<p><strong>ಬೆಂಗಳೂರು: </strong>ಲೋಕಸಭಾ ಚುನಾವಣೆ ಯಲ್ಲಿ ಸ್ಪರ್ಧಿಸಲಿರುವ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಕಾರ್ಯ ಚುರುಕು ಗೊಂಡಿದೆ.<br /> <br /> 15 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಹುತೇಕ ಸಿದ್ಧವಾಗಿದೆ. ಗೆಲ್ಲುವ ಸಾಮರ್ಥ್ಯ, ಜಾತಿ, ಆರ್ಥಿಕ ಬಲ ಇತ್ಯಾದಿಗಳ ಲೆಕ್ಕಾಚಾರ ನಡೆಯುತ್ತಿದೆ. ಇದೇ 10ರ ಒಳಗೆ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.<br /> <br /> ಮೈಸೂರಿನಿಂದ ಸಾ.ರಾ.ಮಹೇಶ್, ಚಾಮರಾಜನಗರದಿಂದ ಎಂ.ಶಿವಣ್ಣ, ಹಾಸನದಿಂದ ಎಚ್.ಡಿ.ದೇವೇಗೌಡ, ಚಿತ್ರದುರ್ಗದಿಂದ ಗೂಳಿಹಟ್ಟಿ ಶೇಖರ್, ಮಂಡ್ಯದಿಂದ ಸಿ.ಎಸ್.ಪುಟ್ಟರಾಜು, ಕಾರವಾರದಿಂದ ಶಿವಾನಂದ ನಾಯ್ಕ ಸ್ಪರ್ಧಿಸುವುದು ಖಚಿತವಾಗಿದೆ.<br /> <br /> ಬೆಂಗಳೂರು ಗ್ರಾಮಾಂತರದಿಂದ ಪ್ರಭಾಕರ ರೆಡ್ಡಿ, ಕೋಲಾರದಿಂದ ಉದ್ಯಮಿ ಕೇಶವ, ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ, ತುಮಕೂರಿನಿಂದ ಎ.ಕೃಷ್ಣಪ್ಪ, ಹುಲಿನಾಯ್ಕ ಅವರ ಹೆಸರುಗಳು ಕೇಳಿಬರುತ್ತಿವೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ, ಉದ್ಯಮಿ ಆದಿಕೇಶವಲು ಅಳಿಯ ಶ್ರೀನಿವಾಸ ಮೂರ್ತಿ ಹೆಸರು ಕೇಳಿಬರುತ್ತಿದೆ.<br /> <br /> ಅನಿತಾಕುಮಾರಸ್ವಾಮಿ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಪಕ್ಷದ ಸಂಸದೀಯ ಮಂಡಳಿ ಸಭೆ ಈ ಬಗ್ಗೆ ನಿರ್ಧಾರ ತೆಗೆದು ಕೊಳ್ಳಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು. ಪಕ್ಷದ ಪ್ರಾಬಲ್ಯ ಇರುವ 15 ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗು ತ್ತದೆ. ಆದರೆ, ಪಕ್ಷದ ಸಂಘಟನೆ ದೃಷ್ಟಿಯಿಂದ ಎಲ್ಲ ಕಡೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲೋಕಸಭಾ ಚುನಾವಣೆ ಯಲ್ಲಿ ಸ್ಪರ್ಧಿಸಲಿರುವ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಕಾರ್ಯ ಚುರುಕು ಗೊಂಡಿದೆ.<br /> <br /> 15 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಹುತೇಕ ಸಿದ್ಧವಾಗಿದೆ. ಗೆಲ್ಲುವ ಸಾಮರ್ಥ್ಯ, ಜಾತಿ, ಆರ್ಥಿಕ ಬಲ ಇತ್ಯಾದಿಗಳ ಲೆಕ್ಕಾಚಾರ ನಡೆಯುತ್ತಿದೆ. ಇದೇ 10ರ ಒಳಗೆ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.<br /> <br /> ಮೈಸೂರಿನಿಂದ ಸಾ.ರಾ.ಮಹೇಶ್, ಚಾಮರಾಜನಗರದಿಂದ ಎಂ.ಶಿವಣ್ಣ, ಹಾಸನದಿಂದ ಎಚ್.ಡಿ.ದೇವೇಗೌಡ, ಚಿತ್ರದುರ್ಗದಿಂದ ಗೂಳಿಹಟ್ಟಿ ಶೇಖರ್, ಮಂಡ್ಯದಿಂದ ಸಿ.ಎಸ್.ಪುಟ್ಟರಾಜು, ಕಾರವಾರದಿಂದ ಶಿವಾನಂದ ನಾಯ್ಕ ಸ್ಪರ್ಧಿಸುವುದು ಖಚಿತವಾಗಿದೆ.<br /> <br /> ಬೆಂಗಳೂರು ಗ್ರಾಮಾಂತರದಿಂದ ಪ್ರಭಾಕರ ರೆಡ್ಡಿ, ಕೋಲಾರದಿಂದ ಉದ್ಯಮಿ ಕೇಶವ, ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ, ತುಮಕೂರಿನಿಂದ ಎ.ಕೃಷ್ಣಪ್ಪ, ಹುಲಿನಾಯ್ಕ ಅವರ ಹೆಸರುಗಳು ಕೇಳಿಬರುತ್ತಿವೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ, ಉದ್ಯಮಿ ಆದಿಕೇಶವಲು ಅಳಿಯ ಶ್ರೀನಿವಾಸ ಮೂರ್ತಿ ಹೆಸರು ಕೇಳಿಬರುತ್ತಿದೆ.<br /> <br /> ಅನಿತಾಕುಮಾರಸ್ವಾಮಿ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಪಕ್ಷದ ಸಂಸದೀಯ ಮಂಡಳಿ ಸಭೆ ಈ ಬಗ್ಗೆ ನಿರ್ಧಾರ ತೆಗೆದು ಕೊಳ್ಳಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು. ಪಕ್ಷದ ಪ್ರಾಬಲ್ಯ ಇರುವ 15 ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗು ತ್ತದೆ. ಆದರೆ, ಪಕ್ಷದ ಸಂಘಟನೆ ದೃಷ್ಟಿಯಿಂದ ಎಲ್ಲ ಕಡೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>