<p><strong>ನವದೆಹಲಿ (ಪಿಟಿಐ):</strong> ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೆ ಸಂಬಂಧಿಸಿದಂತೆ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದಿಸಿದೆ. ಮೂಲಗಳ ಪ್ರಕಾರ, ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಪುಟ ಅನುಮೋದಿಸಿದರೂ, ಇದರಲ್ಲಿ ಇನ್ನೂ ಅನೇಕ ಕಾನೂನಿನ ತೊಡಕುಗಳಿವೆ. ಕಾನೂನು ಸಚಿವಾಲಯ ಈ ಸಂಗತಿಗಳನ್ನು ಪರಿಶೀಲಿಸಲಿದೆ. ಆದಾಗ್ಯೂ ‘ಜಿಎಸ್ಟಿ’ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಇದರಿಂದ ಕೇಂದ್ರಕ್ಕೆ ರಹದಾರಿ ಲಭಿಸಿದಂತಾಗಿದೆ. <br /> <br /> ‘ಸಂವಿಧಾನ ತಿದ್ದುಪಡಿ ಮಸೂದೆಗೆ ಅನುಮೋದನೆ ಲಭಿಸಿದೆ. ನಾವು ಈ ಅಧಿವೇಶನದಲ್ಲೇ ಇದನ್ನು ಸಂಸತ್ತಿನಲ್ಲಿ ಮಂಡಿಸುತ್ತೇವೆ’ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ. ‘ಸಂವಿಧಾನ ತಿದ್ದುಪಡಿ ಮಸೂದೆಯ ಅಂತಿಮ ಕರಡನ್ನು ಹಣಕಾಸು ಸಚಿವಾಲಯ ಸಿದ್ಧಪಡಿಸುತ್ತಿದೆ. ಹೊಸ ತೆರಿಗೆಗೆ ಸಂಬಂಧಿಸಿದಂತೆ ಚರ್ಚೆಗಳು ಈಗಾಗಲೇ ಪ್ರಾರಂಭವಾಗಿದೆ’ ಎಂದು ಅವರು ಹೇಳಿದರು. <br /> <br /> ಈ ಮೊದಲು ಕೇಂದ್ರ ಸಿದ್ಧ ಪಡಿಸಿದ್ದ ಮೂರು ಕರಡು ಮಸೂದೆಗಳನ್ನು ಬಿಜೆಪಿ ಆಡಳಿತವಿರುವ ರಾಜ್ಯಗಳು ವಿರೋಧಿಸಿದ್ದವು. ‘ಜಿಎಸ್ಟಿ’ ಜಾರಿಯಿಂದ ರಾಜ್ಯಗಳ ತೆರಿಗೆ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವರಿಗೆ ಪರಮಾಧಿಕಾರ (ವಿಟೋ) ಲಭಿಸುತ್ತದಂತಾಗುತ್ತದೆ ಎನ್ನುವುದು ಈ ವಿರೋಧಕ್ಕೆ ಮುಖ್ಯ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳ ಸೂಚನೆಯ ಮೇರೆಗೆ ‘ವಿಶೇಷ ಜಿಎಸ್ಟಿ’ ಸಮಿತಿ ರಚಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೆ ಸಂಬಂಧಿಸಿದಂತೆ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದಿಸಿದೆ. ಮೂಲಗಳ ಪ್ರಕಾರ, ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಪುಟ ಅನುಮೋದಿಸಿದರೂ, ಇದರಲ್ಲಿ ಇನ್ನೂ ಅನೇಕ ಕಾನೂನಿನ ತೊಡಕುಗಳಿವೆ. ಕಾನೂನು ಸಚಿವಾಲಯ ಈ ಸಂಗತಿಗಳನ್ನು ಪರಿಶೀಲಿಸಲಿದೆ. ಆದಾಗ್ಯೂ ‘ಜಿಎಸ್ಟಿ’ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಇದರಿಂದ ಕೇಂದ್ರಕ್ಕೆ ರಹದಾರಿ ಲಭಿಸಿದಂತಾಗಿದೆ. <br /> <br /> ‘ಸಂವಿಧಾನ ತಿದ್ದುಪಡಿ ಮಸೂದೆಗೆ ಅನುಮೋದನೆ ಲಭಿಸಿದೆ. ನಾವು ಈ ಅಧಿವೇಶನದಲ್ಲೇ ಇದನ್ನು ಸಂಸತ್ತಿನಲ್ಲಿ ಮಂಡಿಸುತ್ತೇವೆ’ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ. ‘ಸಂವಿಧಾನ ತಿದ್ದುಪಡಿ ಮಸೂದೆಯ ಅಂತಿಮ ಕರಡನ್ನು ಹಣಕಾಸು ಸಚಿವಾಲಯ ಸಿದ್ಧಪಡಿಸುತ್ತಿದೆ. ಹೊಸ ತೆರಿಗೆಗೆ ಸಂಬಂಧಿಸಿದಂತೆ ಚರ್ಚೆಗಳು ಈಗಾಗಲೇ ಪ್ರಾರಂಭವಾಗಿದೆ’ ಎಂದು ಅವರು ಹೇಳಿದರು. <br /> <br /> ಈ ಮೊದಲು ಕೇಂದ್ರ ಸಿದ್ಧ ಪಡಿಸಿದ್ದ ಮೂರು ಕರಡು ಮಸೂದೆಗಳನ್ನು ಬಿಜೆಪಿ ಆಡಳಿತವಿರುವ ರಾಜ್ಯಗಳು ವಿರೋಧಿಸಿದ್ದವು. ‘ಜಿಎಸ್ಟಿ’ ಜಾರಿಯಿಂದ ರಾಜ್ಯಗಳ ತೆರಿಗೆ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವರಿಗೆ ಪರಮಾಧಿಕಾರ (ವಿಟೋ) ಲಭಿಸುತ್ತದಂತಾಗುತ್ತದೆ ಎನ್ನುವುದು ಈ ವಿರೋಧಕ್ಕೆ ಮುಖ್ಯ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳ ಸೂಚನೆಯ ಮೇರೆಗೆ ‘ವಿಶೇಷ ಜಿಎಸ್ಟಿ’ ಸಮಿತಿ ರಚಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>