<p><strong>ಬೆಂಗಳೂರು:</strong> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಲೂರು ಶಾಸಕ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಅವರ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ವಕೀಲ ರವಿ ಬಿ. ನಾಯಕ್ ತಿಳಿಸಿದರು.<br /> <br /> ವಿಶೇಷ ಕೋರ್ಟ್ ಆದೇಶದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಸೋಮವಾರವೇ ಹೈಕೋರ್ಟ್ ಮೊರೆ ಹೋಗುವುದಾಗಿ ಅವರು ತಿಳಿಸಿದರು.<br /> <br /> `ತಮಗೆ ಅನುಕೂಲವಾಗುವ ತೀರ್ಪು ನ್ಯಾಯಾಲಯದಿಂದ ಬರುವ ಸಾಧ್ಯತೆ ಇಲ್ಲ ಎಂಬ ಭಾವನೆ ಮೂಡಿದಾಗ ನ್ಯಾಯಪೀಠದ ಮೇಲೆ ನಂಬಿಕೆ ಇಲ್ಲ ಎಂಬ ಅರ್ಥ ಬರುವ ಪ್ರಮಾಣಪತ್ರ ಸಲ್ಲಿಸುವುದು ಸರಿಯಲ್ಲ~ ಎಂದು ವಕೀಲ ಸಿರಾಜಿನ್ ಬಾಷಾ ಅವರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು.<br /> <br /> `ಬಾಷಾ ಅವರು ಬೇರೊಬ್ಬರ ಕೈಯಲ್ಲಿ ದಾಳವಾಗಿದ್ದಾರೆ. ಬಾಷಾ ಅವರನ್ನು ದಾಳದಂತೆ ಆಡಿಸುತ್ತಿರುವ `ಮಹಾನುಭಾವರು~ ಯಾರು ಎಂಬುದು ನಿಮಗೂ ತಿಳಿದಿರಬಹುದು ಎಂದರು. ನಾಯಕ್ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಯಡಿಯೂರಪ್ಪ ಅವರ ಪರ ವಾದಿಸಿದ್ದರು.<br /> <strong><br /> `ಇದೇ ಮೊದಲು~:</strong> `ಖಾಸಗಿ ದೂರಿನ ಹಿನ್ನೆಲೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರು ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವುದು ದೇಶದ ಇತಿಹಾಸದಲ್ಲಿ ಇದು ಎರಡನೆಯ ಬಾರಿ. ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲನೆಯದು~ ಎಂದು ದೂರುದಾರ ಬಾಷಾ ಅವರ ಪರ ವಕೀಲ ಸಿ.ಎಚ್. ಹನುಮಂತರಾಯ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಲೂರು ಶಾಸಕ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಅವರ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ವಕೀಲ ರವಿ ಬಿ. ನಾಯಕ್ ತಿಳಿಸಿದರು.<br /> <br /> ವಿಶೇಷ ಕೋರ್ಟ್ ಆದೇಶದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಸೋಮವಾರವೇ ಹೈಕೋರ್ಟ್ ಮೊರೆ ಹೋಗುವುದಾಗಿ ಅವರು ತಿಳಿಸಿದರು.<br /> <br /> `ತಮಗೆ ಅನುಕೂಲವಾಗುವ ತೀರ್ಪು ನ್ಯಾಯಾಲಯದಿಂದ ಬರುವ ಸಾಧ್ಯತೆ ಇಲ್ಲ ಎಂಬ ಭಾವನೆ ಮೂಡಿದಾಗ ನ್ಯಾಯಪೀಠದ ಮೇಲೆ ನಂಬಿಕೆ ಇಲ್ಲ ಎಂಬ ಅರ್ಥ ಬರುವ ಪ್ರಮಾಣಪತ್ರ ಸಲ್ಲಿಸುವುದು ಸರಿಯಲ್ಲ~ ಎಂದು ವಕೀಲ ಸಿರಾಜಿನ್ ಬಾಷಾ ಅವರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು.<br /> <br /> `ಬಾಷಾ ಅವರು ಬೇರೊಬ್ಬರ ಕೈಯಲ್ಲಿ ದಾಳವಾಗಿದ್ದಾರೆ. ಬಾಷಾ ಅವರನ್ನು ದಾಳದಂತೆ ಆಡಿಸುತ್ತಿರುವ `ಮಹಾನುಭಾವರು~ ಯಾರು ಎಂಬುದು ನಿಮಗೂ ತಿಳಿದಿರಬಹುದು ಎಂದರು. ನಾಯಕ್ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಯಡಿಯೂರಪ್ಪ ಅವರ ಪರ ವಾದಿಸಿದ್ದರು.<br /> <strong><br /> `ಇದೇ ಮೊದಲು~:</strong> `ಖಾಸಗಿ ದೂರಿನ ಹಿನ್ನೆಲೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರು ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವುದು ದೇಶದ ಇತಿಹಾಸದಲ್ಲಿ ಇದು ಎರಡನೆಯ ಬಾರಿ. ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲನೆಯದು~ ಎಂದು ದೂರುದಾರ ಬಾಷಾ ಅವರ ಪರ ವಕೀಲ ಸಿ.ಎಚ್. ಹನುಮಂತರಾಯ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>