<p><strong>ರಾಂಚಿ (ಪಿಟಿಐ):</strong> ಜಾರ್ಖಂಡ್ ಎಐಸಿಸಿ ಉಸ್ತುವಾರಿಯಾಗಿ ಇತ್ತೀಚೆಗೆ ನೇಮಕಂಡಿರುವ ಬಿ. ಕೆ. ಹರಿಪ್ರಸಾದ್ ಅವರು ಶುಕ್ರವಾರ ಪ್ರಥಮ ಬಾರಿಗೆ ಇಲ್ಲಿನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದಲ್ಲಿನ ವಿರೋಧಿ ಬಣಗಳ ಮಧ್ಯೆ ಘರ್ಷಣೆ ನಡೆಯಿತು ಮತ್ತು ಈ ಗದ್ದಲದಲ್ಲಿ ಯಾರೋ ಗಾಳಿಯಲ್ಲಿ ಗುಂಡು ಹಾರಿಸಿದರು.<br /> <br /> ಕಾಂಗ್ರೆಸ್ ಭವನದ ಬಳಿ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಚಾರ ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ತಿಳಿಸಿದ್ದಾರೆ.<br /> <br /> ಪಕ್ಷದ ಎರಡು ಬಣಗಳ ಮಧ್ಯೆ ಮಾತಿನ ಚಕಮಕಿ ನಡದು ಘರ್ಷಣೆ ಉಂಟಾಯಿತು. ಈ ಸಂದರ್ಭದಲ್ಲಿ ಗುಂಡು ಹಾರಿಸಲಾಯಿತು. ಕಾಂಗ್ರೆಸ್ ಮುಖಂಡರ ಅಂಗರಕ್ಷಕ ಗುಂಡು ಹಾರಿಸಿರಬಹುದು ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.<br /> <br /> ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹರಿಪ್ರಸಾದ್ ಅವರು, ಪಕ್ಷದ ಕಚೇರಿಯ ಹೊರಗಡೆ ಗುಂಡು ಹಾರಿಸಿದ ಸದ್ದು ಕೇಳಿಸಿದೆ, ಈ ಬಗ್ಗೆ ತನಿಖೆ ನಡೆಸುವಂತೆ ಪಿಸಿಸಿ ಅಧ್ಯಕ್ಷ ಸುಖದೇವ್ ಭಗತ್ ಅವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.<br /> <br /> ಗುಂಡು ಹಾರಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಥವಾ ಮುಖಂಡರು ಭಾಗಿಯಾಗಿದ್ದಾರೆ ಎಂದು ತನಿಖೆಯಿಂದ ಕಂಡುಬಂದರೆ ಅಂತಹ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.<br /> <br /> ಕಾಂಗ್ರೆಸ್ ಭವನದ ಒಳಗಡೆಯೇ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ವಿಡಿಯೊ ಚಿತ್ರಣದ ಬಗ್ಗೆ ಅವರ ಗಮನ ಸೆಳೆದಾಗ, `ಭವನದ ಒಳಗಡೆ ಏನೂ ನಡೆದಿಲ್ಲ, ಅದಕ್ಕೆ ನಾನೇ ಸಾಕ್ಷಿ' ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ (ಪಿಟಿಐ):</strong> ಜಾರ್ಖಂಡ್ ಎಐಸಿಸಿ ಉಸ್ತುವಾರಿಯಾಗಿ ಇತ್ತೀಚೆಗೆ ನೇಮಕಂಡಿರುವ ಬಿ. ಕೆ. ಹರಿಪ್ರಸಾದ್ ಅವರು ಶುಕ್ರವಾರ ಪ್ರಥಮ ಬಾರಿಗೆ ಇಲ್ಲಿನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದಲ್ಲಿನ ವಿರೋಧಿ ಬಣಗಳ ಮಧ್ಯೆ ಘರ್ಷಣೆ ನಡೆಯಿತು ಮತ್ತು ಈ ಗದ್ದಲದಲ್ಲಿ ಯಾರೋ ಗಾಳಿಯಲ್ಲಿ ಗುಂಡು ಹಾರಿಸಿದರು.<br /> <br /> ಕಾಂಗ್ರೆಸ್ ಭವನದ ಬಳಿ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಚಾರ ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ತಿಳಿಸಿದ್ದಾರೆ.<br /> <br /> ಪಕ್ಷದ ಎರಡು ಬಣಗಳ ಮಧ್ಯೆ ಮಾತಿನ ಚಕಮಕಿ ನಡದು ಘರ್ಷಣೆ ಉಂಟಾಯಿತು. ಈ ಸಂದರ್ಭದಲ್ಲಿ ಗುಂಡು ಹಾರಿಸಲಾಯಿತು. ಕಾಂಗ್ರೆಸ್ ಮುಖಂಡರ ಅಂಗರಕ್ಷಕ ಗುಂಡು ಹಾರಿಸಿರಬಹುದು ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.<br /> <br /> ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹರಿಪ್ರಸಾದ್ ಅವರು, ಪಕ್ಷದ ಕಚೇರಿಯ ಹೊರಗಡೆ ಗುಂಡು ಹಾರಿಸಿದ ಸದ್ದು ಕೇಳಿಸಿದೆ, ಈ ಬಗ್ಗೆ ತನಿಖೆ ನಡೆಸುವಂತೆ ಪಿಸಿಸಿ ಅಧ್ಯಕ್ಷ ಸುಖದೇವ್ ಭಗತ್ ಅವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.<br /> <br /> ಗುಂಡು ಹಾರಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಥವಾ ಮುಖಂಡರು ಭಾಗಿಯಾಗಿದ್ದಾರೆ ಎಂದು ತನಿಖೆಯಿಂದ ಕಂಡುಬಂದರೆ ಅಂತಹ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.<br /> <br /> ಕಾಂಗ್ರೆಸ್ ಭವನದ ಒಳಗಡೆಯೇ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ವಿಡಿಯೊ ಚಿತ್ರಣದ ಬಗ್ಗೆ ಅವರ ಗಮನ ಸೆಳೆದಾಗ, `ಭವನದ ಒಳಗಡೆ ಏನೂ ನಡೆದಿಲ್ಲ, ಅದಕ್ಕೆ ನಾನೇ ಸಾಕ್ಷಿ' ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>