<p><strong>ತುಮಕೂರು</strong>: ಟಿಕೆಟ್ ಸಿಗದೇ ನಿರಾಶರಾಗಿದ್ದ ಮಾಜಿ ಸಚಿವ ಸಿ.ಚೆನ್ನಿಗಪ್ಪ, ಬಿ.ಸಿ.ಗೌರಿಶಂಕರ್ ಅವರು ಪಕ್ಷದ ಅಭ್ಯರ್ಥಿ, ರಾಜ್ಯ ಘಟಕದ ಅಧ್ಯಕ್ಷ ಎ.ಕೃಷ್ಣಪ್ಪ ಅವರಿಗೆ ಬೆಂಬಲ ಘೋಷಿಸುವ ಮೂಲಕ ಜೆಡಿಎಸ್ ಮಂಗಳವಾರ ಒಗ್ಗಟ್ಟಿನ ಮಂತ್ರ ಜಪಿಸಿತು.<br /> <br /> ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್ ನೇತೃತ್ವದಲ್ಲಿ ಸೇರಿದ್ದ ಜೆಡಿಎಸ್ ಶಾಸಕರು, ಮುಖಂಡರು ಚುನಾವಣೆ ಕುರಿತು ಚರ್ಚೆ ನಡೆಸಿದರು.<br /> <br /> ‘ನಾನು ಮತ್ತು ನನ್ನ ಪುತ್ರ ಗೌರಿಶಂಕರ್ ಟಿಕೆಟ್ ಆಕಾಂಕ್ಷಿಯಾಗಿದ್ದೆವು. ಆದರೆ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ಎ.ಕೃಷ್ಣಪ್ಪ ಅವರನ್ನು ಕಣಕ್ಕೆ ಇಳಿಸಿದ್ದಾರೆ. ಅವರ ಗೆಲುವಿಗೆ ಶ್ರಮಿಸಲಾಗುವುದು’ ಎಂದು ಇದೇ ವೇಳೆ ಸಿ.ಚೆನ್ನಿಗಪ್ಪ ಹೇಳಿದರು.<br /> <br /> ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು ಹಾಗೂ ಒಗ್ಗಟ್ಟಿನಿಂದ ಕೆಲಸ ಮಾಡಲು ಶಾಸಕರು ಒಪ್ಪಿಗೆ ಸೂಚಿಸಿದರು.<br /> <br /> ಸಭೆಯಲ್ಲಿ ಅಭ್ಯರ್ಥಿ ಎ.ಕೃಷ್ಣಪ್ಪ, ಶಾಸಕರಾದ ಎಸ್.ಆರ್.ಶ್ರೀನಿವಾಸ್, ಎಂ.ಟಿ.ಕೃಷ್ಣಪ್ಪ, ಸುರೇಶ್ ಬಾಬು, ಸುಧಾಕರ್ಲಾಲ್, ಮಾಜಿ ಶಾಸಕ ಗೌರಿಶಂಕರ್, ಮುಖಂಡರಾದ ವೀರಭದ್ರಯ್ಯ, ಮೈಲಾರಿ ಇತರರು ಇದ್ದರು.<br /> <br /> ಮಾರ್ಚ್ 20ರಂದು ಮಧುಗಿರಿ, ಕೊರಟಗೆರೆಗಳಲ್ಲಿ ಪಕ್ಷದ ಪರವಾಗಿ ಎ.ಕೃಷ್ಣಪ್ಪ ಮತಯಾಚನೆ ನಡೆಸಲು ನಿರ್ಧರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಟಿಕೆಟ್ ಸಿಗದೇ ನಿರಾಶರಾಗಿದ್ದ ಮಾಜಿ ಸಚಿವ ಸಿ.ಚೆನ್ನಿಗಪ್ಪ, ಬಿ.ಸಿ.ಗೌರಿಶಂಕರ್ ಅವರು ಪಕ್ಷದ ಅಭ್ಯರ್ಥಿ, ರಾಜ್ಯ ಘಟಕದ ಅಧ್ಯಕ್ಷ ಎ.ಕೃಷ್ಣಪ್ಪ ಅವರಿಗೆ ಬೆಂಬಲ ಘೋಷಿಸುವ ಮೂಲಕ ಜೆಡಿಎಸ್ ಮಂಗಳವಾರ ಒಗ್ಗಟ್ಟಿನ ಮಂತ್ರ ಜಪಿಸಿತು.<br /> <br /> ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್ ನೇತೃತ್ವದಲ್ಲಿ ಸೇರಿದ್ದ ಜೆಡಿಎಸ್ ಶಾಸಕರು, ಮುಖಂಡರು ಚುನಾವಣೆ ಕುರಿತು ಚರ್ಚೆ ನಡೆಸಿದರು.<br /> <br /> ‘ನಾನು ಮತ್ತು ನನ್ನ ಪುತ್ರ ಗೌರಿಶಂಕರ್ ಟಿಕೆಟ್ ಆಕಾಂಕ್ಷಿಯಾಗಿದ್ದೆವು. ಆದರೆ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ಎ.ಕೃಷ್ಣಪ್ಪ ಅವರನ್ನು ಕಣಕ್ಕೆ ಇಳಿಸಿದ್ದಾರೆ. ಅವರ ಗೆಲುವಿಗೆ ಶ್ರಮಿಸಲಾಗುವುದು’ ಎಂದು ಇದೇ ವೇಳೆ ಸಿ.ಚೆನ್ನಿಗಪ್ಪ ಹೇಳಿದರು.<br /> <br /> ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು ಹಾಗೂ ಒಗ್ಗಟ್ಟಿನಿಂದ ಕೆಲಸ ಮಾಡಲು ಶಾಸಕರು ಒಪ್ಪಿಗೆ ಸೂಚಿಸಿದರು.<br /> <br /> ಸಭೆಯಲ್ಲಿ ಅಭ್ಯರ್ಥಿ ಎ.ಕೃಷ್ಣಪ್ಪ, ಶಾಸಕರಾದ ಎಸ್.ಆರ್.ಶ್ರೀನಿವಾಸ್, ಎಂ.ಟಿ.ಕೃಷ್ಣಪ್ಪ, ಸುರೇಶ್ ಬಾಬು, ಸುಧಾಕರ್ಲಾಲ್, ಮಾಜಿ ಶಾಸಕ ಗೌರಿಶಂಕರ್, ಮುಖಂಡರಾದ ವೀರಭದ್ರಯ್ಯ, ಮೈಲಾರಿ ಇತರರು ಇದ್ದರು.<br /> <br /> ಮಾರ್ಚ್ 20ರಂದು ಮಧುಗಿರಿ, ಕೊರಟಗೆರೆಗಳಲ್ಲಿ ಪಕ್ಷದ ಪರವಾಗಿ ಎ.ಕೃಷ್ಣಪ್ಪ ಮತಯಾಚನೆ ನಡೆಸಲು ನಿರ್ಧರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>