<p><strong>ಮಾಲೂರು:</strong> ಸರ್ಕಾರ ರೈತರಿಂದ ಕೃಷಿ ಭೂಮಿ ಕಸಿಯುವುದನ್ನು ನಿಲ್ಲಿಸಿ, ವ್ಯವಸಾಯವನ್ನೆ ಕೈಗಾರಿಕೆಗಳನ್ನಾಗಿ ಅಭಿವೃದ್ಧಿ ಪಡಿಸಬೇಕೆಂದು ರೈತ ಸಂಘದ ಜಿಲ್ಲಾ ಸಂಚಾಲಕ ಎ.ಅಶ್ವಥರೆಡ್ಡಿ ಆಗ್ರಹಿಸಿದರು.<br /> <br /> ಬೆಂಗಳೂರಿನಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ವಿರೋಧ ವ್ಯಕ್ತಪಡಿಸಲು ತಾಲ್ಲೂಕು ರೈತ ಸಂಘದ ಸದಸ್ಯರು ತೆರಳುವ ಮುನ್ನ, ಪಟ್ಟಣದ ತಾಲ್ಲೂಕು ಕಚೇರಿ ಎದುರು ಗುರುವಾರ ಜಿಮ್ ಫಲಕಕ್ಕೆ ಮಸಿ ಬಳಿದರು. ಆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. <br /> <br /> ವಿಶ್ವಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಲು ಹೊರಟಿರುವ ಸರ್ಕಾರ, ಬಹುರಾಷ್ಟ್ರೀಯ ಕಂಪೆನಿಗಳಿಗೆ ಲಕ್ಷಾಂತರ ಎಕರೆ ಗೋಮಾಳ, ಗುಂಡುತೋಪು ಸೇರಿದಂತೆ ಕೃಷಿಗೆ ಪೂರಕವಾದ ಭೂಮಿಯನ್ನು ಪರಭಾರೆ ಮಾಡಲು ಹೊರಟಿದೆ. ಕೃಷಿಗಾಗಿ ವಿಶೇಷ ಬಜೆಟ್ ಮಂಡಿಸಿದ ಸರ್ಕಾರ ರೈತರನ್ನೇ ಮರೆತಿದೆ. <br /> <br /> ಇದೇ ರೀತಿ ಮುಂದುವರಿದರೆ ಮುಂದೊಂದು ದಿನ ವಿದೇಶೀಯರ ದಾಸ್ಯಕ್ಕೆ ಒಳಗಾಗಬೇಕಾಗುತ್ತದೆ ಎಂದರು. <br /> ಜನ ಈಗಲೇ ಎಚ್ಚೆತ್ತುಕೊಳ್ಳಬೇಕಾಗಿದೆ. ಆಹಾರ ವಸ್ತುಗಳ ಉತ್ಪಾದನೆಗೆ ಅಗತ್ಯವಾದ ಭೂಮಿ, ನೀರು, ಗೊಬ್ಬರ, ಬೀಜ ಪೂರೈಸಬೇಕಾದ ಸರ್ಕಾರ, ವಿದೇಶಿ ಬಂಡವಾಳ ಹೂಡಿಕೆ ನೆಪದಲ್ಲಿ ಕತ್ತಲ ಕೂಪಕ್ಕೆ ಕೊಂಡೊಯ್ಯುತ್ತಿದೆ ಎಂದು ಆರೋಪಿಸಿದರು. <br /> <br /> ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬೆಡಶೆಟ್ಟಹಳ್ಳಿ ರಮೇಶ್, ಗೌರವಾಧ್ಯಕ್ಷ ಚನ್ನವೀರದೇವರು, ಉಪಾಧ್ಯಕ್ಷ ಚನ್ನಬಚ್ಚೇಗೌಡ, ಪ್ರಧಾನ ಕಾರ್ಯದರ್ಶಿ, ಟಿ.ಇ.