<p><strong>ಚಾಮರಾಜನಗರ</strong>: ಜಿಲ್ಲೆಗೆ ಅಂಟಿರುವ ಕಳಂಕದ ಕಪ್ಪು ಪಟ್ಟಿ ತೊಡೆದುಹಾಕಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೋಮವಾರ ತಿಳಿಸಿದರು.<br /> <br /> ನಗರಕ್ಕೆ ಮೊದಲನೇ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಗಮಿಸಿದ ಅವರು ಚಾಮರಾಜೇಶ್ವರ ದೇವಸ್ಥಾನದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ಜಿಲ್ಲೆಯಲ್ಲಿ ಆಗಬೇಕಾಗಿರುವ ಅಗತ್ಯ ಕಾಮಗಾರಿ ಮತ್ತು ಅರ್ಧಕ್ಕೆ ನಿಂತ ಕೆಲಸವನ್ನು ತುರ್ತು ಗತಿಯಲ್ಲಿ ಮಾಡುವುದಕ್ಕೆ ಒತ್ತು ನೀಡಲಾಗುವುದು ಎಂದರು.<br /> <br /> ಬರಗಾಲ ವ್ಯಾಪಕವಾಗಿರುವುದರಿಂದ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಪಕ್ಷಾತೀತವಾಗಿ ಜಿಲ್ಲೆಗೆ ಆಗಬೇಕಾಗಿರುವ ಅಭಿವೃದ್ಧಿಗೆ ಒತ್ತು ಕೊಡುತ್ತೇನೆ. ಮಳೆ ಜಾಸ್ತಿ ಬಂದು ಕೆರೆ ಕಟ್ಟೆ ತುಂಬಿದರೆ ರಾಜ್ಯದ ಅಭಿವೃದ್ಧಿಯಲ್ಲಿ ಜಿಲ್ಲೆಯನ್ನು ಮುಂಚೂಣಿಯಲ್ಲಿ ತೆಗೆದುಕೊಂಡು ಹೋಗುತ್ತೆನೆ ಎಂದು ತಿಳಿಸಿದರು. <br /> <br /> <strong>ಸಿಎಂ ಬಂದೇ ಬರುತ್ತಾರೆ!</strong><br /> ರಾಜ್ಯದಲ್ಲಿ ಮಂತ್ರಿಗಳು ಹಾಗೂ ಮುಖ್ಯಮಂತ್ರಿ ಒಂದೇ ನಾಣ್ಯದ ಎರಡು ಮುಖ. ಆದ್ದರಿಂದ ಮುಖ್ಯಮಂತ್ರಿ ಜಿಲ್ಲೆಗೆ ಬಂದೇ ಬರುತ್ತಾರೆ. ನೀರಿಲ್ಲದೆ ಜಾನುವಾರುಗಳಿಗೆ ಆಗುವ ನೋವು, ಗುಳೆ ಹೋಗುವ ತೊಂದರೆ ನಿವಾರಣೆಗೆ ಮಳೆ ಅವಶ್ಯವಾಗಿದೆ. ಈ ಜಿಲ್ಲೆಗೆ ಎಲ್ಲರೂ ಬರುವ ಕಾಲ ಕೂಡಿ ಬಂದಿದೆ ಎಂದು ತಿಳಿಸಿದರು.<br /> ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಆರ್.ಕೃಷ್ಣಮೂರ್ತಿ, ವಿಧಾನಪರಿಷ್ ಸದಸ್ಯ ಪ್ರೊ.ಮಲ್ಲಿಕಾರ್ಜುನಪ್ಪ, ಶಾಸಕ ಜಿ.ಎನ್.