<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2016–17ನೇ ಸಾಲಿನ ಬಜೆಟ್ ಮಂಡನೆಗೆ (ಮಾರ್ಚ್ 18) ಅಂತಿಮ ಹಂತದ ತಯಾರಿಯಲ್ಲಿ ಮಗ್ನರಾಗಿದ್ದಾರೆ. ಆದರೆ ಕಳೆದ ವರ್ಷ ಮಂಡಿಸಿದ್ದ ಬಜೆಟ್ನಲ್ಲಿನ ಅನೇಕ ಕಾರ್ಯಕ್ರಮಗಳು ಜಾರಿಗೆ ಬರದೆ, ಘೋಷಣೆಗಷ್ಟೇ ಸೀಮಿತವಾಗಿವೆ.<br /> <br /> ಪ್ರಮುಖ ರಸ್ತೆಗಳ ಸಂಪರ್ಕಕ್ಕೆ ಸೇತುವೆಗಳನ್ನು ನಿರ್ಮಿಸಲು ₹ 1 ಸಾವಿರ ಕೋಟಿ ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದರು. ಆದರೆ, ಅದು ಅನುಷ್ಠಾನ ಆಗಿಲ್ಲ. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರಕಟಿಸಿದ ಹಲವಾರು ಯೋಜನೆಗಳು ಇನ್ನೂ ಕಾಗದದಲ್ಲೇ ಇವೆ. ಅವುಗಳ ಸಾಲಿಗೆ ಗಿರಿಧಾಮಗಳಿಗೆ ಕೇಬಲ್ ಕಾರು ಒದಗಿಸುವುದೂ ಸೇರಿದೆ.<br /> <br /> ನಂದಿಬೆಟ್ಟ, ಚಾಮುಂಡಿಬೆಟ್ಟ, ಮಧುಗಿರಿ ಏಕಶಿಲಾ ಬೆಟ್ಟ ಹಾಗೂ ಕೆಮ್ಮಣ್ಣುಗುಂಡಿ ಗಿರಿಧಾಮದಲ್ಲಿ ಕೇಬಲ್ ಕಾರ್ ಯೋಜನೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದರು. ಆದರೆ, ಅವು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.<br /> <br /> ಇವುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಜಾರಿ ಮಾಡುವುದಾಗಿ ಪ್ರವಾಸೋದ್ಯಮ ಇಲಾಖೆ ಈಗಲೂ ಹೇಳುತ್ತಲೇ ಇದೆ.<br /> <br /> <strong>ವಸತಿಯಲ್ಲೂ ಹಿಂದೆ: </strong>ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಗ್ರಾಮೀಣ ಭಾಗದಲ್ಲಿ ಒಂದು ಲಕ್ಷ ಮತ್ತು ನಗರ ಪ್ರದೇಶದಲ್ಲಿ 50 ಸಾವಿರ ಮನೆಗಳನ್ನು ನಿರ್ಮಿಸಲು ಸಮಾಜ ಕಲ್ಯಾಣ ಇಲಾಖೆ ಯೋಜನೆ ರೂಪಿಸಿ, ಅದರ ಅನುಷ್ಠಾನದ ಜವಾಬ್ದಾರಿ ವಸತಿ ಇಲಾಖೆಗೆ ವಹಿಸಿತ್ತು.