<p><strong>ಬ್ರಹ್ಮಾವರ:</strong> ಹಾರಾಡಿಯ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಪರಿಸರ ದಿನವನ್ನು ಇತ್ತೀಚೆಗೆ ಆಚರಿಸಲಾಯಿತು.<br /> <br /> ಈ ಸಂದರ್ಭ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕಿ ಡಾ.ಜಯಲಕ್ಷ್ಮೀ ನಾರಾಯಣ್ ಹೆಗ್ಡೆ ಮಾತನಾಡಿ, ಅರಣ್ಯ ರಕ್ಷಣೆಯ ಅನಿವಾರ್ಯತೆ ಮತ್ತು ಆಹಾರ ಸದ್ಬಳಕೆಯ ಬಗ್ಗೆ ತಮ್ಮ ಪೋಷಕರಿಗೆ ಅರಿವನ್ನು ಮೂಡಿಸಬೇಕಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.<br /> <br /> ವಿದ್ಯಾರ್ಥಿಗಳು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದದರು. ಪೇಪರ್ ಬ್ಯಾಗ್ ತಯಾರಿಸುವುದರ ಮೂಲಕ, ಪ್ಲಾಸ್ಟಿಕ್ ಬಳಕೆಯ ವಿರೋಧಕ್ಕೆ ಪುಷ್ಟಿ ನೀಡಿದರು. ನಂತರ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ಪ್ರಹಸನ, ನೃತ್ಯ ಮತ್ತು ಸಮೂಹಗಾಯನಗಳು ಎಲ್ಲರಲ್ಲೂ ಪರಿಸರ ಜಾಗೃತಿ ಮೂಡಿಸಿತು.<br /> <br /> ಸಂಸ್ಥೆಯ ಪ್ರಾಂಶುಪಾಲ ಜಾರ್ಜ್ ಕುರಿಯನ್ ಪರಿಸರವನ್ನು ಪ್ರೀತಿಸಿ, ಮಾಲಿನ್ಯವನ್ನು ತಡೆಗಟ್ಟುವಲ್ಲಿ<br /> ಪ್ರತಿಯೊಬ್ಬರ ಪ್ರಯತ್ನ ಅತಿ ಅಗತ್ಯ ಎಂದರು. ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ, ಅದು ಜೀವನ ಪರ್ಯಂತ ಆಚರಿಸುವಂತದ್ದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ಹಾರಾಡಿಯ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಪರಿಸರ ದಿನವನ್ನು ಇತ್ತೀಚೆಗೆ ಆಚರಿಸಲಾಯಿತು.<br /> <br /> ಈ ಸಂದರ್ಭ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕಿ ಡಾ.ಜಯಲಕ್ಷ್ಮೀ ನಾರಾಯಣ್ ಹೆಗ್ಡೆ ಮಾತನಾಡಿ, ಅರಣ್ಯ ರಕ್ಷಣೆಯ ಅನಿವಾರ್ಯತೆ ಮತ್ತು ಆಹಾರ ಸದ್ಬಳಕೆಯ ಬಗ್ಗೆ ತಮ್ಮ ಪೋಷಕರಿಗೆ ಅರಿವನ್ನು ಮೂಡಿಸಬೇಕಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.<br /> <br /> ವಿದ್ಯಾರ್ಥಿಗಳು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದದರು. ಪೇಪರ್ ಬ್ಯಾಗ್ ತಯಾರಿಸುವುದರ ಮೂಲಕ, ಪ್ಲಾಸ್ಟಿಕ್ ಬಳಕೆಯ ವಿರೋಧಕ್ಕೆ ಪುಷ್ಟಿ ನೀಡಿದರು. ನಂತರ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ಪ್ರಹಸನ, ನೃತ್ಯ ಮತ್ತು ಸಮೂಹಗಾಯನಗಳು ಎಲ್ಲರಲ್ಲೂ ಪರಿಸರ ಜಾಗೃತಿ ಮೂಡಿಸಿತು.<br /> <br /> ಸಂಸ್ಥೆಯ ಪ್ರಾಂಶುಪಾಲ ಜಾರ್ಜ್ ಕುರಿಯನ್ ಪರಿಸರವನ್ನು ಪ್ರೀತಿಸಿ, ಮಾಲಿನ್ಯವನ್ನು ತಡೆಗಟ್ಟುವಲ್ಲಿ<br /> ಪ್ರತಿಯೊಬ್ಬರ ಪ್ರಯತ್ನ ಅತಿ ಅಗತ್ಯ ಎಂದರು. ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ, ಅದು ಜೀವನ ಪರ್ಯಂತ ಆಚರಿಸುವಂತದ್ದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>