ನಂಜುಂಡಸ್ವಾಮಿ, ಚೂಡಾ ಅಧ್ಯಕ್ಷ ಬಾಲಸುಬ್ರಹ್ಮಣ್ಯ, ನಗರಸಭಾ ಸದಸ್ಯ ಗಣೇಶ್ ದೀಕ್ಷಿತ್ ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಜಿಲ್ಲೆಗೆ ಅಂಟಿರುವ ಕಳಂಕದ ಕಪ್ಪು ಪಟ್ಟಿ ತೊಡೆದುಹಾಕಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೋಮವಾರ ತಿಳಿಸಿದರು.<br /> <br /> ನಗರಕ್ಕೆ ಮೊದಲನೇ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಗಮಿಸಿದ ಅವರು ಚಾಮರಾಜೇಶ್ವರ ದೇವಸ್ಥಾನದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ಜಿಲ್ಲೆಯಲ್ಲಿ ಆಗಬೇಕಾಗಿರುವ ಅಗತ್ಯ ಕಾಮಗಾರಿ ಮತ್ತು ಅರ್ಧಕ್ಕೆ ನಿಂತ ಕೆಲಸವನ್ನು ತುರ್ತು ಗತಿಯಲ್ಲಿ ಮಾಡುವುದಕ್ಕೆ ಒತ್ತು ನೀಡಲಾಗುವುದು ಎಂದರು.<br /> <br /> ಬರಗಾಲ ವ್ಯಾಪಕವಾಗಿರುವುದರಿಂದ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಪಕ್ಷಾತೀತವಾಗಿ ಜಿಲ್ಲೆಗೆ ಆಗಬೇಕಾಗಿರುವ ಅಭಿವೃದ್ಧಿಗೆ ಒತ್ತು ಕೊಡುತ್ತೇನೆ. ಮಳೆ ಜಾಸ್ತಿ ಬಂದು ಕೆರೆ ಕಟ್ಟೆ ತುಂಬಿದರೆ ರಾಜ್ಯದ ಅಭಿವೃದ್ಧಿಯಲ್ಲಿ ಜಿಲ್ಲೆಯನ್ನು ಮುಂಚೂಣಿಯಲ್ಲಿ ತೆಗೆದುಕೊಂಡು ಹೋಗುತ್ತೆನೆ ಎಂದು ತಿಳಿಸಿದರು. <br /> <br /> <strong>ಸಿಎಂ ಬಂದೇ ಬರುತ್ತಾರೆ!</strong><br /> ರಾಜ್ಯದಲ್ಲಿ ಮಂತ್ರಿಗಳು ಹಾಗೂ ಮುಖ್ಯಮಂತ್ರಿ ಒಂದೇ ನಾಣ್ಯದ ಎರಡು ಮುಖ. ಆದ್ದರಿಂದ ಮುಖ್ಯಮಂತ್ರಿ ಜಿಲ್ಲೆಗೆ ಬಂದೇ ಬರುತ್ತಾರೆ. ನೀರಿಲ್ಲದೆ ಜಾನುವಾರುಗಳಿಗೆ ಆಗುವ ನೋವು, ಗುಳೆ ಹೋಗುವ ತೊಂದರೆ ನಿವಾರಣೆಗೆ ಮಳೆ ಅವಶ್ಯವಾಗಿದೆ. ಈ ಜಿಲ್ಲೆಗೆ ಎಲ್ಲರೂ ಬರುವ ಕಾಲ ಕೂಡಿ ಬಂದಿದೆ ಎಂದು ತಿಳಿಸಿದರು.<br /> ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಆರ್.ಕೃಷ್ಣಮೂರ್ತಿ, ವಿಧಾನಪರಿಷ್ ಸದಸ್ಯ ಪ್ರೊ.ಮಲ್ಲಿಕಾರ್ಜುನಪ್ಪ, ಶಾಸಕ ಜಿ.ಎನ್.ನಂಜುಂಡಸ್ವಾಮಿ, ಚೂಡಾ ಅಧ್ಯಕ್ಷ ಬಾಲಸುಬ್ರಹ್ಮಣ್ಯ, ನಗರಸಭಾ ಸದಸ್ಯ ಗಣೇಶ್ ದೀಕ್ಷಿತ್ ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>