<p><strong>ಬೆಂಗಳೂರು: </strong>‘ಕರಾವಳಿ ನಿಯಂತ್ರಣ ವಲಯ’ (ಸಿಆರ್ಜೆಡ್) ಅಧಿಸೂಚನೆಯಲ್ಲಿ ರಾಜ್ಯದ ಕರಾವಳಿ ಜನರ ಹಿತರಕ್ಷಣೆಗೆ ಅಗತ್ಯವಿರುವ ಅಂಶಗಳನ್ನು ಸೇರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ರಾಜ್ಯ ಸಚಿವ ಜೈರಾಂ ರಮೇಶ್ ಅವರಿಗೆ ಪತ್ರ ಬರೆದಿದ್ದಾರೆ.<br /> <br /> ಈ ಸಂಬಂಧ ಫೆ.14ರಂದು ಕೇಂದ್ರ ಸಚಿವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ, ರಾಜ್ಯದ ಜನರ ಹಿತದೃಷ್ಟಿಯಿಂದ ಕೆಲವು ಅಂಶಗಳನ್ನು ಅಧಿಸೂಚನೆಯಲ್ಲಿ ಸೇರಿಸುವಂತೆ ಈ ಹಿಂದೆ ಎರಡು ಪತ್ರಗಳನ್ನು ಬರೆಯಲಾಗಿತ್ತು. ಅವುಗಳನ್ನು ಕೈಬಿಟ್ಟು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ರಾಜ್ಯದ ಕರಾವಳಿ ವಲಯದ ಜನರು ಭವಿಷ್ಯದಲ್ಲಿ ತೀವ್ರ ತೊಂದರೆ ಎದುರಿಸುವಂತಾಗಿದೆ ಎಂದರು. <br /> <br /> ‘ನದಿ ತೀರದ ದ್ವೀಪಗಳ ನಿಯಂತ್ರಣ ವಲಯದ ವ್ಯಾಪ್ತಿ, ಸ್ಥಳೀಯ ಮೀನುಗಾರರು ಮತ್ತು ಜನರ ಹಿತದೃಷ್ಟಿಯಿಂದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕೇರಳ, ಗೋವಾ ಮತ್ತು ನವಿ ಮುಂಬೈ ಮಾದರಿಯಲ್ಲಿ ರಾಜ್ಯಕ್ಕೂ ರಿಯಾಯಿತಿ ನೀಡಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.<br /> <br /> ಸಿಆರ್ಜೆಡ್-3ರ ವ್ಯಾಪ್ತಿಯ 200ರಿಂದ 500 ಮೀಟರ್ ವ್ಯಾಪ್ತಿಯಲ್ಲಿ ಮಂಜುಗಡ್ಡೆ ಘಟಕಗಳು, ಶೈತ್ಯಾಗಾರಗಳು, ಮೀನು ಸಂಸ್ಕರಣಾ ಘಟಕಗಳು ಮತ್ತು ನಾಗರಿಕ ಸೌಲಭ್ಯ ಕಲ್ಪಿಸಲು ಅವಕಾಶ ನೀಡಬೇಕು. ನಿಯಂತ್ರಣ ವಲಯದಲ್ಲಿ ರಸ್ತೆಗಳ ನಿರ್ಮಾಣಕ್ಕೆ ವಿನಾಯಿತಿ ನೀಡುವುದು. ಸಿಆರ್ಜೆಡ್-3ರ ವ್ಯಾಪ್ತಿಯಲ್ಲಿರುವ ಹಳ್ಳಿಗಳಿಗೆ ಸಿಆರ್ಜೆಡ್-2 ವಲಯದ ಸ್ಥಾನಮಾನ ನೀಡುವ ಅಂಶಗಳನ್ನು ಅಧಿಸೂಚನೆಯಲ್ಲಿ ಅಳವಡಿಸಬೇಕು ಎಂದು ಕೋರಿದ್ದಾರೆ.<br /> <br /> ನಿಯಂತ್ರಣ ವಲಯದಲ್ಲಿ ಮರಳು ಗಣಿಗಾರಿಕೆ ಮತ್ತು ಕಪ್ಪೆಚಿಪ್ಪು ಸಂಗ್ರಹಕ್ಕೆ ಅವಕಾಶ ನೀಡುವುದು, ರಾಜ್ಯ ಕರಾವಳಿ ವಲಯ ನಿಯಂತ್ರಣ ಪ್ರಾಧಿಕಾರಗಳಿಗೆ ಹೆಚ್ಚಿನ ಆರ್ಥಿಕ ನೆರವು ಒದಗಿಸುವುದು, ಈ ಪ್ರದೇಶದಲ್ಲಿ ಯಾಂತ್ರೀಕೃತ ಮೀನುಗಾರಿಕೆಗೆ ಅವಕಾಶ ಕಲ್ಪಿಸುವುದು ಮತ್ತಿತರ ಅಂಶಗಳನ್ನೂ ಅಧಿಸೂಚನೆಯಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದ್ದಾರೆ.<br /> <br /> ಪ್ರಧಾನಿಗೆ ಪತ್ರ:ಯಡಿಯೂರಪ್ಪ ಅವರು ಫೆ. 