<p><strong>ಹುಬ್ಬಳ್ಳಿ: </strong>ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಕೌಶಲ, ಸಾಮರ್ಥ್ಯವನ್ನು ಒರೆಗೆ ಹಚ್ಚುವ `ಜೆನಿತ್-12 ರೀಲ್ ಫಾರ್ ರಿಯಲ್~ ರಾಷ್ಟ್ರಮಟ್ಟದ ಮ್ಯಾನೇಜ್ವೆುಂಟ್ ಉತ್ಸವಕ್ಕೆ ಶುಕ್ರವಾರ ಚಾಲನೆ ದೊರೆಯಿತು.<br /> <br /> ಕುಸುಗಲ್ರಸ್ತೆಯಲ್ಲಿರುವ ಆಕ್ಸ್ಫರ್ಡ್ ಕಾಲೇಜಿನ ಬಿಬಿಎ ವಿಭಾಗವು ಈ ಉತ್ಸವ ಆಯೋಜಿಸಿದೆ. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಸಿನೆಮಾ ರಂಗದ ಉದ್ಯಮ ಹಾಗೂ ಚಟುವಟಿಕೆಗಳನ್ನು ಆಧಾರವಾಗಿ ಇಟ್ಟುಕೊಂಡು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪ್ರೀಮಿಯರ್, ನಿರ್ದೇಶಕ, ನಿರ್ಮಾಪಕ, ಕಾಸ್ಟ್ ಡೈರೆಕ್ಟರ್, ಮಾರುಕಟ್ಟೆ ತಂತ್ರಗಳು ಹಾಗೂ ಮಾಧ್ಯಮ ಪ್ರಚಾರದ ಕುರಿತು ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಶುಕ್ರವಾರ ಈ ಎಲ್ಲ ಸ್ಪರ್ಧೆಗಳ ಮೊದಲ ಸುತ್ತಿನ ಸ್ಪರ್ಧೆಗಳು ನಡೆದವು. <br /> <br /> ಆತಿಥೇಯ ಹುಬ್ಬಳ್ಳಿ-ಧಾರವಾಡ ವಿದ್ಯಾರ್ಥಿಗಳ ಜೊತೆಗೆ ಬೆಳಗಾವಿ, ಗದಗ, ಹಾವೇರಿ, ವಿಜಾಪುರ, ದಾವಣಗೆರೆ ಮೊದಲಾದ ಭಾಗಗಳ 15ಕ್ಕೂ ಹೆಚ್ಚು ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಶನಿವಾರ ಸಂಜೆ 6ಕ್ಕೆ ಸ್ಪರ್ಧೆಯ ಸಮಾರೋಪ ಸಮಾರಂಭ ನಡೆಯಲಿದೆ. <br /> <br /> ಉದ್ಘಾಟನೆ: ಸಿಡಾಕ್ ನಿರ್ದೇಶಕ ಮಹಾಂತೇಶ ಜೀವಣ್ಣವರ ಅವರು ಉತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಜೀವನದಲ್ಲಿ ಯಾವುದೂ ಪರಿಪೂರ್ಣವಲ್ಲ. ಅದನ್ನು ನಾವೇ ನಿರ್ಮಿಸಿಕೊಳ್ಳಬೇಕು. ನಮ್ಮ ದೌರ್ಬಲ್ಯಗಳನ್ನು ಬದಿಗೊತ್ತಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು. ಯಾವುದೇ ಕೆಲಸವಿರಲಿ, ಅದನ್ನು ಪ್ರೀತಿಯಿಂದ ಮಾಡಿ. ಆಗ ಯಶಸ್ಸು ನಿಮ್ಮದಾಗುತ್ತದೆ ಎಂದು ನುಡಿದರು.