<p><strong>ನವದೆಹಲಿ (ಪಿಟಿಐ): </strong>ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸೇರಿದಂತೆ 2008ರ ಮಾಲೇಗಾಂವ್ ಸ್ಪೋಟ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಗಳನ್ನು ಇನ್ನೊಂದು ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ಮಹಾರಾಷ್ಟ್ರ ವಿಚಾರಣಾಧೀನ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.</p>.<p>ಅಲ್ಲದೇ, ರಾಕೇಶ್ ಡಿ. ಧವ್ಡೆ ಅವರನ್ನು ಹೊರತು ಪಡಿಸಿ ಇತರ ಆರೋಪಿಗಳ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸುವಾಗ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ತಡೆ ಕಾಯ್ದೆಯನ್ನು (ಎಂಸಿಒಸಿಎ) ಪರಿಗಣಿಸದಂತೆಯೂ ನ್ಯಾಯಮೂರ್ತಿ ಎಫ್.ಎಂ.ಐ. ಕಲಿಫುಲ್ಲಾ ಅವರಿದ್ದ ಪೀಠ ನಿರ್ದೇಶಿಸಿದೆ.</p>.<p>ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಆರೋಪಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.</p>.<p>ಪ್ರಕರಣದಲ್ಲಿ ಜಾಮೀನು ನೀಡುವಾಗ ಕಠಿಣ ಎಂಸಿಒಸಿಎ ಕಾಯ್ದೆಯನ್ನು ಪರಿಗಣಿಸದಿರುವಂತೆ ನಿರ್ದೇಶನ ನೀಡುವಂತೆಯೂ ಅರ್ಜಿಯಲ್ಲಿ ಕೋರಿದ್ದರು.</p>.<p>2008ರ ಸೆಪ್ಟಂಬರ್ 29ರಂದು ಮಾಲೇಗಾಂವ್ದಲ್ಲಿ ನಡೆದ ಸ್ಫೋಟ ಘಟನೆಯಲ್ಲಿ ಏಳು ಜನರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸೇರಿದಂತೆ 2008ರ ಮಾಲೇಗಾಂವ್ ಸ್ಪೋಟ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಗಳನ್ನು ಇನ್ನೊಂದು ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ಮಹಾರಾಷ್ಟ್ರ ವಿಚಾರಣಾಧೀನ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.</p>.<p>ಅಲ್ಲದೇ, ರಾಕೇಶ್ ಡಿ. ಧವ್ಡೆ ಅವರನ್ನು ಹೊರತು ಪಡಿಸಿ ಇತರ ಆರೋಪಿಗಳ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸುವಾಗ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ತಡೆ ಕಾಯ್ದೆಯನ್ನು (ಎಂಸಿಒಸಿಎ) ಪರಿಗಣಿಸದಂತೆಯೂ ನ್ಯಾಯಮೂರ್ತಿ ಎಫ್.ಎಂ.ಐ. ಕಲಿಫುಲ್ಲಾ ಅವರಿದ್ದ ಪೀಠ ನಿರ್ದೇಶಿಸಿದೆ.</p>.<p>ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಆರೋಪಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.</p>.<p>ಪ್ರಕರಣದಲ್ಲಿ ಜಾಮೀನು ನೀಡುವಾಗ ಕಠಿಣ ಎಂಸಿಒಸಿಎ ಕಾಯ್ದೆಯನ್ನು ಪರಿಗಣಿಸದಿರುವಂತೆ ನಿರ್ದೇಶನ ನೀಡುವಂತೆಯೂ ಅರ್ಜಿಯಲ್ಲಿ ಕೋರಿದ್ದರು.</p>.<p>2008ರ ಸೆಪ್ಟಂಬರ್ 29ರಂದು ಮಾಲೇಗಾಂವ್ದಲ್ಲಿ ನಡೆದ ಸ್ಫೋಟ ಘಟನೆಯಲ್ಲಿ ಏಳು ಜನರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>