<p><strong>ಹಾವೇರಿ: </strong> ‘ಜನಸಾಮಾನ್ಯರ, ನೊಂದವರ, ಸಾಮಾಜಿಕ ಸ್ಥರದಲ್ಲಿ ಕೊನೆಯಲ್ಲಿರುವವರ ಧ್ವನಿಯಾಗಿ ಜಾನಪದ ವಿಶ್ವವಿದ್ಯಾಲಯ ನಿಲ್ಲಬೇಕು. ಆ ನಿಟ್ಟಿನಲ್ಲಿ ಅದನ್ನು ಕಟ್ಟಿ ಜಾಗತಿಕ ಮಟ್ಟದಲ್ಲಿ ಬೆಳೆಸಬೇಕಾದ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ’ ಎಂದು ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಗೋ.ರು. ಚನ್ನಬಸಪ್ಪ ಹೇಳಿದರು.<br /> <br /> ಜಿಲ್ಲೆಯ ಶಿಗ್ಗಾಂವ ಪಟ್ಟಣದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ, ಗಂಗಮ್ಮ ಬೊಮ್ಮಾಯಿ ಟ್ರಸ್ಟ್, ಜಾನಪದ ಸಂಭ್ರಮ ಸಮಿತಿ ಇವುಗಳ ಆಶ್ರಯದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಜಾನಪದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ಬದುಕು ನಡೆಸದಂತಹ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ. ಎಲ್ಲೆಡೆ ತಲ್ಲಣ, ಗೊಂದಲ, ಭಯದ ವಾತಾವರಣವಿದೆ. ಪರಸ್ಪರ ವಿಶ್ವಾಸವಿಲ್ಲದೇ ದುರ್ಬಲವಾದ ಸನ್ನಿವೇಶದಲ್ಲಿ ನಾವಿದ್ದೇವೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದ್ದು, ಇವುಗಳೆಲ್ಲವುಗಳಿಗೆ ಜಾನಪದ ವಿ.ವಿ. ಉತ್ತರವಾಗಬೇಕಿದೆ ಎಂದು ಹೇಳಿದರು. <br /> <br /> ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರ ಸಾಹಿತ್ಯ, ಸಂಸ್ಕೃತಿಗೆ ಬಿಜೆಪಿ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ. ಜಾನಪದ ವಿ.ವಿ. ಕಾರ್ಯಗಳು ಇನ್ನು ಆರಂಭವಾಗಿಲ್ಲ. ಅದಕ್ಕೆ ಸರ್ಕಾರ ಮಟ್ಟದಲ್ಲಿ ಶಾಸನ ಅಂಗೀಕಾರವಾಗಬೇಕು. ಅಂದಾಗ ಮಾತ್ರ ಅದರ ಕೆಲಸಗಳು ಆರಂಭವಾಗುತ್ತವೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಸಚಿವರಾದ ಉದಾಸಿ ಹಾಗೂ ಬಸವರಾಜ ಬೊಮ್ಮಾಯಿ ಪ್ರಯತ್ನಿಸಬೇಕು. ಆದಷ್ಟು ಬೇಗನೆ ಜಾನಪದ ವಿ.ವಿ.ಯ ಕೆಲಸಗಳು ಆರಂಭವಾಗುವಂತೆ ಮಾಡಬೇಕು ಎಂದು ಮನವಿ ಮಾಡಿದರು. ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong> ‘ಜನಸಾಮಾನ್ಯರ, ನೊಂದವರ, ಸಾಮಾಜಿಕ ಸ್ಥರದಲ್ಲಿ ಕೊನೆಯಲ್ಲಿರುವವರ ಧ್ವನಿಯಾಗಿ ಜಾನಪದ ವಿಶ್ವವಿದ್ಯಾಲಯ ನಿಲ್ಲಬೇಕು. ಆ ನಿಟ್ಟಿನಲ್ಲಿ ಅದನ್ನು ಕಟ್ಟಿ ಜಾಗತಿಕ ಮಟ್ಟದಲ್ಲಿ ಬೆಳೆಸಬೇಕಾದ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ’ ಎಂದು ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಗೋ.ರು. ಚನ್ನಬಸಪ್ಪ ಹೇಳಿದರು.<br /> <br /> ಜಿಲ್ಲೆಯ ಶಿಗ್ಗಾಂವ ಪಟ್ಟಣದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ, ಗಂಗಮ್ಮ ಬೊಮ್ಮಾಯಿ ಟ್ರಸ್ಟ್, ಜಾನಪದ ಸಂಭ್ರಮ ಸಮಿತಿ ಇವುಗಳ ಆಶ್ರಯದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಜಾನಪದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ಬದುಕು ನಡೆಸದಂತಹ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ. ಎಲ್ಲೆಡೆ ತಲ್ಲಣ, ಗೊಂದಲ, ಭಯದ ವಾತಾವರಣವಿದೆ. ಪರಸ್ಪರ ವಿಶ್ವಾಸವಿಲ್ಲದೇ ದುರ್ಬಲವಾದ ಸನ್ನಿವೇಶದಲ್ಲಿ ನಾವಿದ್ದೇವೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದ್ದು, ಇವುಗಳೆಲ್ಲವುಗಳಿಗೆ ಜಾನಪದ ವಿ.ವಿ. ಉತ್ತರವಾಗಬೇಕಿದೆ ಎಂದು ಹೇಳಿದರು. <br /> <br /> ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರ ಸಾಹಿತ್ಯ, ಸಂಸ್ಕೃತಿಗೆ ಬಿಜೆಪಿ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ. ಜಾನಪದ ವಿ.ವಿ. ಕಾರ್ಯಗಳು ಇನ್ನು ಆರಂಭವಾಗಿಲ್ಲ. ಅದಕ್ಕೆ ಸರ್ಕಾರ ಮಟ್ಟದಲ್ಲಿ ಶಾಸನ ಅಂಗೀಕಾರವಾಗಬೇಕು. ಅಂದಾಗ ಮಾತ್ರ ಅದರ ಕೆಲಸಗಳು ಆರಂಭವಾಗುತ್ತವೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಸಚಿವರಾದ ಉದಾಸಿ ಹಾಗೂ ಬಸವರಾಜ ಬೊಮ್ಮಾಯಿ ಪ್ರಯತ್ನಿಸಬೇಕು. ಆದಷ್ಟು ಬೇಗನೆ ಜಾನಪದ ವಿ.ವಿ.ಯ ಕೆಲಸಗಳು ಆರಂಭವಾಗುವಂತೆ ಮಾಡಬೇಕು ಎಂದು ಮನವಿ ಮಾಡಿದರು. ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>