<p>ಹೈದರಾಬಾದ್: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಕೊಡಿಸಲು ಲಂಚ ನೀಡಿದ ಹಗರಣಕ್ಕೆ ಸಂಬಂಧಿಸಿದಂತೆ ಶಾಸಕ ಜಿ. ಸೋಮಶೇಖರ್ ರೆಡ್ಡಿ ಅವರನ್ನು ಆಂಧ್ರಪ್ರದೇಶದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು (ಎಸಿಬಿ) ಸೋಮವಾರ ಬಂಧಿಸಿದ್ದಾರೆ.<br /> <br /> ಸತತ ನಾಲ್ಕು ದಿನಗಳ ವಿಚಾರಣೆಯ ನಂತರ ಸೋಮಶೇಖರ್ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು `ಎಸಿಬಿ~ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಬಳ್ಳಾರಿ ನಗರ ಕ್ಷೇತ್ರ ಪ್ರತಿನಿಧಿಸುತ್ತಿರುವ ಶಾಸಕ ಸೋಮಶೇಖರ್ ಅವರು ಪ್ರಕರಣದ 11ನೇ ಆರೋಪಿಯಾಗಿದ್ದು, ಈ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಕರ್ನಾಟಕದ ಎರಡನೇ ಶಾಸಕರು.<br /> ಜುಲೈ 31ರಂದು ಎಸಿಬಿ ಅಧಿಕಾರಿಗಳು ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಬಾಬು ಅವರನ್ನು ಬಂಧಿಸಿದ್ದಾರೆ.<br /> <br /> ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಮಂಜೂರು ಮಾಡಿಸಲು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಟಿ. ಪಟ್ಟಾಭಿರಾಮ್ ರಾವ್ ಅವರಿಗೆ ಸೋಮಶೇಖರ್ ರೆಡ್ಡಿ, ಸುರೇಶ್ ಬಾಬು ಮತ್ತು ದಶರಥರಾಮಿ ರೆಡ್ಡಿ ಸೇರಿಕೊಂಡು ಲಂಚ ನೀಡಿದ್ದಾರೆ ಎಂದು ಆಪಾದಿಸಲಾಗಿದೆ.<br /> <br /> ಪಟ್ಟಾಭಿರಾಮ್ ರಾವ್, ಅವರ ಪುತ್ರ ರವಿಚಂದ್ರ, ನಿವೃತ್ತ ನ್ಯಾಯಾಧೀಶ ಚಲಪತಿ ರಾವ್, ಅಪರಾಧ ಹಿನ್ನೆಲೆಯುಳ್ಳ ಯಾದಗಿರಿ ರಾವ್ ಮತ್ತು ವಕೀಲ ಆದಿತ್ಯ ಈಗಾಗಲೇ ಜೈಲಿನಲ್ಲಿದ್ದಾರೆ. <br /> <br /> ಮೇ ತಿಂಗಳಲ್ಲಿ ಪಟ್ಟಾಭಿರಾಮ್ ಅವರು 10 ಕೋಟಿ ರೂಪಾಯಿ ಲಂಚ ಪಡೆದು ಜನಾರ್ದನ ರೆಡ್ಡಿಗೆ ಜಾಮೀನು ನೀಡಿದ್ದರು. ಆಂಧ್ರಪ್ರದೇಶ ಹೈಕೋರ್ಟ್ ಈ ಜಾಮೀನನ್ನು ರದ್ದುಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೈದರಾಬಾದ್: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಕೊಡಿಸಲು ಲಂಚ ನೀಡಿದ ಹಗರಣಕ್ಕೆ ಸಂಬಂಧಿಸಿದಂತೆ ಶಾಸಕ ಜಿ. ಸೋಮಶೇಖರ್ ರೆಡ್ಡಿ ಅವರನ್ನು ಆಂಧ್ರಪ್ರದೇಶದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು (ಎಸಿಬಿ) ಸೋಮವಾರ ಬಂಧಿಸಿದ್ದಾರೆ.<br /> <br /> ಸತತ ನಾಲ್ಕು ದಿನಗಳ ವಿಚಾರಣೆಯ ನಂತರ ಸೋಮಶೇಖರ್ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು `ಎಸಿಬಿ~ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಬಳ್ಳಾರಿ ನಗರ ಕ್ಷೇತ್ರ ಪ್ರತಿನಿಧಿಸುತ್ತಿರುವ ಶಾಸಕ ಸೋಮಶೇಖರ್ ಅವರು ಪ್ರಕರಣದ 11ನೇ ಆರೋಪಿಯಾಗಿದ್ದು, ಈ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಕರ್ನಾಟಕದ ಎರಡನೇ ಶಾಸಕರು.<br /> ಜುಲೈ 31ರಂದು ಎಸಿಬಿ ಅಧಿಕಾರಿಗಳು ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಬಾಬು ಅವರನ್ನು ಬಂಧಿಸಿದ್ದಾರೆ.<br /> <br /> ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಮಂಜೂರು ಮಾಡಿಸಲು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಟಿ. ಪಟ್ಟಾಭಿರಾಮ್ ರಾವ್ ಅವರಿಗೆ ಸೋಮಶೇಖರ್ ರೆಡ್ಡಿ, ಸುರೇಶ್ ಬಾಬು ಮತ್ತು ದಶರಥರಾಮಿ ರೆಡ್ಡಿ ಸೇರಿಕೊಂಡು ಲಂಚ ನೀಡಿದ್ದಾರೆ ಎಂದು ಆಪಾದಿಸಲಾಗಿದೆ.<br /> <br /> ಪಟ್ಟಾಭಿರಾಮ್ ರಾವ್, ಅವರ ಪುತ್ರ ರವಿಚಂದ್ರ, ನಿವೃತ್ತ ನ್ಯಾಯಾಧೀಶ ಚಲಪತಿ ರಾವ್, ಅಪರಾಧ ಹಿನ್ನೆಲೆಯುಳ್ಳ ಯಾದಗಿರಿ ರಾವ್ ಮತ್ತು ವಕೀಲ ಆದಿತ್ಯ ಈಗಾಗಲೇ ಜೈಲಿನಲ್ಲಿದ್ದಾರೆ. <br /> <br /> ಮೇ ತಿಂಗಳಲ್ಲಿ ಪಟ್ಟಾಭಿರಾಮ್ ಅವರು 10 ಕೋಟಿ ರೂಪಾಯಿ ಲಂಚ ಪಡೆದು ಜನಾರ್ದನ ರೆಡ್ಡಿಗೆ ಜಾಮೀನು ನೀಡಿದ್ದರು. ಆಂಧ್ರಪ್ರದೇಶ ಹೈಕೋರ್ಟ್ ಈ ಜಾಮೀನನ್ನು ರದ್ದುಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>