<br /> <br /> ಈ ಸಲುವಾಗಿ ₹2,307 ಕೋಟಿ ಕೊಟ್ಟಿತ್ತು. ಆದರೆ, ಅದು ಇನ್ನೂ ಪೂರ್ಣ ಜಾರಿ ಆಗಿಲ್ಲ. ಬದಲಿಗೆ, ‘ಹಣ ಖರ್ಚು ಮಾಡಲು ಸಾಧ್ಯ ಇಲ್ಲ’ ಎಂದು ಹೇಳಿ ₹273 ಕೋಟಿಯಷ್ಟು ಅನುದಾನವನ್ನು ವಸತಿ ಇಲಾಖೆಯು ಸಮಾಜ ಕಲ್ಯಾಣ ಇಲಾಖೆಗೆ ಹಿಂದಿರುಗಿಸಲು ಮುಂದಾಗಿತ್ತು. ಅದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಆಕ್ಷೇಪ ವ್ಯಕ್ತಪಡಿಸಿದ ನಂತರ ಈ ಹಣವನ್ನು ರಾಜೀವ್ಗಾಂಧಿ ವಸತಿ ನಿಗಮದ ಖಾತೆಗೆ ವರ್ಗಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ಶೇ 76 ಹಣ ಬಿಡುಗಡೆ</strong><br /> 2015–16ನೇ ಸಾಲಿನ ಬಜೆಟ್ನಲ್ಲಿ ವಿವಿಧ ಇಲಾಖೆಗಳ ಯೋಜನಾ ಬಾಬ್ತಿಗಾಗಿ ಮೀಸಲಿಟ್ಟ ಒಟ್ಟು ಅನುದಾನದಲ್ಲಿ ಫೆಬ್ರುವರಿ </p>.<p>ಅಂತ್ಯದವರೆಗೆ ಶೇ 76ರಷ್ಟು ಬಳಕೆ ಆಗಿದೆ. ಮಾರ್ಚ್ 31ರೊಳಗೆ ಪೂರ್ಣ ಅನುದಾನ ಬಳಕೆ ಆಗದಿದ್ದರೆ ಅದು ರದ್ದಾಗುವ ಅಥವಾ ವಾಪಸ್ ಹಣಕಾಸು ಇಲಾಖೆ ಪಾಲಾಗುವ ಸಾಧ್ಯತೆ ಇರುತ್ತದೆ.</p>.<p><strong>ಕಾಗದದ ಮೇಲೆ ಉಳಿದ ಯೋಜನೆ</strong></p>.<p>* ಲೋಕೋಪಯೋಗಿ ಇಲಾಖೆಯ ಸಿವಿಲ್ ಗುತ್ತಿಗೆ ಕಾಮಗಾರಿಗಳಲ್ಲಿ ಪರಿಶಿಷ್ಟರಿಗೆ ಮೀಸಲಾತಿ<br /> * ಉತ್ತರ ಕರ್ನಾಟಕದಲ್ಲಿ ಐಟಿ ಕ್ರಾಂತಿ. ಅದಕ್ಕಾಗಿ ಬಾಗಲಕೋಟೆಯಲ್ಲಿ ಐಟಿ ಪಾರ್ಕ್ ಸ್ಥಾಪನೆ (ಭೂಸ್ವಾಧೀನ ಸಮಸ್ಯೆಯಿಂದಾಗಿ ಅದು ಜಾರಿಗೊಳ್ಳಲಿಲ್ಲ ಎಂದು ಐಟಿ ಇಲಾಖೆ ಹೇಳುತ್ತಿದೆ)<br /> * ರಾಮನಗರ– ಮೈಸೂರು ನಡುವಿನ ರೈಲ್ವೆ ಜೋಡಿ ಮಾರ್ಗದ ಕಾಮಗಾರಿ (ಇದನ್ನು ಈ ವರ್ಷ ಮುಗಿಸಿ, ಸಂಚಾರಕ್ಕೆ ತೆರವು ಮಾಡುವುದಾಗಿ ಬಜೆಟ್ನಲ್ಲಿ ಹೇಳಲಾಗಿತ್ತು. ಇವತ್ತಿಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಶ್ರೀರಂಗಪಟ್ಟಣ ಸಮೀಪದ ಟಿಪ್ಪು ಶಸ್ತ್ರಾಗಾರವನ್ನು ಸ್ಥಳಾಂತರಿಸುವ ಕೆಲಸ ಇನ್ನೂ ಆಗಿಲ್ಲ).<br /> * ತುಮಕೂರು– ರಾಯದುರ್ಗ ರೈಲ್ವೆ ಯೋಜನೆಗೆ ಭೂಸ್ವಾಧೀನ (ಈ ನಿಟ್ಟಿನಲ್ಲಿ ಯಾವ ಪ್ರಯತ್ನವೂ ಆಗಿಲ್ಲ ಎನ್ನುತ್ತವೆ ಇಲಾಖೆ ಮೂಲಗಳು).