<p>ನವದೆಹಲಿ (ಪಿಟಿಐ): ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಯುವ ಸೂಚನೆಗಳು ಕಂಡುಬಂದಿವೆ. ಇದರ ಜತೆಗೆ ಉತ್ತಮ ಮುಂಗಾರು ಲಭಿಸಿದರೆ ಖಂಡಿತ ದೇಶದ ಆರ್ಥಿಕ ವೃದ್ಧಿ ದರ (ಜಿಡಿಪಿ) ಚೇತರಿಸಿಕೊಳ್ಳಲಿದೆ~ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. <br /> <br /> ಸೋಮವಾರ ಇಲ್ಲಿ ಕೇಂದ್ರ ಅಬಕಾರಿ ಮತ್ತು ಸೀಮಾ ಸುಂಕ ಮಂಡಳಿಯ (ಸಿಬಿಇಸಿ) ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> `ಮೊದಲನೇಯ ಸುತ್ತಿನ ಜಾಗತಿಕ ಆರ್ಥಿಕ ಹಿಂಜರಿತಕ್ಕಿಂತಲೂ ವೇಗವಾಗಿ ಎರಡನೇಯ ಸುತ್ತಿನ ಆರ್ಥಿಕ ಹಿಂಜರಿತ ಭೀತಿ ಪ್ರಪಂಚವನ್ನು ಆವರಿಸಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಆರ್ಥಿಕ ಬೆಳವಣಿಗೆಗಳಿಗೆ ತಕ್ಕಂತೆ ಪೂರ್ವಭಾವಿಯಾಗಿ ಸಕಾರಾತ್ಮಕ ಆರ್ಥಿಕ ನೀತಿಗಳನ್ನು ಕೈಗೊಳ್ಳುವ ಅಗತ್ಯ ಇದೆ. ಅಂತಹ ಮುನ್ನೋಟದ ಕೊರತೆ ಇದೆ~ ಎಂದರು. <br /> <br /> ಸದ್ಯ ದೇಶದ ಆರ್ಥಿಕತೆಯು ಗರಿಷ್ಠ ವಿತ್ತೀಯ ಕೊರತೆಯೊಂದಿಗೆ ದುರ್ಗಮ ಹಾದಿಯಲ್ಲಿದೆ. ಕಳೆದ ಹಣಕಾಸು ವರ್ಷದಲ್ಲಿ (2011-12) ಶೇ 6.5ರಷ್ಟು `ಜಿಡಿಪಿ~ ದಾಖಲಾಗಿದ್ದು 9 ವರ್ಷಗಳ ಹಿಂದಿನ ಮಟ್ಟಕ್ಕೆ ಕುಸಿತ ಕಂಡಿದೆ. <br /> <br /> ಡಾಲರ್ ಎದುರು ರೂಪಾಯಿ ವಿನಿಮಯ ಮೌಲ್ಯ ಸಾರ್ವಕಾಲಿಕ ದಾಖಲೆ ಮಟ್ಟ ರೂ 56.52ಕ್ಕೆ ಕುಸಿತ ಕಂಡಿದೆ. ಇಂತಹ ಅನೇಕ ಪ್ರತಿಕೂಲ ಪರಿಸ್ಥಿತಿಗಳು ಇದ್ದರೂ, ಮುಂಬರುವ ದಿನಗಳಲ್ಲಿ ಆರ್ಥಿಕ ಸ್ಥಿತಿಗತಿ ಸುಧಾರಿಸಲಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಯುವ ಸೂಚನೆಗಳು ಕಂಡುಬಂದಿವೆ. ಇದರ ಜತೆಗೆ ಉತ್ತಮ ಮುಂಗಾರು ಲಭಿಸಿದರೆ ಖಂಡಿತ ದೇಶದ ಆರ್ಥಿಕ ವೃದ್ಧಿ ದರ (ಜಿಡಿಪಿ) ಚೇತರಿಸಿಕೊಳ್ಳಲಿದೆ~ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. <br /> <br /> ಸೋಮವಾರ ಇಲ್ಲಿ ಕೇಂದ್ರ ಅಬಕಾರಿ ಮತ್ತು ಸೀಮಾ ಸುಂಕ ಮಂಡಳಿಯ (ಸಿಬಿಇಸಿ) ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> `ಮೊದಲನೇಯ ಸುತ್ತಿನ ಜಾಗತಿಕ ಆರ್ಥಿಕ ಹಿಂಜರಿತಕ್ಕಿಂತಲೂ ವೇಗವಾಗಿ ಎರಡನೇಯ ಸುತ್ತಿನ ಆರ್ಥಿಕ ಹಿಂಜರಿತ ಭೀತಿ ಪ್ರಪಂಚವನ್ನು ಆವರಿಸಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಆರ್ಥಿಕ ಬೆಳವಣಿಗೆಗಳಿಗೆ ತಕ್ಕಂತೆ ಪೂರ್ವಭಾವಿಯಾಗಿ ಸಕಾರಾತ್ಮಕ ಆರ್ಥಿಕ ನೀತಿಗಳನ್ನು ಕೈಗೊಳ್ಳುವ ಅಗತ್ಯ ಇದೆ. ಅಂತಹ ಮುನ್ನೋಟದ ಕೊರತೆ ಇದೆ~ ಎಂದರು. <br /> <br /> ಸದ್ಯ ದೇಶದ ಆರ್ಥಿಕತೆಯು ಗರಿಷ್ಠ ವಿತ್ತೀಯ ಕೊರತೆಯೊಂದಿಗೆ ದುರ್ಗಮ ಹಾದಿಯಲ್ಲಿದೆ. ಕಳೆದ ಹಣಕಾಸು ವರ್ಷದಲ್ಲಿ (2011-12) ಶೇ 6.5ರಷ್ಟು `ಜಿಡಿಪಿ~ ದಾಖಲಾಗಿದ್ದು 9 ವರ್ಷಗಳ ಹಿಂದಿನ ಮಟ್ಟಕ್ಕೆ ಕುಸಿತ ಕಂಡಿದೆ. <br /> <br /> ಡಾಲರ್ ಎದುರು ರೂಪಾಯಿ ವಿನಿಮಯ ಮೌಲ್ಯ ಸಾರ್ವಕಾಲಿಕ ದಾಖಲೆ ಮಟ್ಟ ರೂ 56.52ಕ್ಕೆ ಕುಸಿತ ಕಂಡಿದೆ. ಇಂತಹ ಅನೇಕ ಪ್ರತಿಕೂಲ ಪರಿಸ್ಥಿತಿಗಳು ಇದ್ದರೂ, ಮುಂಬರುವ ದಿನಗಳಲ್ಲಿ ಆರ್ಥಿಕ ಸ್ಥಿತಿಗತಿ ಸುಧಾರಿಸಲಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>