<p><strong>ಬೆಳಗಾವಿ: </strong>ತಾಯಂದಿರ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಭಾರತ ಸರ್ಕಾರದ ಆರೋಗ್ಯ ಸಚಿವಾಲಯಕ್ಕೆ ಸೂಚಿಸಲಾಗುವುದು ಎಂದು ಅಮೆರಿಕದ ಆರೋಗ್ಯ ಸಚಿವೆ ಕ್ಯಾಥ್ಲೀನ್ ಸೆಬೆಲಿಯಸ್ ತಿಳಿಸಿದರು. <br /> <br /> ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳಿಂದ ಅನುದಾನಿತ ಸಮುದಾಯ ಆಧಾರಿತ ಆರೋಗ್ಯ ಸಂಶೋಧನಾ ಅಧ್ಯಯನಗಳನ್ನು ಪರಿಶೀಲಿಸಲು ಅಮೆರಿಕದ ಆರೋಗ್ಯ ತಂಡದೊಂದಿಗೆ ನಗರದ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. <br /> <br /> ಭಾರತದಲ್ಲಿ ಹೆರಿಗೆ ಸಂದರ್ಭದಲ್ಲಿ ತಾಯಂದಿರ ಹಾಗೂ ನವಜಾತ ಶಿಶುಗಳ ಮರಣ ಸಂಖ್ಯೆ ಹೆಚ್ಚಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ಕೈಗೊಳ್ಳಲಾಗುತ್ತಿದ್ದು, ಅದರ ಫಲಿತಾಂಶಗಳನ್ನು ರಾಷ್ಟ್ರೀಯ ಆರೋಗ್ಯ ನೀತಿಗಳಲ್ಲಿ ಅಳವಡಿಸಿಕೊಳ್ಳುವಂತೆ ಭಾರತ ಸರ್ಕಾರದ ಆರೋಗ್ಯ ಸಚಿವಾಲಯಕ್ಕೆ ಸಲಹೆ ನೀಡಲಾಗುವುದು ಎಂದು ವಿವರಿಸಿದರು. <br /> <br /> ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಮಹಿಳೆಯರ ಮತ್ತು ಮಕ್ಕಳ ಆರೋಗ್ಯ ಸಂಶೋಧನಾ ಘಟಕವು ಮಹಿಳೆಯರ ಮತ್ತು ಮಕ್ಕಳ ಆರೋಗ್ಯವನ್ನು ಉತ್ತಮಪಡಿಸಲು ಸಮುದಾಯ ಆಧಾರಿತ ಸಂಶೋಧನಾ ಅಧ್ಯಯನಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸುತ್ತಿದೆ ಎಂದು ಕ್ಯಾಥ್ಲೀನ್ ತಿಳಿಸಿದರು. <br /> <br /> ಅಮೆರಿಕದ ಅಧ್ಯಯನ ತಂಡವನ್ನು ಸ್ವಾಗತಿಸಿದ ಕೆಎಲ್ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಕೆ.ಎಲ್.ಇ ಸಂಸ್ಥೆಯು ಸಮುದಾಯ ಆಧಾರಿತ ಸಂಶೋಧನಾ ಚಟುವಟಿಕೆಗಳನ್ನು ಸಬಲಗೊಳಿಸಲಾಗುವುದು. ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ತಾಯಿ ಮತ್ತು ನವಜಾತ ಶಿಶುಗಳ ಆರೋಗ್ಯ ಸುಧಾರಣೆಗಾಗಿ ಯತ್ನಿಸಲಾಗುವುದು ಎಂದು ಭರವಸೆ ನೀಡಿದರು. <br /> <br /> ಅಮೆರಿಕದ ಆರೋಗ್ಯ ತಂಡದ ಸದಸ್ಯರಾದ ರಾಷ್ಟ್ರೀಯ ಆರೋಗ್ಯ ಸಂಸ್ಥೆಯ ಸಹ ನಿರ್ದೇಶಕ ರೋಜರ್ ಗ್ಲಾಸ್, ಜಾಗತಿಕ ವ್ಯವಹಾರಗಳ ಕಚೇರಿಯ ನಿರ್ದೇಶಕ ನೀಲ್ಸ್ ಡೌಲೇರ್, ಆಹಾರ ಮತ್ತು ಔಷಧ ವಿಭಾಗದ ಉಪ ಆಯುಕ್ತ ಡೆಪೋರಾ ಆಥರ್ ಮತ್ತಿತರರು ಹಾಜರಿದ್ದರು. <br /> <br /> ಕೆ.ಎಲ್.ಇ. ವಿಶ್ವವಿದ್ಯಾಲಯ ಸಂಶೋಧನಾ ಘಟಕದ ನಿರ್ದೇಶಕ ಡಾ. ಬಿ.ಎಸ್. ಕೋಡಕಿಣಿ, ಸಂಶೋಧನಾ ಅಧ್ಯಯನಗಳ ಸಂಕ್ಷಿಪ್ತ ವಿವರ ನೀಡಿದರು. ಕೆ.ಎಲ್.