<p>ಬೆಂಗಳೂರು: ಕೇಂದ್ರ ಸರ್ಕಾರವು `ಜೆನರ್ಮ್~ ಯೋಜನೆಗಾಗಿ ಸೂಚಿಸಿದ 23 ಸುಧಾರಣಾ ಕ್ರಮಗಳ ಪೈಕಿ ಕರ್ನಾಟಕ ಸರ್ಕಾರವು 19 ಸುಧಾರಣಾ ಕ್ರಮಗಳನ್ನು ಯಶಸ್ವಿಯಾಗಿ ಕೈಗೊಂಡಿದೆ ಎಂದು ಮುಂಬೈನ ಕ್ರಿಸಿಲ್ ರಿಸ್ಕ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಸಲ್ಯೂಷನ್ಸ್ ಲಿಮಿಟೆಡ್ನ ಸಲಹೆಗಾರ ರವಿಕಾಂತ್ ಜೋಷಿ ಹೇಳಿದರು.<br /> <br /> ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> ಜೆನರ್ಮ್ ಸಲಹೆಗಳನ್ನು ಜಾರಿ ಮಾಡುವ ವಿಚಾರದಲ್ಲಿ ಕಳೆದ ಏಳು ವರ್ಷಗಳ ಅವಧಿಯಲ್ಲಿ ಕರ್ನಾಟಕ ಸರ್ಕಾರ ಉತ್ತಮವಾಗಿ ನಡೆದುಕೊಂಡಿದೆ. ಎರಡನೇ ಹಂತದ ಸುಧಾರಣಾ ಕ್ರಮಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.<br /> <br /> `ಹೂಡಿಕೆದಾರರಿಗೆ ನಾನು ಶಿಫಾರಸು ಮಾಡುವ ದೇಶದ ಮೂರು ರಾಜ್ಯಗಳಲ್ಲಿ ಕರ್ನಾಟಕ ಒಂದಾಗಿದೆ~ ಎಂದು ಅವರು ಶ್ಲಾಘಿಸಿದರು.<br /> <br /> ನಗರಾಭಿವೃದ್ಧಿಗಾಗಿ ಗುಜರಾತ್ ಮಾದರಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ಒದಗಿಸಲು ಸೂಕ್ತ ನೀತಿ ರೂಪಿಸಬೇಕು. ನಗರ ಭೂ ನೀತಿಯನ್ನು ಜಾರಿಗೊಳಿಸಬೇಕು ಎಂದು ಅವರು ಸಲಹೆ ನೀಡಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕೇಂದ್ರ ಸರ್ಕಾರವು `ಜೆನರ್ಮ್~ ಯೋಜನೆಗಾಗಿ ಸೂಚಿಸಿದ 23 ಸುಧಾರಣಾ ಕ್ರಮಗಳ ಪೈಕಿ ಕರ್ನಾಟಕ ಸರ್ಕಾರವು 19 ಸುಧಾರಣಾ ಕ್ರಮಗಳನ್ನು ಯಶಸ್ವಿಯಾಗಿ ಕೈಗೊಂಡಿದೆ ಎಂದು ಮುಂಬೈನ ಕ್ರಿಸಿಲ್ ರಿಸ್ಕ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಸಲ್ಯೂಷನ್ಸ್ ಲಿಮಿಟೆಡ್ನ ಸಲಹೆಗಾರ ರವಿಕಾಂತ್ ಜೋಷಿ ಹೇಳಿದರು.<br /> <br /> ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> ಜೆನರ್ಮ್ ಸಲಹೆಗಳನ್ನು ಜಾರಿ ಮಾಡುವ ವಿಚಾರದಲ್ಲಿ ಕಳೆದ ಏಳು ವರ್ಷಗಳ ಅವಧಿಯಲ್ಲಿ ಕರ್ನಾಟಕ ಸರ್ಕಾರ ಉತ್ತಮವಾಗಿ ನಡೆದುಕೊಂಡಿದೆ. ಎರಡನೇ ಹಂತದ ಸುಧಾರಣಾ ಕ್ರಮಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.<br /> <br /> `ಹೂಡಿಕೆದಾರರಿಗೆ ನಾನು ಶಿಫಾರಸು ಮಾಡುವ ದೇಶದ ಮೂರು ರಾಜ್ಯಗಳಲ್ಲಿ ಕರ್ನಾಟಕ ಒಂದಾಗಿದೆ~ ಎಂದು ಅವರು ಶ್ಲಾಘಿಸಿದರು.<br /> <br /> ನಗರಾಭಿವೃದ್ಧಿಗಾಗಿ ಗುಜರಾತ್ ಮಾದರಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ಒದಗಿಸಲು ಸೂಕ್ತ ನೀತಿ ರೂಪಿಸಬೇಕು. ನಗರ ಭೂ ನೀತಿಯನ್ನು ಜಾರಿಗೊಳಿಸಬೇಕು ಎಂದು ಅವರು ಸಲಹೆ ನೀಡಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>