<p><strong>ಮೈಸೂರು: </strong>ಸಮುದಾಯ ಆರೋಗ್ಯ ಕ್ಷೇತ್ರ ಬಲಪಡಿಸುವ ಸಂಬಂಧ ಸಂಶೋಧನೆ ಹಾಗೂ ಆಡಳಿತಾತ್ಮಕ ಸಹಕಾರಕ್ಕೆ ಜೆಎಸ್ಎಸ್ ವಿಶ್ವವಿದ್ಯಾನಿಲಯ ಮತ್ತು ಪಿಲಿಫ್ಸ್ ಕಂಪೆನಿ ನಡುವೆ ಗುರುವಾರ ಒಡಂಬಡಿಕೆ ಏರ್ಪಟ್ಟಿತು.</p>.<p>ಜೆಎಸ್ಎಸ್ ದಂತ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಪರವಾಗಿ ಕುಲಸಚಿವ ಡಾ.ಮೃತ್ಯುಂಜಯ ಪಿ.ಕುಳೆನೂರು ಮತ್ತು ಪಿಲಿಫ್ಸ್ ಸಂಸ್ಥೆಯ ಪರವಾಗಿ ಡಾ.ವಿಶ್ವನಾಥನ್ ಒಡಂಬಡಿಕೆ ಪತ್ರವನ್ನು ವಿನಿಮಯ ಮಾಡಿಕೊಂಡರು.</p>.<p>ಕೈಗಾರಿಕಾ ವಲಯಗಳಲ್ಲಿ ತಾಂತ್ರಿಕ ಅವಿಷ್ಕಾರಗಳು ನಡೆಯುತ್ತಿದ್ದು, ಇದನ್ನು ಬಳಸಿಕೊಂಡು ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆಗೆ ಈ ಒಪ್ಪಂದ ಸಹಕಾರಿಯಾಗಲಿದೆ. ಸಾಮಾನ್ಯ ಮನುಷ್ಯನಿಗೂ ಉನ್ನತ ದರ್ಜೆಯ ಆರೋಗ್ಯ ವ್ಯವಸ್ಥೆ ದೊರಕಿಸಿಕೊಡುವುದು ಸೇರಿದಂತೆ ಪ್ರಾಥಮಿಕ ಹಂತದಲ್ಲಿಯೇ ಕಾಯಿಲೆಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಕಾರ್ಯಕ್ಕೆ ಈ ಒಪ್ಪಂದ ಅನುವಾಗಲಿದೆ.</p>.<p>ಕುಲಪತಿ ಸುರೇಶ್ ಮಾತನಾಡಿ, ದೇಶದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶದ ಜನರು ಚಿಕಿತ್ಸೆಗಾಗಿ ನಗರ ಪ್ರದೇಶಕ್ಕೆ ಬರಲು ಆಗುವುದಿಲ್ಲ. ಕಡಿಮೆ ಖರ್ಚಿನ ಉಪಕರಣಗಳನ್ನು ಕಂಡು ಹಿಡಿದು ಆರಂಭಿಕ ಹಂತದಲ್ಲಿಯೇ ರೋಗಗಳನ್ನು ಪತ್ತೆ ಮಾಡುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಹಲವು ಕ್ಲಿನಿಕಲ್ ಸಂಶೋಧನೆ ಕೈಗೊಳ್ಳಲು ಮಾತುಕತೆ ನಡೆಸಲಾಗಿದೆ. ಇದರಿಂದ ಅನಗತ್ಯವಾಗಿ ಹಣ ಖರ್ಚು ಮಾಡುವುದನ್ನು ತಪ್ಪಿಸಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಸಮುದಾಯ ಆರೋಗ್ಯ ಕ್ಷೇತ್ರ ಬಲಪಡಿಸುವ ಸಂಬಂಧ ಸಂಶೋಧನೆ ಹಾಗೂ ಆಡಳಿತಾತ್ಮಕ ಸಹಕಾರಕ್ಕೆ ಜೆಎಸ್ಎಸ್ ವಿಶ್ವವಿದ್ಯಾನಿಲಯ ಮತ್ತು ಪಿಲಿಫ್ಸ್ ಕಂಪೆನಿ ನಡುವೆ ಗುರುವಾರ ಒಡಂಬಡಿಕೆ ಏರ್ಪಟ್ಟಿತು.</p>.<p>ಜೆಎಸ್ಎಸ್ ದಂತ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಪರವಾಗಿ ಕುಲಸಚಿವ ಡಾ.ಮೃತ್ಯುಂಜಯ ಪಿ.ಕುಳೆನೂರು ಮತ್ತು ಪಿಲಿಫ್ಸ್ ಸಂಸ್ಥೆಯ ಪರವಾಗಿ ಡಾ.ವಿಶ್ವನಾಥನ್ ಒಡಂಬಡಿಕೆ ಪತ್ರವನ್ನು ವಿನಿಮಯ ಮಾಡಿಕೊಂಡರು.</p>.<p>ಕೈಗಾರಿಕಾ ವಲಯಗಳಲ್ಲಿ ತಾಂತ್ರಿಕ ಅವಿಷ್ಕಾರಗಳು ನಡೆಯುತ್ತಿದ್ದು, ಇದನ್ನು ಬಳಸಿಕೊಂಡು ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆಗೆ ಈ ಒಪ್ಪಂದ ಸಹಕಾರಿಯಾಗಲಿದೆ. ಸಾಮಾನ್ಯ ಮನುಷ್ಯನಿಗೂ ಉನ್ನತ ದರ್ಜೆಯ ಆರೋಗ್ಯ ವ್ಯವಸ್ಥೆ ದೊರಕಿಸಿಕೊಡುವುದು ಸೇರಿದಂತೆ ಪ್ರಾಥಮಿಕ ಹಂತದಲ್ಲಿಯೇ ಕಾಯಿಲೆಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಕಾರ್ಯಕ್ಕೆ ಈ ಒಪ್ಪಂದ ಅನುವಾಗಲಿದೆ.</p>.<p>ಕುಲಪತಿ ಸುರೇಶ್ ಮಾತನಾಡಿ, ದೇಶದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶದ ಜನರು ಚಿಕಿತ್ಸೆಗಾಗಿ ನಗರ ಪ್ರದೇಶಕ್ಕೆ ಬರಲು ಆಗುವುದಿಲ್ಲ. ಕಡಿಮೆ ಖರ್ಚಿನ ಉಪಕರಣಗಳನ್ನು ಕಂಡು ಹಿಡಿದು ಆರಂಭಿಕ ಹಂತದಲ್ಲಿಯೇ ರೋಗಗಳನ್ನು ಪತ್ತೆ ಮಾಡುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಹಲವು ಕ್ಲಿನಿಕಲ್ ಸಂಶೋಧನೆ ಕೈಗೊಳ್ಳಲು ಮಾತುಕತೆ ನಡೆಸಲಾಗಿದೆ. ಇದರಿಂದ ಅನಗತ್ಯವಾಗಿ ಹಣ ಖರ್ಚು ಮಾಡುವುದನ್ನು ತಪ್ಪಿಸಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>