<p><strong>ಬೆಂಗಳೂರು</strong>: ರಾಜ್ಯದಲ್ಲಿನ ಡಿಜಿಪಿ ದರ್ಜೆಯ ಎಲ್ಲ ಅಧಿಕಾರಿಗಳ ಹೆಸರು ಮತ್ತು ಅವರ ಸೇವಾ ದಾಖಲೆಗಳನ್ನು ಮೇ 1ರೊಳಗೆ ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್ಸಿ) ಕಳುಹಿಸಿಕೊಡುವಂತೆ ಕೇಂದ್ರ ಆಡಳಿತ ನ್ಯಾಯ ಮಂಡಳಿಯ ರಾಜ್ಯ ಘಟಕ ಸರ್ಕಾರಕ್ಕೆ ಗುರುವಾರ ನಿರ್ದೇಶಿಸಿದೆ.<br /> <br /> ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೇ 20ರೊಳಗೆ ಅರ್ಹ ಅಧಿಕಾರಿಗಳ ಆಯ್ಕೆ ಪಟ್ಟಿ ತಯಾರಿಸಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸುವಂತೆ ಆಯೋಗಕ್ಕೆ ಸೂಚಿಸಲಾಗಿದೆ. ಈ ಪಟ್ಟಿಯಲ್ಲಿ ಒಬ್ಬ ಅರ್ಹ ಅಧಿಕಾರಿಯನ್ನು ಜೂ.1ರೊಳಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ (ಡಿಜಿ-ಐಜಿಪಿ) ನೇಮಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಈ ಕುರಿತು ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆ ಡಿಜಿಪಿ ಡಾ.ಡಿ.ವಿ.ಗುರುಪ್ರಸಾದ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮಂಡಳಿ ನಡೆಸಿತು. <br /> <br /> ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಶ್ರೇಣಿಯ ಅಧಿಕಾರಿಗಳು ಅಥವಾ ಪೊಲೀಸ್ ಹುದ್ದೆಯಲ್ಲಿ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿದ ಅಧಿಕಾರಿಗಳ ಹೆಸರನ್ನು ಆಯ್ಕೆ ಪಟ್ಟಿಯಲ್ಲಿ ಸೇರಿಸುವಂತೆ ತಿಳಿಸಲಾಗಿದ್ದು, ಇದು ಸರಿಯಲ್ಲ ಎಂದು ದೂರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿನ ಡಿಜಿಪಿ ದರ್ಜೆಯ ಎಲ್ಲ ಅಧಿಕಾರಿಗಳ ಹೆಸರು ಮತ್ತು ಅವರ ಸೇವಾ ದಾಖಲೆಗಳನ್ನು ಮೇ 1ರೊಳಗೆ ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್ಸಿ) ಕಳುಹಿಸಿಕೊಡುವಂತೆ ಕೇಂದ್ರ ಆಡಳಿತ ನ್ಯಾಯ ಮಂಡಳಿಯ ರಾಜ್ಯ ಘಟಕ ಸರ್ಕಾರಕ್ಕೆ ಗುರುವಾರ ನಿರ್ದೇಶಿಸಿದೆ.<br /> <br /> ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೇ 20ರೊಳಗೆ ಅರ್ಹ ಅಧಿಕಾರಿಗಳ ಆಯ್ಕೆ ಪಟ್ಟಿ ತಯಾರಿಸಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸುವಂತೆ ಆಯೋಗಕ್ಕೆ ಸೂಚಿಸಲಾಗಿದೆ. ಈ ಪಟ್ಟಿಯಲ್ಲಿ ಒಬ್ಬ ಅರ್ಹ ಅಧಿಕಾರಿಯನ್ನು ಜೂ.1ರೊಳಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ (ಡಿಜಿ-ಐಜಿಪಿ) ನೇಮಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಈ ಕುರಿತು ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆ ಡಿಜಿಪಿ ಡಾ.ಡಿ.ವಿ.ಗುರುಪ್ರಸಾದ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮಂಡಳಿ ನಡೆಸಿತು. <br /> <br /> ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಶ್ರೇಣಿಯ ಅಧಿಕಾರಿಗಳು ಅಥವಾ ಪೊಲೀಸ್ ಹುದ್ದೆಯಲ್ಲಿ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿದ ಅಧಿಕಾರಿಗಳ ಹೆಸರನ್ನು ಆಯ್ಕೆ ಪಟ್ಟಿಯಲ್ಲಿ ಸೇರಿಸುವಂತೆ ತಿಳಿಸಲಾಗಿದ್ದು, ಇದು ಸರಿಯಲ್ಲ ಎಂದು ದೂರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>