<p><strong>ನವದೆಹಲಿ (ಐಎಎನ್ಎಸ್): </strong>ಪಿತೃತ್ವ ಪರೀಕ್ಷೆಗೆ ಸಂಬಂಧಿಸಿದಂತೆ ಕಾಂಗ್ರೆಸ್ನ ಹಿರಿಯ ನಾಯಕ ಎನ್.ಡಿ.ತಿವಾರಿ ಅವರ ರಕ್ತದ ಮಾದರಿ ಸಂಗ್ರಹಿಸಲು ವೈದ್ಯರೊಬ್ಬರಿಗೆ ಸೂಚಿಸಬೇಕು ಎಂದು ದೆಹಲಿ ಹೈಕೋರ್ಟ್ ಸೋಮವಾರ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿಗೆ (ಸಿಎಂಒ) ನೋಟಿಸ್ ನೀಡಿದೆ.<br /> <br /> ಜಂಟಿ ರಿಜಿಸ್ಟ್ರಾರ್ ದೀಪಕ್ ಗಾರ್ಗ್ ಅವರು ಸಿಎಂಒ ಅವರಿಂದ ಈ ಬಗ್ಗೆ ಮೇ 10ರೊಳಗೆ ಪ್ರತಿಕ್ರಿಯೆ ಬಯಸಿದ್ದಾರೆ.ತಿವಾರಿ ಮತ್ತು ಇತರರ ರಕ್ತದ ಮಾದರಿಯನ್ನು ಜೂನ್ 1ರಂದು ಸಂಗ್ರಹಿಸುವಂತೆ ನ್ಯಾಯಾಲಯ ಹೇಳಿದೆ.<br /> <br /> ತಿವಾರಿ ಅವರು ತಮ್ಮ ತಂದೆ ಎಂದು ಹೇಳಿಕೊಂಡು ರೋಹಿತ್ ಶೇಖರ್ ಎಂಬುವವರು ದಾವೆ ಹೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆಗೆ ಒಳಗಾಗುವಂತೆ ನ್ಯಾಯಾಲಯದ ಏಕ ಸದಸ್ಯ ಪೀಠವು 2010ರ ಡಿ. 23ರಂದು ತಿವಾರಿ ಅವರಿಗೆ ಸೂಚಿಸಿತ್ತು.<br /> <br /> ಶೇಖರ್ ಅವರು ತಮ್ಮ ತಾಯಿ ಉಜ್ವಲಾ ಶರ್ಮಾ ಅವರೊಂದಿಗೆ ತಿವಾರಿ ಅವರಿಗೆ ಸಂಬಂಧವಿತ್ತು ಎಂದು ಆರೋಪಿಸಿದ್ದಾರೆ. ಅವಿಭಜಿತ ಉತ್ತರ ಪ್ರದೇಶದ ಮುಖ್ಯಮಂತ್ರಿ ಯಾಗಿದ್ದ ತಿವಾರಿ ಇದನ್ನು ನಿರಾಕರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್): </strong>ಪಿತೃತ್ವ ಪರೀಕ್ಷೆಗೆ ಸಂಬಂಧಿಸಿದಂತೆ ಕಾಂಗ್ರೆಸ್ನ ಹಿರಿಯ ನಾಯಕ ಎನ್.ಡಿ.ತಿವಾರಿ ಅವರ ರಕ್ತದ ಮಾದರಿ ಸಂಗ್ರಹಿಸಲು ವೈದ್ಯರೊಬ್ಬರಿಗೆ ಸೂಚಿಸಬೇಕು ಎಂದು ದೆಹಲಿ ಹೈಕೋರ್ಟ್ ಸೋಮವಾರ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿಗೆ (ಸಿಎಂಒ) ನೋಟಿಸ್ ನೀಡಿದೆ.<br /> <br /> ಜಂಟಿ ರಿಜಿಸ್ಟ್ರಾರ್ ದೀಪಕ್ ಗಾರ್ಗ್ ಅವರು ಸಿಎಂಒ ಅವರಿಂದ ಈ ಬಗ್ಗೆ ಮೇ 10ರೊಳಗೆ ಪ್ರತಿಕ್ರಿಯೆ ಬಯಸಿದ್ದಾರೆ.ತಿವಾರಿ ಮತ್ತು ಇತರರ ರಕ್ತದ ಮಾದರಿಯನ್ನು ಜೂನ್ 1ರಂದು ಸಂಗ್ರಹಿಸುವಂತೆ ನ್ಯಾಯಾಲಯ ಹೇಳಿದೆ.<br /> <br /> ತಿವಾರಿ ಅವರು ತಮ್ಮ ತಂದೆ ಎಂದು ಹೇಳಿಕೊಂಡು ರೋಹಿತ್ ಶೇಖರ್ ಎಂಬುವವರು ದಾವೆ ಹೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆಗೆ ಒಳಗಾಗುವಂತೆ ನ್ಯಾಯಾಲಯದ ಏಕ ಸದಸ್ಯ ಪೀಠವು 2010ರ ಡಿ. 23ರಂದು ತಿವಾರಿ ಅವರಿಗೆ ಸೂಚಿಸಿತ್ತು.<br /> <br /> ಶೇಖರ್ ಅವರು ತಮ್ಮ ತಾಯಿ ಉಜ್ವಲಾ ಶರ್ಮಾ ಅವರೊಂದಿಗೆ ತಿವಾರಿ ಅವರಿಗೆ ಸಂಬಂಧವಿತ್ತು ಎಂದು ಆರೋಪಿಸಿದ್ದಾರೆ. ಅವಿಭಜಿತ ಉತ್ತರ ಪ್ರದೇಶದ ಮುಖ್ಯಮಂತ್ರಿ ಯಾಗಿದ್ದ ತಿವಾರಿ ಇದನ್ನು ನಿರಾಕರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>