ಇ. ವಿಶ್ವವಿದ್ಯಾಲಯ ಉಪಕುಲಪತಿ ಡಾ. ಚಂದ್ರಕಾಂತ ಕೋಕಾಟೆ ವಂದಿಸಿದರು. <br /> <br /> ಬಳಿಕ ಅಮೆರಿಕದ ಆರೋಗ್ಯ ತಂಡವು ಬೈಲಹೊಂಗಲ ತಾಲ್ಲೂಕಿನ ಮುರಗೋಡದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರೊಂದಿಗೆ ಚರ್ಚಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ತಾಯಂದಿರ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಭಾರತ ಸರ್ಕಾರದ ಆರೋಗ್ಯ ಸಚಿವಾಲಯಕ್ಕೆ ಸೂಚಿಸಲಾಗುವುದು ಎಂದು ಅಮೆರಿಕದ ಆರೋಗ್ಯ ಸಚಿವೆ ಕ್ಯಾಥ್ಲೀನ್ ಸೆಬೆಲಿಯಸ್ ತಿಳಿಸಿದರು. <br /> <br /> ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳಿಂದ ಅನುದಾನಿತ ಸಮುದಾಯ ಆಧಾರಿತ ಆರೋಗ್ಯ ಸಂಶೋಧನಾ ಅಧ್ಯಯನಗಳನ್ನು ಪರಿಶೀಲಿಸಲು ಅಮೆರಿಕದ ಆರೋಗ್ಯ ತಂಡದೊಂದಿಗೆ ನಗರದ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. <br /> <br /> ಭಾರತದಲ್ಲಿ ಹೆರಿಗೆ ಸಂದರ್ಭದಲ್ಲಿ ತಾಯಂದಿರ ಹಾಗೂ ನವಜಾತ ಶಿಶುಗಳ ಮರಣ ಸಂಖ್ಯೆ ಹೆಚ್ಚಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ಕೈಗೊಳ್ಳಲಾಗುತ್ತಿದ್ದು, ಅದರ ಫಲಿತಾಂಶಗಳನ್ನು ರಾಷ್ಟ್ರೀಯ ಆರೋಗ್ಯ ನೀತಿಗಳಲ್ಲಿ ಅಳವಡಿಸಿಕೊಳ್ಳುವಂತೆ ಭಾರತ ಸರ್ಕಾರದ ಆರೋಗ್ಯ ಸಚಿವಾಲಯಕ್ಕೆ ಸಲಹೆ ನೀಡಲಾಗುವುದು ಎಂದು ವಿವರಿಸಿದರು. <br /> <br /> ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಮಹಿಳೆಯರ ಮತ್ತು ಮಕ್ಕಳ ಆರೋಗ್ಯ ಸಂಶೋಧನಾ ಘಟಕವು ಮಹಿಳೆಯರ ಮತ್ತು ಮಕ್ಕಳ ಆರೋಗ್ಯವನ್ನು ಉತ್ತಮಪಡಿಸಲು ಸಮುದಾಯ ಆಧಾರಿತ ಸಂಶೋಧನಾ ಅಧ್ಯಯನಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸುತ್ತಿದೆ ಎಂದು ಕ್ಯಾಥ್ಲೀನ್ ತಿಳಿಸಿದರು. <br /> <br /> ಅಮೆರಿಕದ ಅಧ್ಯಯನ ತಂಡವನ್ನು ಸ್ವಾಗತಿಸಿದ ಕೆಎಲ್ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಕೆ.ಎಲ್.ಇ ಸಂಸ್ಥೆಯು ಸಮುದಾಯ ಆಧಾರಿತ ಸಂಶೋಧನಾ ಚಟುವಟಿಕೆಗಳನ್ನು ಸಬಲಗೊಳಿಸಲಾಗುವುದು. ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ತಾಯಿ ಮತ್ತು ನವಜಾತ ಶಿಶುಗಳ ಆರೋಗ್ಯ ಸುಧಾರಣೆಗಾಗಿ ಯತ್ನಿಸಲಾಗುವುದು ಎಂದು ಭರವಸೆ ನೀಡಿದರು. <br /> <br /> ಅಮೆರಿಕದ ಆರೋಗ್ಯ ತಂಡದ ಸದಸ್ಯರಾದ ರಾಷ್ಟ್ರೀಯ ಆರೋಗ್ಯ ಸಂಸ್ಥೆಯ ಸಹ ನಿರ್ದೇಶಕ ರೋಜರ್ ಗ್ಲಾಸ್, ಜಾಗತಿಕ ವ್ಯವಹಾರಗಳ ಕಚೇರಿಯ ನಿರ್ದೇಶಕ ನೀಲ್ಸ್ ಡೌಲೇರ್, ಆಹಾರ ಮತ್ತು ಔಷಧ ವಿಭಾಗದ ಉಪ ಆಯುಕ್ತ ಡೆಪೋರಾ ಆಥರ್ ಮತ್ತಿತರರು ಹಾಜರಿದ್ದರು. <br /> <br /> ಕೆ.ಎಲ್.ಇ. ವಿಶ್ವವಿದ್ಯಾಲಯ ಸಂಶೋಧನಾ ಘಟಕದ ನಿರ್ದೇಶಕ ಡಾ. ಬಿ.ಎಸ್. ಕೋಡಕಿಣಿ, ಸಂಶೋಧನಾ ಅಧ್ಯಯನಗಳ ಸಂಕ್ಷಿಪ್ತ ವಿವರ ನೀಡಿದರು. ಕೆ.ಎಲ್.ಇ. ವಿಶ್ವವಿದ್ಯಾಲಯ ಉಪಕುಲಪತಿ ಡಾ. ಚಂದ್ರಕಾಂತ ಕೋಕಾಟೆ ವಂದಿಸಿದರು. <br /> <br /> ಬಳಿಕ ಅಮೆರಿಕದ ಆರೋಗ್ಯ ತಂಡವು ಬೈಲಹೊಂಗಲ ತಾಲ್ಲೂಕಿನ ಮುರಗೋಡದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರೊಂದಿಗೆ ಚರ್ಚಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>