<p>ನವದೆಹಲಿ (ಪಿಟಿಐ): `ತೆರಿಗೆ ತಪ್ಪಿಸುವ ಪ್ರವೃತ್ತಿ ತಡೆ ಸಾಮಾನ್ಯ ನಿಯಮ (ಜಿಎಎಆರ್) ಸಂಬಂಧಿಸಿದ ಎಲ್ಲ ಗೊಂದಲಗಳನ್ನು ಹಣಕಾಸು ಸಚಿವಾಲಯ ಶೀಘ್ರದಲ್ಲೇ ಇತ್ಯರ್ಥ ಪಡಿಸಲಿದೆ~ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. <br /> <br /> `ಬಜೆಟ್ನಲ್ಲಿ `ಜಿಎಎಆರ್~ ಪ್ರಸ್ತಾವ ಬಂದಾಗಲೇ ಮುಂದೊಂದು ದಿನ ಇದು ದೊಡ್ಡ ಸಮಸ್ಯೆ ಸೃಷ್ಟಿಸಲಿದೆ ಎನ್ನುವುದು ಸ್ಪಷ್ಟವಾಗಿತ್ತು. ಈಗ ಹಣಕಾಸು ಖಾತೆ ಜವಾಬ್ದಾರಿ ವಹಿಸಿಕೊಂಡಿರುವ ಪ್ರಧಾನಿ ಅವರೇ ಈ ಅಸ್ಥಿರತೆಯನ್ನು ಬಗೆಹರಿಸಲಿದ್ದಾರೆ ಎಂದು ಅವರು ಭಾನುವಾರ ಇಲ್ಲಿ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದರು. <br /> <br /> `ಹಿಂದಿನ ಹಣಕಾಸು ಸಚಿವರು (ಪ್ರಣವ್ ಮುಖರ್ಜಿ) ಸಮಸ್ಯೆಯಾಗಿದ್ದರೇ? ಎನ್ನುವ ಪ್ರಶ್ನೆಗೆ ಮೊಂಟೆಕ್, `ಮಾಧ್ಯಮಗಳು ಯಾವಾಗಲೂ ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿ ಕಟ್ಟುಕಟ್ಟಲು ಯತ್ನಿಸುತ್ತಿರುತ್ತವೆ. ಪ್ರಧಾನಿ ಮತ್ತು ಪ್ರಣವ್ ವಿರುದ್ಧ ಬರುತ್ತಿರುವ ವರದಿಗಳು ಇದನ್ನೇ ಪ್ರತಿಬಿಂಬಿಸುತ್ತಿವೆ~ ಎಂದರು. <br /> `ಜಿಎಎಆರ್~ ದೊಡ್ಡ ವಿಷಯ. ಈ ಕುರಿತು ಹೂಡಿಕೆದಾರರಲ್ಲಿ ಜಾಗೃತಿ ಮೂಡಿಸಲು ಹಣಕಾಸು ಸಚಿವಾಲಯ ಪ್ರಯತ್ನಿಸುತ್ತಿದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): `ತೆರಿಗೆ ತಪ್ಪಿಸುವ ಪ್ರವೃತ್ತಿ ತಡೆ ಸಾಮಾನ್ಯ ನಿಯಮ (ಜಿಎಎಆರ್) ಸಂಬಂಧಿಸಿದ ಎಲ್ಲ ಗೊಂದಲಗಳನ್ನು ಹಣಕಾಸು ಸಚಿವಾಲಯ ಶೀಘ್ರದಲ್ಲೇ ಇತ್ಯರ್ಥ ಪಡಿಸಲಿದೆ~ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. <br /> <br /> `ಬಜೆಟ್ನಲ್ಲಿ `ಜಿಎಎಆರ್~ ಪ್ರಸ್ತಾವ ಬಂದಾಗಲೇ ಮುಂದೊಂದು ದಿನ ಇದು ದೊಡ್ಡ ಸಮಸ್ಯೆ ಸೃಷ್ಟಿಸಲಿದೆ ಎನ್ನುವುದು ಸ್ಪಷ್ಟವಾಗಿತ್ತು. ಈಗ ಹಣಕಾಸು ಖಾತೆ ಜವಾಬ್ದಾರಿ ವಹಿಸಿಕೊಂಡಿರುವ ಪ್ರಧಾನಿ ಅವರೇ ಈ ಅಸ್ಥಿರತೆಯನ್ನು ಬಗೆಹರಿಸಲಿದ್ದಾರೆ ಎಂದು ಅವರು ಭಾನುವಾರ ಇಲ್ಲಿ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದರು. <br /> <br /> `ಹಿಂದಿನ ಹಣಕಾಸು ಸಚಿವರು (ಪ್ರಣವ್ ಮುಖರ್ಜಿ) ಸಮಸ್ಯೆಯಾಗಿದ್ದರೇ? ಎನ್ನುವ ಪ್ರಶ್ನೆಗೆ ಮೊಂಟೆಕ್, `ಮಾಧ್ಯಮಗಳು ಯಾವಾಗಲೂ ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿ ಕಟ್ಟುಕಟ್ಟಲು ಯತ್ನಿಸುತ್ತಿರುತ್ತವೆ. ಪ್ರಧಾನಿ ಮತ್ತು ಪ್ರಣವ್ ವಿರುದ್ಧ ಬರುತ್ತಿರುವ ವರದಿಗಳು ಇದನ್ನೇ ಪ್ರತಿಬಿಂಬಿಸುತ್ತಿವೆ~ ಎಂದರು. <br /> `ಜಿಎಎಆರ್~ ದೊಡ್ಡ ವಿಷಯ. ಈ ಕುರಿತು ಹೂಡಿಕೆದಾರರಲ್ಲಿ ಜಾಗೃತಿ ಮೂಡಿಸಲು ಹಣಕಾಸು ಸಚಿವಾಲಯ ಪ್ರಯತ್ನಿಸುತ್ತಿದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>