ಜೀವದಾನ ತೀರ್ಪು ಪರಾಮರ್ಶೆಗೆ ಕೇಂದ್ರ ಮನವಿ

ನವದೆಹಲಿ (ಪಿಟಿಐ) : ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವ ತೀರ್ಪನ್ನು ಪರಾಮರ್ಶಿಸುವಂತೆ ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ಶನಿವಾರ ಮನವಿ ಸಲ್ಲಿಸಿದೆ.
ರಾಜೀವ್ ಗಾಂಧಿ ಹತ್ಯೆಯಲ್ಲಿ ಭಾಗಿಯಾಗಿದ್ದ ಮೂವರು ಅಪರಾಧಿಗಳೂ ಸೇರಿದಂತೆ 15 ಮಂದಿಗೆ ಜೀವದಾನ ನೀಡಿದ ಜನವರಿ 21ರ ತೀರ್ಪು ದೋಷದಿಂದ ಕೂಡಿದ್ದು ನ್ಯಾಯಸಮ್ಮತವಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.
ಅಲ್ಲದೆ, ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತಹ ಮಹತ್ವದ ವಿಷಯಗಳನ್ನು ಸಂವಿಧಾನ ಪೀಠ ವಿಚಾರಣೆ ನಡೆಸಬೇಕು ಮತ್ತು ತ್ರಿಸದಸ್ಯ ಪೀಠ ತೀರ್ಪನ್ನು ನೀಡಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.