<br /> * ಗ್ರಾಮೀಣ ಭಾಗದಲ್ಲಿ ನಾಲ್ಕು ಸಾವಿರ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ (ಇದುವರೆಗೂ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಿಲ್ಲ).<br /> * ‘ಗ್ರಾಮೀಣ ಗೌರವ’ ಯೋಜನೆ ಮೂಲಕ ಬಡವರ ಮನೆಗಳಲ್ಲಿ ಸ್ನಾನಗೃಹ ಸಹಿತ ಶೌಚಾಲಯಗಳ, ಗ್ರಾಮೀಣ ಭಾಗದ ಪ್ರತಿ ಮನೆಗೆ ವೈಯಕ್ತಿಕ ಶೌಚಾಲಯ ನಿರ್ಮಾಣ(ಇದು ಕೂಡ ಹೆಚ್ಚಿನ ಕಡೆ ಅನುಷ್ಠಾನ ಆಗಿಲ್ಲ).<br /> * ಸಣ್ಣ ನೀರಾವರಿ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಸೌರಶಕ್ತಿಯ ಕೃಷಿ ಪಂಪ್ಸೆಟ್ ವಿತರಣೆ (ಇದಕ್ಕೆ ಪರಿಶಿಷ್ಟರ ರಾಜ್ಯ ಪರಿಷತ್ನಲ್ಲಿ ಒಪ್ಪಿಗೆ ಸಿಗದ ಕಾರಣ ನನೆಗುದಿಗೆ ಬಿದ್ದಿದೆ).<br /> * ಸಾಹಿತಿ ಯು.ಆರ್. ಅನಂತಮೂರ್ತಿ ಮತ್ತು ಚಿತ್ರಕಲಾವಿದ ಪಿ.ಆರ್.ತಿಪ್ಪೇಸ್ವಾಮಿ ಹೆಸರಿನಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪನೆಗೆ ತಲಾ ₹ 1 ಕೋಟಿ. (ಹಣ ಬಿಡುಗಡೆ ಆಗಿಲ್ಲ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2016–17ನೇ ಸಾಲಿನ ಬಜೆಟ್ ಮಂಡನೆಗೆ (ಮಾರ್ಚ್ 18) ಅಂತಿಮ ಹಂತದ ತಯಾರಿಯಲ್ಲಿ ಮಗ್ನರಾಗಿದ್ದಾರೆ. ಆದರೆ ಕಳೆದ ವರ್ಷ ಮಂಡಿಸಿದ್ದ ಬಜೆಟ್ನಲ್ಲಿನ ಅನೇಕ ಕಾರ್ಯಕ್ರಮಗಳು ಜಾರಿಗೆ ಬರದೆ, ಘೋಷಣೆಗಷ್ಟೇ ಸೀಮಿತವಾಗಿವೆ.<br /> <br /> ಪ್ರಮುಖ ರಸ್ತೆಗಳ ಸಂಪರ್ಕಕ್ಕೆ ಸೇತುವೆಗಳನ್ನು ನಿರ್ಮಿಸಲು ₹ 1 ಸಾವಿರ ಕೋಟಿ ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದರು. ಆದರೆ, ಅದು ಅನುಷ್ಠಾನ ಆಗಿಲ್ಲ. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರಕಟಿಸಿದ ಹಲವಾರು ಯೋಜನೆಗಳು ಇನ್ನೂ ಕಾಗದದಲ್ಲೇ ಇವೆ. ಅವುಗಳ ಸಾಲಿಗೆ ಗಿರಿಧಾಮಗಳಿಗೆ ಕೇಬಲ್ ಕಾರು ಒದಗಿಸುವುದೂ ಸೇರಿದೆ.<br /> <br /> ನಂದಿಬೆಟ್ಟ, ಚಾಮುಂಡಿಬೆಟ್ಟ, ಮಧುಗಿರಿ ಏಕಶಿಲಾ ಬೆಟ್ಟ ಹಾಗೂ ಕೆಮ್ಮಣ್ಣುಗುಂಡಿ ಗಿರಿಧಾಮದಲ್ಲಿ ಕೇಬಲ್ ಕಾರ್ ಯೋಜನೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದರು. ಆದರೆ, ಅವು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.