<p><strong>ರಾಯಚೂರು:</strong> ರಾಯಚೂರು ಜಿಲ್ಲಾ ಲೀಡ್ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಸೋಮವಾರ ಜಿಲ್ಲಾ ಪಂಚಾಯಿತಿ ಕಚೇರಿಯ ಜಲ ನಿರ್ಮಲ ವಿಭಾಗದ ಸಭಾಭವನದಲ್ಲಿ `ರಾಯಚೂರು ಜಿಲ್ಲೆಯ ವಾರ್ಷಿಕ ಸಾಲ ಯೋಜನೆ-2013-14'ನ್ನು ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜ ಬಿಡುಗಡೆ ಮಾಡಿದರು.<br /> <br /> ವಾರ್ಷಿಕ ಸಾಲ ಪತ್ರ ಯೋಜನೆ ಬಗ್ಗೆ ವಿವರಿಸಿದ ಜಿಲ್ಲಾ ಲೀಡ್ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಹೈದರಾಬಾದ್ ಮುಖ್ಯ ವ್ಯವಸ್ಥಾಪಕ ಎಸ್.ಶೇಖರಗೌಡ ಅವರು, 2013-14ನೇ ಸಾಲಿನ ವಾರ್ಷಿಕ ಸಾಲ ಯೋಜನೆಯು 2,134.29 ಕೋಟಿ ಗುರಿ ಹೊಂದಿದೆ. 2012-13ರಲ್ಲಿ 1,764.17 ಕೋಟಿ ಗುರಿ ಹೊಂದಲಾಗಿತ್ತು. ಕಳೆದ ವರ್ಷದ ವಾರ್ಷಿಕ ಸಾಲ ಯೋಜನೆಗೆ ಹೋಲಿಸಿದರೆ 370.12 ಕೋಟಿ ಹೆಚ್ಚಳವಾಗಿದೆ. ಶೇ 20.98 ರಷ್ಟು ಸಾಲ ವಿತರಣೆ ಗುರಿ ಪ್ರಮಾಣ ಹೊಂದಿದೆ ಎಂದು ಹೇಳಿದರು.<br /> <br /> ರಿಸರ್ವ್ ಬ್ಯಾಂಕ್ನ ಬೆಂಗಳೂರಿನ ಸಹ ಪ್ರಧಾನ ವ್ಯವಸ್ಥಾಪಕ ವಿ.ಶ್ರೀನಿವಾಸ, ನಬಾರ್ಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಎನ್.ನಾರಾಯಣರಾಜು, ಜಿ.ಪಂ ಉಪಕಾರ್ಯದರ್ಶಿ ಮಹಮ್ಮದ್ ಯೂಸೂಫ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.<br /> <br /> ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ನ ಸಹ ಪ್ರಧಾನ ವ್ಯವಸ್ಥಾಪಕ ಆರ್.ಜಿ ಹೆಬ್ಬಾಳಕರ್ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ರಾಯಚೂರು ಜಿಲ್ಲಾ ಲೀಡ್ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಸೋಮವಾರ ಜಿಲ್ಲಾ ಪಂಚಾಯಿತಿ ಕಚೇರಿಯ ಜಲ ನಿರ್ಮಲ ವಿಭಾಗದ ಸಭಾಭವನದಲ್ಲಿ `ರಾಯಚೂರು ಜಿಲ್ಲೆಯ ವಾರ್ಷಿಕ ಸಾಲ ಯೋಜನೆ-2013-14'ನ್ನು ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜ ಬಿಡುಗಡೆ ಮಾಡಿದರು.<br /> <br /> ವಾರ್ಷಿಕ ಸಾಲ ಪತ್ರ ಯೋಜನೆ ಬಗ್ಗೆ ವಿವರಿಸಿದ ಜಿಲ್ಲಾ ಲೀಡ್ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಹೈದರಾಬಾದ್ ಮುಖ್ಯ ವ್ಯವಸ್ಥಾಪಕ ಎಸ್.ಶೇಖರಗೌಡ ಅವರು, 2013-14ನೇ ಸಾಲಿನ ವಾರ್ಷಿಕ ಸಾಲ ಯೋಜನೆಯು 2,134.29 ಕೋಟಿ ಗುರಿ ಹೊಂದಿದೆ. 2012-13ರಲ್ಲಿ 1,764.17 ಕೋಟಿ ಗುರಿ ಹೊಂದಲಾಗಿತ್ತು. ಕಳೆದ ವರ್ಷದ ವಾರ್ಷಿಕ ಸಾಲ ಯೋಜನೆಗೆ ಹೋಲಿಸಿದರೆ 370.12 ಕೋಟಿ ಹೆಚ್ಚಳವಾಗಿದೆ. ಶೇ 20.98 ರಷ್ಟು ಸಾಲ ವಿತರಣೆ ಗುರಿ ಪ್ರಮಾಣ ಹೊಂದಿದೆ ಎಂದು ಹೇಳಿದರು.<br /> <br /> ರಿಸರ್ವ್ ಬ್ಯಾಂಕ್ನ ಬೆಂಗಳೂರಿನ ಸಹ ಪ್ರಧಾನ ವ್ಯವಸ್ಥಾಪಕ ವಿ.ಶ್ರೀನಿವಾಸ, ನಬಾರ್ಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಎನ್.ನಾರಾಯಣರಾಜು, ಜಿ.ಪಂ ಉಪಕಾರ್ಯದರ್ಶಿ ಮಹಮ್ಮದ್ ಯೂಸೂಫ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.<br /> <br /> ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ನ ಸಹ ಪ್ರಧಾನ ವ್ಯವಸ್ಥಾಪಕ ಆರ್.ಜಿ ಹೆಬ್ಬಾಳಕರ್ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>