<p><strong>ಬೆಂಗಳೂರು: </strong> `ದೇಶ ಮತ್ತು ರಾಜ್ಯದಲ್ಲಿ ಇಂದು ಜಾತಿ ಆಧಾರದಲ್ಲಿ ರಾಜಕಾರಣ ನಡೆಯುತ್ತಿದ್ದು, ಈ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ~ ಎಂದು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟರು.<br /> <br /> ವಂಚನೆ ತಪಾಸಕರ ಸಂಸ್ಥೆಯ (ಅಸೋಸಿಯೇಷನ್ ಆಫ್ ಸರ್ಟಿಫೈಡ್ ಫ್ರಾಡ್ ಎಗ್ಸಾಮೈನರ್ಸ್- ಎಸಿಎಫ್ಇ) ಬೆಂಗಳೂರು ಶಾಖೆಯು ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಎರಡನೇ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, `ಜಾತಿ ಆಧಾರದಲ್ಲಿ ರಾಜಕಾರಣ ಮಾಡುವುದು ತಪ್ಪು. ಅದು ಸಂವಿಧಾನದ ಆಶಯಗಳಿಗೆ ವಿರುದ್ಧ~ ಎಂದರು.<br /> <br /> ಇತ್ತೀಚಿನ ದಿನಗಳಲ್ಲಿ ಜೀವನ ಮೌಲ್ಯಗಳು ಕುಸಿಯುತ್ತಿದ್ದು, ಎಲ್ಲೆಡೆ ಭ್ರಷ್ಟಾಚಾರ ಮತ್ತು ವಂಚನೆ ಹೆಚ್ಚಾಗುತ್ತಿದೆ. ಈ ಸಾಮಾಜಿಕ ಪಿಡುಗುಗಳು ದೇಶದ ಅಭಿವೃದ್ಧಿಗೆ ಮಾರಕವಾಗಿವೆ. ಆದ್ದರಿಂದ ಧರ್ಮ-ಧರ್ಮಗಳ ನಡುವೆ, ಜನಾಂಗಗಳ ಮಧ್ಯೆ ಪ್ರೀತಿ ವಿಶ್ವಾಸದ ಸೇತುವೆ ನಿರ್ಮಿಸುವ ಕೆಲಸ ಮಾಡಬೇಕು. ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಖಾಸಗಿ ಸಂಘ ಸಂಸ್ಥೆಗಳು ಗಂಭೀರ ಪ್ರಯತ್ನ ನಡೆಸಬೇಕು ಎಂದು ಹೇಳಿದರು.<br /> <br /> ಭಾರತ ಸಮೃದ್ಧ ರಾಷ್ಟ್ರವಾಗಿದೆ. ದೇಶದಲ್ಲಿ ನೈಸರ್ಗಿಕ ಸಂಪತ್ತು, ಮಾನವ ಸಂಪನ್ಮೂಲ ಹೇರಳವಾಗಿದೆ. ಈ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಗುಣಮಟ್ಟದ ತನಿಖೆ, ಪ್ರಕರಣಗಳ ಶೀಘ್ರ ವಿಚಾರಣೆ ಮತ್ತು ಅಪರಾಧಿಗಳಿಗೆ ಬೇಗನೆ ಶಿಕ್ಷೆಯಾಗುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ, ತನಿಖಾ ಸಂಸ್ಥೆಗಳ ನೆರವು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.<br /> <br /> ದೇಶದಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗಕ್ಕಿಂತ ನ್ಯಾಯಾಂಗದ ಮೇಲೆ ಜನರಿಗೆ ಹೆಚ್ಚಿನ ನಂಬಿಕೆ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು. ಆದ್ದರಿಂದ ನ್ಯಾಯಾಧೀಶರು ಪ್ರಾಮಾಣಿಕರಾಗಿರಬೇಕು. <br /> <br /> ರಾಜ್ಯ ಸರ್ಕಾರ ಲೋಕಾಯುಕ್ತ ಸಂಸ್ಥೆಯನ್ನು ನಿಷ್ಕ್ರಿಯಗೊಳಿಸಬಾರದು. ಆದಷ್ಟು ಬೇಗ ಲೋಕಾಯುಕ್ತರನ್ನು ನೇಮಿಸಬೇಕು ಎಂದು ಶಿವರಾಜ್ ಪಾಟೀಲ್ ಸಲಹೆ ನೀಡಿದರು.ಎಸಿಎಫ್ಇ ಸಂಸ್ಥೆಯ ಬೆಂಗಳೂರು ಶಾಖೆ ಅಧ್ಯಕ್ಷ ಸಾಕೇತ್ ಭಾರ್ತಿಯಾ, ಬೆಂಗಳೂರು ದೂರದರ್ಶನ ಕೇಂದ್ರದ ಉಪ ಮಹಾನಿರ್ದೇಶಕ ಡಾ.