<br /> <br /> ಇವುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಜಾರಿ ಮಾಡುವುದಾಗಿ ಪ್ರವಾಸೋದ್ಯಮ ಇಲಾಖೆ ಈಗಲೂ ಹೇಳುತ್ತಲೇ ಇದೆ.<br /> <br /> <strong>ವಸತಿಯಲ್ಲೂ ಹಿಂದೆ: </strong>ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಗ್ರಾಮೀಣ ಭಾಗದಲ್ಲಿ ಒಂದು ಲಕ್ಷ ಮತ್ತು ನಗರ ಪ್ರದೇಶದಲ್ಲಿ 50 ಸಾವಿರ ಮನೆಗಳನ್ನು ನಿರ್ಮಿಸಲು ಸಮಾಜ ಕಲ್ಯಾಣ ಇಲಾಖೆ ಯೋಜನೆ ರೂಪಿಸಿ, ಅದರ ಅನುಷ್ಠಾನದ ಜವಾಬ್ದಾರಿ ವಸತಿ ಇಲಾಖೆಗೆ ವಹಿಸಿತ್ತು.<br /> <br /> ಈ ಸಲುವಾಗಿ ₹2,307 ಕೋಟಿ ಕೊಟ್ಟಿತ್ತು. ಆದರೆ, ಅದು ಇನ್ನೂ ಪೂರ್ಣ ಜಾರಿ ಆಗಿಲ್ಲ. ಬದಲಿಗೆ, ‘ಹಣ ಖರ್ಚು ಮಾಡಲು ಸಾಧ್ಯ ಇಲ್ಲ’ ಎಂದು ಹೇಳಿ ₹273 ಕೋಟಿಯಷ್ಟು ಅನುದಾನವನ್ನು ವಸತಿ ಇಲಾಖೆಯು ಸಮಾಜ ಕಲ್ಯಾಣ ಇಲಾಖೆಗೆ ಹಿಂದಿರುಗಿಸಲು ಮುಂದಾಗಿತ್ತು. ಅದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಆಕ್ಷೇಪ ವ್ಯಕ್ತಪಡಿಸಿದ ನಂತರ ಈ ಹಣವನ್ನು ರಾಜೀವ್ಗಾಂಧಿ ವಸತಿ ನಿಗಮದ ಖಾತೆಗೆ ವರ್ಗಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ಶೇ 76 ಹಣ ಬಿಡುಗಡೆ</strong><br /> 2015–16ನೇ ಸಾಲಿನ ಬಜೆಟ್ನಲ್ಲಿ ವಿವಿಧ ಇಲಾಖೆಗಳ ಯೋಜನಾ ಬಾಬ್ತಿಗಾಗಿ ಮೀಸಲಿಟ್ಟ ಒಟ್ಟು ಅನುದಾನದಲ್ಲಿ ಫೆಬ್ರುವರಿ </p>.<p>ಅಂತ್ಯದವರೆಗೆ ಶೇ 76ರಷ್ಟು ಬಳಕೆ ಆಗಿದೆ. ಮಾರ್ಚ್ 31ರೊಳಗೆ ಪೂರ್ಣ ಅನುದಾನ ಬಳಕೆ ಆಗದಿದ್ದರೆ ಅದು ರದ್ದಾಗುವ ಅಥವಾ ವಾಪಸ್ ಹಣಕಾಸು ಇಲಾಖೆ ಪಾಲಾಗುವ ಸಾಧ್ಯತೆ ಇರುತ್ತದೆ.</p>.<p><strong>ಕಾಗದದ ಮೇಲೆ ಉಳಿದ ಯೋಜನೆ</strong></p>.