<p><strong>ನವದೆಹಲಿ (ಪಿಟಿಐ):</strong> ಜಾರ್ಖಂಡ್ ರಾಜ್ಯಸಭೆ ಚುನಾವಣೆಯನ್ನು ರದ್ದುಪಡಿಸಿರುವ ಚುನಾವಣೆ ಆಯೋಗದ ತೀರ್ಮಾನ ಐತಿಹಾಸಿಕವಾದುದು ಎಂದು ಪ್ರಶಂಶಿರುವ ಬಿಜೆಪಿಯ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಅವರು, ಹಣದ ಚೀಲ ಹಿಡಿದುಕೊಂಡು ಚುನಾವಣೆ ಕಣಕ್ಕಿಳಿಯುವ ಪ್ರವೃತ್ತಿಗೆ ಈ ತೀರ್ಮಾನ ಕಡಿವಾಣ ಹಾಕಲಿದೆ ಎಂದು ತಿಳಿಸಿದ್ದಾರೆ.</p>.<p>ರಾಜ್ಯಸಭಾ ಚುನಾವಣೆಯು ಮುಕ್ತವಾಗಿ ನಡೆಯಬೇಕು ಎಂಬ ಉದ್ದೇಶದಿಂದ 2003ರಲ್ಲಿ ಎನ್ಡಿಎ ಸರ್ಕಾರ ಜನಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತಂದಿದೆ. ಈಗ ಈ ವಿಚಾರದಲ್ಲಿ ಇನ್ನೂ ಹೆಚ್ಚಿನ ಗಮನ ಅಗತ್ಯವಾಗಿದೆ ಹಾಗೂ ಚುನಾವಣೆ ಆಯೋಗದ ತೀರ್ಮಾನದಿಂದ ಹಣದ ಪ್ರಭಾವಕ್ಕೆ ಅವಕಾಶ ನೀಡಬಾರದು ಎಂಬುದು ಇನ್ನಷ್ಟು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.</p>.<p>ಮುಖ್ಯ ಚುನಾವಣಾ ಆಯುಕ್ತ ಎಸ್. ವೈ ಖುರೇಶಿ ಮತ್ತು ಆಯೋಗದ ಕ್ರಮವನ್ನು ಅಡ್ವಾಣಿ ಅವರು ಮೆಚ್ಚಿ ತಮ್ಮ ಬ್ಲಾಗ್ನಲ್ಲಿ ಬರೆದುಕೊಂಡಿದ್ದಾರೆ.</p>.<p>ಚುನಾವಣೆಯಲ್ಲಿ ಹಣದ ಪ್ರಭಾವ ಹೆಚ್ಚುವುದನ್ನು ತಡೆಯಲು ಸಾಧ್ಯವಿಲ್ಲ ಎಂಬ ಸಿನಿಕತನ ಹೋಗಬೇಕಾದರೆ ಬ್ರಿಟನ್ನಲ್ಲಿ ಜಾರಿಗೆ ತಂದಿರುವ ಚುನಾವಣಾ ಸುಧಾರಣಾ ಕ್ರಮವನ್ನು ಭಾರತದಲ್ಲೂ ತರಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>ಚುನಾವಣಾ ಆಯೋಗವು ಕಾಂಗ್ರೆಸ್ ಒತ್ತಡಕ್ಕೆ ಮಣಿದು ಕೆಲಸ ಮಾಡಬಾರದು ಎಂದು ಜಾರ್ಖಂಡ್ ಬಿಜೆಪಿ ಉಸ್ತುವಾರಿ ಹೊತ್ತಿರುವ ಹರೇಂದರ್ ಪ್ರತಾಪ್ ಸಿಂಗ್ ಟೀಕಿಸಿದ್ದರೂ ಅಡ್ವಾಣಿ ಅವರು ಚುನಾವಣೆ ಆಯೋಗದ ಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಹಿಂದಿನ ಬಾರಿ ಚುನಾವಣೆಯಲ್ಲಿ ಪಕ್ಷೇತರರೊಬ್ಬರು ರಾಜ್ಯಸಭೆ ಪ್ರವೇಶಿಸಲು ಹಣ ಚೆಲ್ಲಿದಾಗ ಸುಮ್ಮನಿದ್ದ ಆಯೋಗವು ಈ ಬಾರಿ ಅತಿಯಾದ ಕ್ರಿಯಾಶೀಲತೆಯನ್ನು ತೋರಿದೆ ಎಂದು ಸಿಂಗ್ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಜಾರ್ಖಂಡ್ ರಾಜ್ಯಸಭೆ ಚುನಾವಣೆಯನ್ನು ರದ್ದುಪಡಿಸಿರುವ ಚುನಾವಣೆ ಆಯೋಗದ ತೀರ್ಮಾನ ಐತಿಹಾಸಿಕವಾದುದು ಎಂದು ಪ್ರಶಂಶಿರುವ ಬಿಜೆಪಿಯ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಅವರು, ಹಣದ ಚೀಲ ಹಿಡಿದುಕೊಂಡು ಚುನಾವಣೆ ಕಣಕ್ಕಿಳಿಯುವ ಪ್ರವೃತ್ತಿಗೆ ಈ ತೀರ್ಮಾನ ಕಡಿವಾಣ ಹಾಕಲಿದೆ ಎಂದು ತಿಳಿಸಿದ್ದಾರೆ.</p>.<p>ರಾಜ್ಯಸಭಾ ಚುನಾವಣೆಯು ಮುಕ್ತವಾಗಿ ನಡೆಯಬೇಕು ಎಂಬ ಉದ್ದೇಶದಿಂದ 2003ರಲ್ಲಿ ಎನ್ಡಿಎ ಸರ್ಕಾರ ಜನಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತಂದಿದೆ. ಈಗ ಈ ವಿಚಾರದಲ್ಲಿ ಇನ್ನೂ ಹೆಚ್ಚಿನ ಗಮನ ಅಗತ್ಯವಾಗಿದೆ ಹಾಗೂ ಚುನಾವಣೆ ಆಯೋಗದ ತೀರ್ಮಾನದಿಂದ ಹಣದ ಪ್ರಭಾವಕ್ಕೆ ಅವಕಾಶ ನೀಡಬಾರದು ಎಂಬುದು ಇನ್ನಷ್ಟು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.</p>.<p>ಮುಖ್ಯ ಚುನಾವಣಾ ಆಯುಕ್ತ ಎಸ್. ವೈ ಖುರೇಶಿ ಮತ್ತು ಆಯೋಗದ ಕ್ರಮವನ್ನು ಅಡ್ವಾಣಿ ಅವರು ಮೆಚ್ಚಿ ತಮ್ಮ ಬ್ಲಾಗ್ನಲ್ಲಿ ಬರೆದುಕೊಂಡಿದ್ದಾರೆ.</p>.<p>ಚುನಾವಣೆಯಲ್ಲಿ ಹಣದ ಪ್ರಭಾವ ಹೆಚ್ಚುವುದನ್ನು ತಡೆಯಲು ಸಾಧ್ಯವಿಲ್ಲ ಎಂಬ ಸಿನಿಕತನ ಹೋಗಬೇಕಾದರೆ ಬ್ರಿಟನ್ನಲ್ಲಿ ಜಾರಿಗೆ ತಂದಿರುವ ಚುನಾವಣಾ ಸುಧಾರಣಾ ಕ್ರಮವನ್ನು ಭಾರತದಲ್ಲೂ ತರಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>ಚುನಾವಣಾ ಆಯೋಗವು ಕಾಂಗ್ರೆಸ್ ಒತ್ತಡಕ್ಕೆ ಮಣಿದು ಕೆಲಸ ಮಾಡಬಾರದು ಎಂದು ಜಾರ್ಖಂಡ್ ಬಿಜೆಪಿ ಉಸ್ತುವಾರಿ ಹೊತ್ತಿರುವ ಹರೇಂದರ್ ಪ್ರತಾಪ್ ಸಿಂಗ್ ಟೀಕಿಸಿದ್ದರೂ ಅಡ್ವಾಣಿ ಅವರು ಚುನಾವಣೆ ಆಯೋಗದ ಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಹಿಂದಿನ ಬಾರಿ ಚುನಾವಣೆಯಲ್ಲಿ ಪಕ್ಷೇತರರೊಬ್ಬರು ರಾಜ್ಯಸಭೆ ಪ್ರವೇಶಿಸಲು ಹಣ ಚೆಲ್ಲಿದಾಗ ಸುಮ್ಮನಿದ್ದ ಆಯೋಗವು ಈ ಬಾರಿ ಅತಿಯಾದ ಕ್ರಿಯಾಶೀಲತೆಯನ್ನು ತೋರಿದೆ ಎಂದು ಸಿಂಗ್ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>