<p>ಕಳಸ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಉಪ ಚುನಾವಣೆ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ. ಈ ಚುನಾವಣೆ ರಾಜ್ಯದಲ್ಲಿ ರೈತ ಪರವಾದ ಸರ್ಕಾರ ರಚನೆಗೆ ಅಡಿಗಲ್ಲು ಆಗಲಿದೆ ಎಂದು ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.<br /> <br /> ಜೆಡಿಎಸ್ ಅಭ್ಯರ್ಥಿ ಬೋಜೇಗೌಡ ಪರ ಪಟ್ಟಣದ ಮುಖ್ಯರಸ್ತೆಯಲ್ಲಿ ಮತ ಯಾಚಿಸಿದ ಬಳಿಕ ದುರ್ಗಾ ಮಂಟಪದಲ್ಲಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಬಿಜೆಪಿ, ಕಾಂಗ್ರೆಸ್ ದೋಷಾರೋಪವನ್ನೇ ಪ್ರಚಾರ ತಂತ್ರ ಎಂದುಕೊಂಡಿವೆ. ಜೆಡಿಎಸ್ ವಿಷಯಾಧಾರಿತವಾಗಿ ಚುನಾವಣೆ ಎದುರಿಸುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಎಲ್ಲ ಸಾಲ ಮನ್ನಾ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.<br /> <br /> ಕಳಸ ಹೋಬಳಿಗೆ ಕಂಟಕವಾಗಿದ್ದ ಭದ್ರಾ ಮೇಲ್ದಂಡೆ ಯೋಜನೆ ಮಾರ್ಪಾಟು ಮಾಡಿದ್ದು ಜೆಡಿಎಸ್ ಆಡಳಿತ ಎಂದು ಹೇಳಿದ ಎಚ್.ಡಿ.ಕೆ., ರಾಜ್ಯದ ಅಭಿವೃದ್ಧಿಗೆ ಮಾರಕವಾದ ಆಲೋಚನೆ ಹೊಂದಿರುವ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ತಿರಸ್ಕರಿಸಿ ಎಂದರು.<br /> <br /> ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರ ಬಗ್ಗೆ ಕಾಂಗ್ರೆಸ್ ದನಿ ಎತ್ತುತ್ತಿಲ್ಲ. ಕೇಂದ್ರ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡ ನಂಬಿಕೆಗೆ ಅರ್ಹವಲ್ಲ ಎಂದು ಅವರು ಹೇಳಿದರು.<br /> <br /> ಹಿಂದೂ ಸಮಾಜ ರಕ್ಷಣೆ ಹೆಸರಿನಲ್ಲಿ ಬಿಜೆಪಿ ಭಾವನಾತ್ಮಕ ವಿಚಾರಗಳನ್ನೇ ಪ್ರಮುಖವಾಗಿಸಿಕೊಂಡು ಮತ ಕೇಳುತ್ತಿದೆ. ಕಾಂಗ್ರೆಸ್ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯವನ್ನೇ ನಂಬಿಕೊಂಡಿದೆ. ಆದರೆ ಜೆಡಿಎಸ್ ಎಲ್ಲ ಜಾತಿ-ಧರ್ಮದವರೂ ಸಹೋದರತೆಯಿಂದ ಬಾಳಬೇಕು ಎಂಬ ಆಶಯದೊಂದಿಗೆ ಕೆಲಸ ಮಾಡುತ್ತಿದೆ ಎಂದರು.