<p><strong>ಹೈದರಾಬಾದ್ (ಪಿಟಿಐ):</strong> ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನದಲ್ಲಿರುವ ಕರ್ನಾಟಕದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಜಾಮೀನಿಗಾಗಿ ಲಂಚ ನೀಡಿದ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಯುವ ವಕೀಲ ಆದಿತ್ಯ ಅವರು ಗುರುವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ನ್ಯಾಯಾಲಯಕ್ಕೆ ಶರಣಾಗಿದ್ದಾರೆ.<br /> <br /> ಆದಿತ್ಯ ಅವರನ್ನು ನ್ಯಾಯಾಲಯವು ಆಗಸ್ಟ್ 2ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.<br /> <br /> ಜನಾರ್ದನ ರೆಡ್ಡಿ ಪರ ವಕೀಲರಾದ ಇ. ಉಮಾಮಹೇಶ್ವರ ರಾವ್ ಅವರ ಬಳಿ ಆದಿತ್ಯ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದರು.<br /> <br /> ಆದಿತ್ಯ ಅವರಿಗೆ ಒಂದು ಕೋಟಿ ರೂಪಾಯಿ ನೀಡಿದ್ದಾಗಿ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಯಾದಗಿರಿ ವಿಚಾರಣೆಯ ವೇಳೆ ಹೇಳಿಕೆ ನೀಡಿದ್ದ. <br /> <br /> ಒಬಳಾಪುರಂ ಗಣಿ ಕಂಪೆನಿ ಹಗರಣದ ಪ್ರಮುಖ ಆರೋಪಿಯಾದ ಜನಾರ್ದನ ರೆಡ್ಡಿಅವರ ಪರ ವಕೀಲರಲ್ಲಿ ಒಬ್ಬರಾಗಿರುವ ಹಿರಿಯ ವಕೀಲ ಇ. ಉಮಾಮಹೇಶ್ವರ ರಾವ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. <br /> <br /> ಪ್ರಕರಣಕ್ಕೆ ಸಂಬಂಧಿಸಿದಂತೆ ಇವರೆಗೆ ಬಂಧನಕ್ಕೆ ಒಳಗಾದವರಲ್ಲಿ ಆದಿತ್ಯ ಎಂಟನೇಯ ಆರೋಪಿಯಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ):</strong> ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನದಲ್ಲಿರುವ ಕರ್ನಾಟಕದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಜಾಮೀನಿಗಾಗಿ ಲಂಚ ನೀಡಿದ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಯುವ ವಕೀಲ ಆದಿತ್ಯ ಅವರು ಗುರುವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ನ್ಯಾಯಾಲಯಕ್ಕೆ ಶರಣಾಗಿದ್ದಾರೆ.<br /> <br /> ಆದಿತ್ಯ ಅವರನ್ನು ನ್ಯಾಯಾಲಯವು ಆಗಸ್ಟ್ 2ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.<br /> <br /> ಜನಾರ್ದನ ರೆಡ್ಡಿ ಪರ ವಕೀಲರಾದ ಇ. ಉಮಾಮಹೇಶ್ವರ ರಾವ್ ಅವರ ಬಳಿ ಆದಿತ್ಯ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದರು.<br /> <br /> ಆದಿತ್ಯ ಅವರಿಗೆ ಒಂದು ಕೋಟಿ ರೂಪಾಯಿ ನೀಡಿದ್ದಾಗಿ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಯಾದಗಿರಿ ವಿಚಾರಣೆಯ ವೇಳೆ ಹೇಳಿಕೆ ನೀಡಿದ್ದ. <br /> <br /> ಒಬಳಾಪುರಂ ಗಣಿ ಕಂಪೆನಿ ಹಗರಣದ ಪ್ರಮುಖ ಆರೋಪಿಯಾದ ಜನಾರ್ದನ ರೆಡ್ಡಿಅವರ ಪರ ವಕೀಲರಲ್ಲಿ ಒಬ್ಬರಾಗಿರುವ ಹಿರಿಯ ವಕೀಲ ಇ. ಉಮಾಮಹೇಶ್ವರ ರಾವ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. <br /> <br /> ಪ್ರಕರಣಕ್ಕೆ ಸಂಬಂಧಿಸಿದಂತೆ ಇವರೆಗೆ ಬಂಧನಕ್ಕೆ ಒಳಗಾದವರಲ್ಲಿ ಆದಿತ್ಯ ಎಂಟನೇಯ ಆರೋಪಿಯಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>