<br /> <br /> ಕಾಲೇಜಿನ ನಿರ್ದೇಶಕ ಡಾ. ಆರ್. ವಿ. ದಾಡಿಬಾವಿ, ಪದವಿಪೂರ್ವ ಕಾಲೇಜು ಪ್ರಾಚಾರ್ಯ ಸಂತೋಷ ಕೃಷ್ಣಾಪುರ, ಬಿಬಿಎ ವಿಭಾಗದ ಮುಖ್ಯಸ್ಥೆ ಡಾ. ಆರೀಫಾ ಹಾಗೂ ಇತರರು ಈ ಸಂದರ್ಭ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಕೌಶಲ, ಸಾಮರ್ಥ್ಯವನ್ನು ಒರೆಗೆ ಹಚ್ಚುವ `ಜೆನಿತ್-12 ರೀಲ್ ಫಾರ್ ರಿಯಲ್~ ರಾಷ್ಟ್ರಮಟ್ಟದ ಮ್ಯಾನೇಜ್ವೆುಂಟ್ ಉತ್ಸವಕ್ಕೆ ಶುಕ್ರವಾರ ಚಾಲನೆ ದೊರೆಯಿತು.<br /> <br /> ಕುಸುಗಲ್ರಸ್ತೆಯಲ್ಲಿರುವ ಆಕ್ಸ್ಫರ್ಡ್ ಕಾಲೇಜಿನ ಬಿಬಿಎ ವಿಭಾಗವು ಈ ಉತ್ಸವ ಆಯೋಜಿಸಿದೆ. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಸಿನೆಮಾ ರಂಗದ ಉದ್ಯಮ ಹಾಗೂ ಚಟುವಟಿಕೆಗಳನ್ನು ಆಧಾರವಾಗಿ ಇಟ್ಟುಕೊಂಡು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪ್ರೀಮಿಯರ್, ನಿರ್ದೇಶಕ, ನಿರ್ಮಾಪಕ, ಕಾಸ್ಟ್ ಡೈರೆಕ್ಟರ್, ಮಾರುಕಟ್ಟೆ ತಂತ್ರಗಳು ಹಾಗೂ ಮಾಧ್ಯಮ ಪ್ರಚಾರದ ಕುರಿತು ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಶುಕ್ರವಾರ ಈ ಎಲ್ಲ ಸ್ಪರ್ಧೆಗಳ ಮೊದಲ ಸುತ್ತಿನ ಸ್ಪರ್ಧೆಗಳು ನಡೆದವು. <br /> <br /> ಆತಿಥೇಯ ಹುಬ್ಬಳ್ಳಿ-ಧಾರವಾಡ ವಿದ್ಯಾರ್ಥಿಗಳ ಜೊತೆಗೆ ಬೆಳಗಾವಿ, ಗದಗ, ಹಾವೇರಿ, ವಿಜಾಪುರ, ದಾವಣಗೆರೆ ಮೊದಲಾದ ಭಾಗಗಳ 15ಕ್ಕೂ ಹೆಚ್ಚು ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಶನಿವಾರ ಸಂಜೆ 6ಕ್ಕೆ ಸ್ಪರ್ಧೆಯ ಸಮಾರೋಪ ಸಮಾರಂಭ ನಡೆಯಲಿದೆ. <br /> <br /> ಉದ್ಘಾಟನೆ: ಸಿಡಾಕ್ ನಿರ್ದೇಶಕ ಮಹಾಂತೇಶ ಜೀವಣ್ಣವರ ಅವರು ಉತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಜೀವನದಲ್ಲಿ ಯಾವುದೂ ಪರಿಪೂರ್ಣವಲ್ಲ. ಅದನ್ನು ನಾವೇ ನಿರ್ಮಿಸಿಕೊಳ್ಳಬೇಕು. ನಮ್ಮ ದೌರ್ಬಲ್ಯಗಳನ್ನು ಬದಿಗೊತ್ತಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು. ಯಾವುದೇ ಕೆಲಸವಿರಲಿ, ಅದನ್ನು ಪ್ರೀತಿಯಿಂದ ಮಾಡಿ. ಆಗ ಯಶಸ್ಸು ನಿಮ್ಮದಾಗುತ್ತದೆ ಎಂದು ನುಡಿದರು.<br /> <br /> ಕಾಲೇಜಿನ ನಿರ್ದೇಶಕ ಡಾ. ಆರ್. ವಿ. ದಾಡಿಬಾವಿ, ಪದವಿಪೂರ್ವ ಕಾಲೇಜು ಪ್ರಾಚಾರ್ಯ ಸಂತೋಷ ಕೃಷ್ಣಾಪುರ, ಬಿಬಿಎ ವಿಭಾಗದ ಮುಖ್ಯಸ್ಥೆ ಡಾ. ಆರೀಫಾ ಹಾಗೂ ಇತರರು ಈ ಸಂದರ್ಭ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>