<br /> <br /> ಜೆಡಿಎಸ್ ಸ್ಥಳೀಯ ಮುಖಂಡರಾದ ಮಂಜಪ್ಪಯ್ಯ, ಉಮಾಪತಿ, ರಾಜಣ್ಣ, ಜ್ವಾಲನಯ್ಯ, ವಿಜಯಕುಮಾರ್, ಆಶಾಲತಾ, ಸಂತೋಷ್ ಮತ್ತಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಳಸ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಉಪ ಚುನಾವಣೆ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ. ಈ ಚುನಾವಣೆ ರಾಜ್ಯದಲ್ಲಿ ರೈತ ಪರವಾದ ಸರ್ಕಾರ ರಚನೆಗೆ ಅಡಿಗಲ್ಲು ಆಗಲಿದೆ ಎಂದು ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.<br /> <br /> ಜೆಡಿಎಸ್ ಅಭ್ಯರ್ಥಿ ಬೋಜೇಗೌಡ ಪರ ಪಟ್ಟಣದ ಮುಖ್ಯರಸ್ತೆಯಲ್ಲಿ ಮತ ಯಾಚಿಸಿದ ಬಳಿಕ ದುರ್ಗಾ ಮಂಟಪದಲ್ಲಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಬಿಜೆಪಿ, ಕಾಂಗ್ರೆಸ್ ದೋಷಾರೋಪವನ್ನೇ ಪ್ರಚಾರ ತಂತ್ರ ಎಂದುಕೊಂಡಿವೆ. ಜೆಡಿಎಸ್ ವಿಷಯಾಧಾರಿತವಾಗಿ ಚುನಾವಣೆ ಎದುರಿಸುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಎಲ್ಲ ಸಾಲ ಮನ್ನಾ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.<br /> <br /> ಕಳಸ ಹೋಬಳಿಗೆ ಕಂಟಕವಾಗಿದ್ದ ಭದ್ರಾ ಮೇಲ್ದಂಡೆ ಯೋಜನೆ ಮಾರ್ಪಾಟು ಮಾಡಿದ್ದು ಜೆಡಿಎಸ್ ಆಡಳಿತ ಎಂದು ಹೇಳಿದ ಎಚ್.ಡಿ.ಕೆ., ರಾಜ್ಯದ ಅಭಿವೃದ್ಧಿಗೆ ಮಾರಕವಾದ ಆಲೋಚನೆ ಹೊಂದಿರುವ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ತಿರಸ್ಕರಿಸಿ ಎಂದರು.<br /> <br /> ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರ ಬಗ್ಗೆ ಕಾಂಗ್ರೆಸ್ ದನಿ ಎತ್ತುತ್ತಿಲ್ಲ. ಕೇಂದ್ರ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡ ನಂಬಿಕೆಗೆ ಅರ್ಹವಲ್ಲ ಎಂದು ಅವರು ಹೇಳಿದರು.<br /> <br /> ಹಿಂದೂ ಸಮಾಜ ರಕ್ಷಣೆ ಹೆಸರಿನಲ್ಲಿ ಬಿಜೆಪಿ ಭಾವನಾತ್ಮಕ ವಿಚಾರಗಳನ್ನೇ ಪ್ರಮುಖವಾಗಿಸಿಕೊಂಡು ಮತ ಕೇಳುತ್ತಿದೆ. ಕಾಂಗ್ರೆಸ್ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯವನ್ನೇ ನಂಬಿಕೊಂಡಿದೆ. ಆದರೆ ಜೆಡಿಎಸ್ ಎಲ್ಲ ಜಾತಿ-ಧರ್ಮದವರೂ ಸಹೋದರತೆಯಿಂದ ಬಾಳಬೇಕು ಎಂಬ ಆಶಯದೊಂದಿಗೆ ಕೆಲಸ ಮಾಡುತ್ತಿದೆ ಎಂದರು.<br /> <br /> ಜೆಡಿಎಸ್ ಸ್ಥಳೀಯ ಮುಖಂಡರಾದ ಮಂಜಪ್ಪಯ್ಯ, ಉಮಾಪತಿ, ರಾಜಣ್ಣ, ಜ್ವಾಲನಯ್ಯ, ವಿಜಯಕುಮಾರ್, ಆಶಾಲತಾ, ಸಂತೋಷ್ ಮತ್ತಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>