<p><strong>ಹುಬ್ಬಳ್ಳಿ: </strong>`ಪ್ರತಿಯೊಬ್ಬ ವ್ಯಕ್ತಿ ತಮ್ಮಲ್ಲಿರುವ ಜ್ಞಾನ ಪ್ರತಿಭೆಯನ್ನು ಸಮಾಜಕ್ಕೆ ನೀಡುವ ಕೆಲಸ ಮಾಡಬೇಕು. ಆತ್ಮಸ್ಥೈರ್ಯ ಹಾಗೂ ವಿಶ್ವಾಸ ಬಳಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು~ ಎಂದು ಅಂತರಾಷ್ಟ್ರೀಯ ಕ್ರೀಡಾಪಟು ಅರ್ಜುನ ದೇವಯ್ಯ ಹೇಳಿದರು.<br /> <br /> ಇಲ್ಲಿನ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಒಂದು ದಿನದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> `ಜೀವನದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಯು ಗುರಿಯನ್ನು ಇಟ್ಟುಕೊಳ್ಳಬೇಕು. ಆ ಗುರಿಯನ್ನು ತಲುಪುವವರೆಗೆ ಶ್ರದ್ಧೆಯಿಂದ ಓದಬೇಕು~ ಎಂದರು. <br /> <br /> `ಜೀವನದಲ್ಲಿ ಕೌಶಲದ ಅಂಶಗಳನ್ನು ಅಳವಡಿಸಿಕೊಳ್ಳಬೇಕು. ಸ್ವಾರ್ಥದಿಂದ ಬೆಳೆಯಿರಿ ಆದರೆ ಸ್ವಾರ್ಥವೇ ಜೀವನದ ಪ್ರಮುಖ ಅಂಶವಾಗಬಾರದು~ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.<br /> <br /> `ನಿಮ್ಮಲ್ಲಿರುವ ಯುವಚೇತನವನ್ನು ಬಡಿದೆಬ್ಬಿಸಿ. ಸಮಾಜದಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರವನ್ನು ತೊಲಗಿಸಲು ಕೈ ಜೋಡಿಸಿ. ಸೋಲಿಗೆ ಚಿಂತಿಸಬೇಡಿ. ಸೋಲೇ ಗೆಲುವಿನ ಸೋಪಾನ~ ಎಂದರು.<br /> ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಬಾಬಾ ಭೂಸದ, ಪಿ.ಯು ಕಾಲೇಜಿನ ಪ್ರಾಚಾರ್ಯ ಎ.ಸಿ. ಗಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಹಾಜರಿದ್ದರು.<br /> <br /> ಪದವಿ ಕಾಲೇಜಿನ ಪ್ರಾಚಾರ್ಯ ಆನಂದ ಕೆ. ಮುಳಗುಂದ ಸ್ವಾಗತಿಸಿದರು. ಅನುಷಾ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಸಿ.ಎಸ್ ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>`ಪ್ರತಿಯೊಬ್ಬ ವ್ಯಕ್ತಿ ತಮ್ಮಲ್ಲಿರುವ ಜ್ಞಾನ ಪ್ರತಿಭೆಯನ್ನು ಸಮಾಜಕ್ಕೆ ನೀಡುವ ಕೆಲಸ ಮಾಡಬೇಕು. ಆತ್ಮಸ್ಥೈರ್ಯ ಹಾಗೂ ವಿಶ್ವಾಸ ಬಳಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು~ ಎಂದು ಅಂತರಾಷ್ಟ್ರೀಯ ಕ್ರೀಡಾಪಟು ಅರ್ಜುನ ದೇವಯ್ಯ ಹೇಳಿದರು.<br /> <br /> ಇಲ್ಲಿನ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಒಂದು ದಿನದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> `ಜೀವನದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಯು ಗುರಿಯನ್ನು ಇಟ್ಟುಕೊಳ್ಳಬೇಕು. ಆ ಗುರಿಯನ್ನು ತಲುಪುವವರೆಗೆ ಶ್ರದ್ಧೆಯಿಂದ ಓದಬೇಕು~ ಎಂದರು. <br /> <br /> `ಜೀವನದಲ್ಲಿ ಕೌಶಲದ ಅಂಶಗಳನ್ನು ಅಳವಡಿಸಿಕೊಳ್ಳಬೇಕು. ಸ್ವಾರ್ಥದಿಂದ ಬೆಳೆಯಿರಿ ಆದರೆ ಸ್ವಾರ್ಥವೇ ಜೀವನದ ಪ್ರಮುಖ ಅಂಶವಾಗಬಾರದು~ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.<br /> <br /> `ನಿಮ್ಮಲ್ಲಿರುವ ಯುವಚೇತನವನ್ನು ಬಡಿದೆಬ್ಬಿಸಿ. ಸಮಾಜದಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರವನ್ನು ತೊಲಗಿಸಲು ಕೈ ಜೋಡಿಸಿ. ಸೋಲಿಗೆ ಚಿಂತಿಸಬೇಡಿ. ಸೋಲೇ ಗೆಲುವಿನ ಸೋಪಾನ~ ಎಂದರು.<br /> ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಬಾಬಾ ಭೂಸದ, ಪಿ.ಯು ಕಾಲೇಜಿನ ಪ್ರಾಚಾರ್ಯ ಎ.ಸಿ. ಗಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಹಾಜರಿದ್ದರು.<br /> <br /> ಪದವಿ ಕಾಲೇಜಿನ ಪ್ರಾಚಾರ್ಯ ಆನಂದ ಕೆ. ಮುಳಗುಂದ ಸ್ವಾಗತಿಸಿದರು. ಅನುಷಾ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಸಿ.ಎಸ್ ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>