<p>* ಲೋಕೋಪಯೋಗಿ ಇಲಾಖೆಯ ಸಿವಿಲ್ ಗುತ್ತಿಗೆ ಕಾಮಗಾರಿಗಳಲ್ಲಿ ಪರಿಶಿಷ್ಟರಿಗೆ ಮೀಸಲಾತಿ<br /> * ಉತ್ತರ ಕರ್ನಾಟಕದಲ್ಲಿ ಐಟಿ ಕ್ರಾಂತಿ. ಅದಕ್ಕಾಗಿ ಬಾಗಲಕೋಟೆಯಲ್ಲಿ ಐಟಿ ಪಾರ್ಕ್ ಸ್ಥಾಪನೆ (ಭೂಸ್ವಾಧೀನ ಸಮಸ್ಯೆಯಿಂದಾಗಿ ಅದು ಜಾರಿಗೊಳ್ಳಲಿಲ್ಲ ಎಂದು ಐಟಿ ಇಲಾಖೆ ಹೇಳುತ್ತಿದೆ)<br /> * ರಾಮನಗರ– ಮೈಸೂರು ನಡುವಿನ ರೈಲ್ವೆ ಜೋಡಿ ಮಾರ್ಗದ ಕಾಮಗಾರಿ (ಇದನ್ನು ಈ ವರ್ಷ ಮುಗಿಸಿ, ಸಂಚಾರಕ್ಕೆ ತೆರವು ಮಾಡುವುದಾಗಿ ಬಜೆಟ್ನಲ್ಲಿ ಹೇಳಲಾಗಿತ್ತು. ಇವತ್ತಿಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಶ್ರೀರಂಗಪಟ್ಟಣ ಸಮೀಪದ ಟಿಪ್ಪು ಶಸ್ತ್ರಾಗಾರವನ್ನು ಸ್ಥಳಾಂತರಿಸುವ ಕೆಲಸ ಇನ್ನೂ ಆಗಿಲ್ಲ).<br /> * ತುಮಕೂರು– ರಾಯದುರ್ಗ ರೈಲ್ವೆ ಯೋಜನೆಗೆ ಭೂಸ್ವಾಧೀನ (ಈ ನಿಟ್ಟಿನಲ್ಲಿ ಯಾವ ಪ್ರಯತ್ನವೂ ಆಗಿಲ್ಲ ಎನ್ನುತ್ತವೆ ಇಲಾಖೆ ಮೂಲಗಳು).<br /> * ಗ್ರಾಮೀಣ ಭಾಗದಲ್ಲಿ ನಾಲ್ಕು ಸಾವಿರ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ (ಇದುವರೆಗೂ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಿಲ್ಲ).<br /> * ‘ಗ್ರಾಮೀಣ ಗೌರವ’ ಯೋಜನೆ ಮೂಲಕ ಬಡವರ ಮನೆಗಳಲ್ಲಿ ಸ್ನಾನಗೃಹ ಸಹಿತ ಶೌಚಾಲಯಗಳ, ಗ್ರಾಮೀಣ ಭಾಗದ ಪ್ರತಿ ಮನೆಗೆ ವೈಯಕ್ತಿಕ ಶೌಚಾಲಯ ನಿರ್ಮಾಣ(ಇದು ಕೂಡ ಹೆಚ್ಚಿನ ಕಡೆ ಅನುಷ್ಠಾನ ಆಗಿಲ್ಲ).<br /> * ಸಣ್ಣ ನೀರಾವರಿ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಸೌರಶಕ್ತಿಯ ಕೃಷಿ ಪಂಪ್ಸೆಟ್ ವಿತರಣೆ (ಇದಕ್ಕೆ ಪರಿಶಿಷ್ಟರ ರಾಜ್ಯ ಪರಿಷತ್ನಲ್ಲಿ ಒಪ್ಪಿಗೆ ಸಿಗದ ಕಾರಣ ನನೆಗುದಿಗೆ ಬಿದ್ದಿದೆ).<br /> * ಸಾಹಿತಿ ಯು.ಆರ್. ಅನಂತಮೂರ್ತಿ ಮತ್ತು ಚಿತ್ರಕಲಾವಿದ ಪಿ.ಆರ್.ತಿಪ್ಪೇಸ್ವಾಮಿ ಹೆಸರಿನಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪನೆಗೆ ತಲಾ ₹ 1 ಕೋಟಿ. (ಹಣ ಬಿಡುಗಡೆ ಆಗಿಲ್ಲ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>