ ಇದನ್ನು ಸಹಿಸುವುದಿಲ್ಲ’ ಎಂದು ಜಿಲ್ಲಾ ಸವಿತಾ ಸಮಾಜದ ಉಪಾಧ್ಯಕ್ಷ ಬಿ.ಎಲ್.ಶ್ರೀನಿವಾಸ್ ತಿಳಿಸಿದರು.<br /> <br /> ‘ನಮ್ಮ ಸಮಾಜವನ್ನು ಶತಮಾನಗಳಿಂದ ಶೋಷಣೆ ಮಾಡುತ್ತಾ ಬಂದಿದ್ದು, ಈಗಲೂ ಶೋಷಣೆಗೆ ಪ್ರಯತ್ನಿಸುತ್ತಿದ್ದಾರೆ’ ಎಂದರು.<br /> <br /> ತಾಲ್ಲೂಕು ಸವಿತಾ ಸಮಾಜದ ಅಧ್ಯಕ್ಷ ಎಸ್.ಬಾಲು ಮಾತನಾಡಿ, ಸಮಾಜದ ವಿರುದ್ಧ ನಿಂದನೆಗಳು ತಕ್ಷಣ ನಿಲ್ಲಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದರು.<br /> <br /> ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಬಿ.ಆರ್.ರೂಪಾ ಅವರಿಗೆ ಮನವಿ ಸಲ್ಲಿಸಿದರು. <br /> <br /> ರಾಜ್ಯ ಸಹಕಾರ್ಯದರ್ಶಿ ಹಿ.ಶಿ.ರವಿಕುಮಾರ್, ಎನ್.ವೆಂಕಟೇಶ್, ಕೆ.ಟಿ.ನವೀನ್, ಎಂ.ಎಚ್.ಪ್ರಕಾಶ್, ಎನ್.ದೀಪು, ಸುನೀಲ್, ಉಮೇಶ್, ಬಿ.ಆರ್.ಜಗದೀಶ್, ಪ್ರಕಾಶ್, ರಾಜು, ಲೋಕೇಶ್ ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>