ದೇವರಾಜ್ ಭಾಗವಹಿಸಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ಸರ್ಕಾರ ರೈತರಿಂದ ಕೃಷಿ ಭೂಮಿ ಕಸಿಯುವುದನ್ನು ನಿಲ್ಲಿಸಿ, ವ್ಯವಸಾಯವನ್ನೆ ಕೈಗಾರಿಕೆಗಳನ್ನಾಗಿ ಅಭಿವೃದ್ಧಿ ಪಡಿಸಬೇಕೆಂದು ರೈತ ಸಂಘದ ಜಿಲ್ಲಾ ಸಂಚಾಲಕ ಎ.ಅಶ್ವಥರೆಡ್ಡಿ ಆಗ್ರಹಿಸಿದರು.<br /> <br /> ಬೆಂಗಳೂರಿನಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ವಿರೋಧ ವ್ಯಕ್ತಪಡಿಸಲು ತಾಲ್ಲೂಕು ರೈತ ಸಂಘದ ಸದಸ್ಯರು ತೆರಳುವ ಮುನ್ನ, ಪಟ್ಟಣದ ತಾಲ್ಲೂಕು ಕಚೇರಿ ಎದುರು ಗುರುವಾರ ಜಿಮ್ ಫಲಕಕ್ಕೆ ಮಸಿ ಬಳಿದರು. ಆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. <br /> <br /> ವಿಶ್ವಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಲು ಹೊರಟಿರುವ ಸರ್ಕಾರ, ಬಹುರಾಷ್ಟ್ರೀಯ ಕಂಪೆನಿಗಳಿಗೆ ಲಕ್ಷಾಂತರ ಎಕರೆ ಗೋಮಾಳ, ಗುಂಡುತೋಪು ಸೇರಿದಂತೆ ಕೃಷಿಗೆ ಪೂರಕವಾದ ಭೂಮಿಯನ್ನು ಪರಭಾರೆ ಮಾಡಲು ಹೊರಟಿದೆ. ಕೃಷಿಗಾಗಿ ವಿಶೇಷ ಬಜೆಟ್ ಮಂಡಿಸಿದ ಸರ್ಕಾರ ರೈತರನ್ನೇ ಮರೆತಿದೆ. <br /> <br /> ಇದೇ ರೀತಿ ಮುಂದುವರಿದರೆ ಮುಂದೊಂದು ದಿನ ವಿದೇಶೀಯರ ದಾಸ್ಯಕ್ಕೆ ಒಳಗಾಗಬೇಕಾಗುತ್ತದೆ ಎಂದರು. <br /> ಜನ ಈಗಲೇ ಎಚ್ಚೆತ್ತುಕೊಳ್ಳಬೇಕಾಗಿದೆ. ಆಹಾರ ವಸ್ತುಗಳ ಉತ್ಪಾದನೆಗೆ ಅಗತ್ಯವಾದ ಭೂಮಿ, ನೀರು, ಗೊಬ್ಬರ, ಬೀಜ ಪೂರೈಸಬೇಕಾದ ಸರ್ಕಾರ, ವಿದೇಶಿ ಬಂಡವಾಳ ಹೂಡಿಕೆ ನೆಪದಲ್ಲಿ ಕತ್ತಲ ಕೂಪಕ್ಕೆ ಕೊಂಡೊಯ್ಯುತ್ತಿದೆ ಎಂದು ಆರೋಪಿಸಿದರು. <br /> <br /> ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬೆಡಶೆಟ್ಟಹಳ್ಳಿ ರಮೇಶ್, ಗೌರವಾಧ್ಯಕ್ಷ ಚನ್ನವೀರದೇವರು, ಉಪಾಧ್ಯಕ್ಷ ಚನ್ನಬಚ್ಚೇಗೌಡ, ಪ್ರಧಾನ ಕಾರ್ಯದರ್ಶಿ, ಟಿ.ಇ.ದೇವರಾಜ್ ಭಾಗವಹಿಸಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>