ಮಹೇಶ್ಜೋಷಿ ಇತರರು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong> `ದೇಶ ಮತ್ತು ರಾಜ್ಯದಲ್ಲಿ ಇಂದು ಜಾತಿ ಆಧಾರದಲ್ಲಿ ರಾಜಕಾರಣ ನಡೆಯುತ್ತಿದ್ದು, ಈ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ~ ಎಂದು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟರು.<br /> <br /> ವಂಚನೆ ತಪಾಸಕರ ಸಂಸ್ಥೆಯ (ಅಸೋಸಿಯೇಷನ್ ಆಫ್ ಸರ್ಟಿಫೈಡ್ ಫ್ರಾಡ್ ಎಗ್ಸಾಮೈನರ್ಸ್- ಎಸಿಎಫ್ಇ) ಬೆಂಗಳೂರು ಶಾಖೆಯು ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಎರಡನೇ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, `ಜಾತಿ ಆಧಾರದಲ್ಲಿ ರಾಜಕಾರಣ ಮಾಡುವುದು ತಪ್ಪು. ಅದು ಸಂವಿಧಾನದ ಆಶಯಗಳಿಗೆ ವಿರುದ್ಧ~ ಎಂದರು.<br /> <br /> ಇತ್ತೀಚಿನ ದಿನಗಳಲ್ಲಿ ಜೀವನ ಮೌಲ್ಯಗಳು ಕುಸಿಯುತ್ತಿದ್ದು, ಎಲ್ಲೆಡೆ ಭ್ರಷ್ಟಾಚಾರ ಮತ್ತು ವಂಚನೆ ಹೆಚ್ಚಾಗುತ್ತಿದೆ. ಈ ಸಾಮಾಜಿಕ ಪಿಡುಗುಗಳು ದೇಶದ ಅಭಿವೃದ್ಧಿಗೆ ಮಾರಕವಾಗಿವೆ. ಆದ್ದರಿಂದ ಧರ್ಮ-ಧರ್ಮಗಳ ನಡುವೆ, ಜನಾಂಗಗಳ ಮಧ್ಯೆ ಪ್ರೀತಿ ವಿಶ್ವಾಸದ ಸೇತುವೆ ನಿರ್ಮಿಸುವ ಕೆಲಸ ಮಾಡಬೇಕು. ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಖಾಸಗಿ ಸಂಘ ಸಂಸ್ಥೆಗಳು ಗಂಭೀರ ಪ್ರಯತ್ನ ನಡೆಸಬೇಕು ಎಂದು ಹೇಳಿದರು.<br /> <br /> ಭಾರತ ಸಮೃದ್ಧ ರಾಷ್ಟ್ರವಾಗಿದೆ. ದೇಶದಲ್ಲಿ ನೈಸರ್ಗಿಕ ಸಂಪತ್ತು, ಮಾನವ ಸಂಪನ್ಮೂಲ ಹೇರಳವಾಗಿದೆ. ಈ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಗುಣಮಟ್ಟದ ತನಿಖೆ, ಪ್ರಕರಣಗಳ ಶೀಘ್ರ ವಿಚಾರಣೆ ಮತ್ತು ಅಪರಾಧಿಗಳಿಗೆ ಬೇಗನೆ ಶಿಕ್ಷೆಯಾಗುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ, ತನಿಖಾ ಸಂಸ್ಥೆಗಳ ನೆರವು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.<br /> <br /> ದೇಶದಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗಕ್ಕಿಂತ ನ್ಯಾಯಾಂಗದ ಮೇಲೆ ಜನರಿಗೆ ಹೆಚ್ಚಿನ ನಂಬಿಕೆ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು. ಆದ್ದರಿಂದ ನ್ಯಾಯಾಧೀಶರು ಪ್ರಾಮಾಣಿಕರಾಗಿರಬೇಕು. <br /> <br /> ರಾಜ್ಯ ಸರ್ಕಾರ ಲೋಕಾಯುಕ್ತ ಸಂಸ್ಥೆಯನ್ನು ನಿಷ್ಕ್ರಿಯಗೊಳಿಸಬಾರದು. ಆದಷ್ಟು ಬೇಗ ಲೋಕಾಯುಕ್ತರನ್ನು ನೇಮಿಸಬೇಕು ಎಂದು ಶಿವರಾಜ್ ಪಾಟೀಲ್ ಸಲಹೆ ನೀಡಿದರು.ಎಸಿಎಫ್ಇ ಸಂಸ್ಥೆಯ ಬೆಂಗಳೂರು ಶಾಖೆ ಅಧ್ಯಕ್ಷ ಸಾಕೇತ್ ಭಾರ್ತಿಯಾ, ಬೆಂಗಳೂರು ದೂರದರ್ಶನ ಕೇಂದ್ರದ ಉಪ ಮಹಾನಿರ್ದೇಶಕ ಡಾ.ಮಹೇಶ್ಜೋಷಿ ಇತರರು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>