4ರಂದು ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಪತ್ರವೊಂದನ್ನು ಬರೆದಿದ್ದು, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಲಭ್ಯವಾಗುವ ಆರ್ಥಿಕ ಅನುಕೂಲಗಳನ್ನು ಒದಗಿಸಲು ಹಣಕಾಸು ಸ್ಥಾಯಿ ಸಮಿತಿ ರಚಿಸುವಂತೆ ಒತ್ತಾಯ ಮಾಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕರಾವಳಿ ನಿಯಂತ್ರಣ ವಲಯ’ (ಸಿಆರ್ಜೆಡ್) ಅಧಿಸೂಚನೆಯಲ್ಲಿ ರಾಜ್ಯದ ಕರಾವಳಿ ಜನರ ಹಿತರಕ್ಷಣೆಗೆ ಅಗತ್ಯವಿರುವ ಅಂಶಗಳನ್ನು ಸೇರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ರಾಜ್ಯ ಸಚಿವ ಜೈರಾಂ ರಮೇಶ್ ಅವರಿಗೆ ಪತ್ರ ಬರೆದಿದ್ದಾರೆ.<br /> <br /> ಈ ಸಂಬಂಧ ಫೆ.14ರಂದು ಕೇಂದ್ರ ಸಚಿವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ, ರಾಜ್ಯದ ಜನರ ಹಿತದೃಷ್ಟಿಯಿಂದ ಕೆಲವು ಅಂಶಗಳನ್ನು ಅಧಿಸೂಚನೆಯಲ್ಲಿ ಸೇರಿಸುವಂತೆ ಈ ಹಿಂದೆ ಎರಡು ಪತ್ರಗಳನ್ನು ಬರೆಯಲಾಗಿತ್ತು. ಅವುಗಳನ್ನು ಕೈಬಿಟ್ಟು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ರಾಜ್ಯದ ಕರಾವಳಿ ವಲಯದ ಜನರು ಭವಿಷ್ಯದಲ್ಲಿ ತೀವ್ರ ತೊಂದರೆ ಎದುರಿಸುವಂತಾಗಿದೆ ಎಂದರು. <br /> <br /> ‘ನದಿ ತೀರದ ದ್ವೀಪಗಳ ನಿಯಂತ್ರಣ ವಲಯದ ವ್ಯಾಪ್ತಿ, ಸ್ಥಳೀಯ ಮೀನುಗಾರರು ಮತ್ತು ಜನರ ಹಿತದೃಷ್ಟಿಯಿಂದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕೇರಳ, ಗೋವಾ ಮತ್ತು ನವಿ ಮುಂಬೈ ಮಾದರಿಯಲ್ಲಿ ರಾಜ್ಯಕ್ಕೂ ರಿಯಾಯಿತಿ ನೀಡಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.<br /> <br /> ಸಿಆರ್ಜೆಡ್-3ರ ವ್ಯಾಪ್ತಿಯ 200ರಿಂದ 500 ಮೀಟರ್ ವ್ಯಾಪ್ತಿಯಲ್ಲಿ ಮಂಜುಗಡ್ಡೆ ಘಟಕಗಳು, ಶೈತ್ಯಾಗಾರಗಳು, ಮೀನು ಸಂಸ್ಕರಣಾ ಘಟಕಗಳು ಮತ್ತು ನಾಗರಿಕ ಸೌಲಭ್ಯ ಕಲ್ಪಿಸಲು ಅವಕಾಶ ನೀಡಬೇಕು. ನಿಯಂತ್ರಣ ವಲಯದಲ್ಲಿ ರಸ್ತೆಗಳ ನಿರ್ಮಾಣಕ್ಕೆ ವಿನಾಯಿತಿ ನೀಡುವುದು. ಸಿಆರ್ಜೆಡ್-3ರ ವ್ಯಾಪ್ತಿಯಲ್ಲಿರುವ ಹಳ್ಳಿಗಳಿಗೆ ಸಿಆರ್ಜೆಡ್-2 ವಲಯದ ಸ್ಥಾನಮಾನ ನೀಡುವ ಅಂಶಗಳನ್ನು ಅಧಿಸೂಚನೆಯಲ್ಲಿ ಅಳವಡಿಸಬೇಕು ಎಂದು ಕೋರಿದ್ದಾರೆ.<br /> <br /> ನಿಯಂತ್ರಣ ವಲಯದಲ್ಲಿ ಮರಳು ಗಣಿಗಾರಿಕೆ ಮತ್ತು ಕಪ್ಪೆಚಿಪ್ಪು ಸಂಗ್ರಹಕ್ಕೆ ಅವಕಾಶ ನೀಡುವುದು, ರಾಜ್ಯ ಕರಾವಳಿ ವಲಯ ನಿಯಂತ್ರಣ ಪ್ರಾಧಿಕಾರಗಳಿಗೆ ಹೆಚ್ಚಿನ ಆರ್ಥಿಕ ನೆರವು ಒದಗಿಸುವುದು, ಈ ಪ್ರದೇಶದಲ್ಲಿ ಯಾಂತ್ರೀಕೃತ ಮೀನುಗಾರಿಕೆಗೆ ಅವಕಾಶ ಕಲ್ಪಿಸುವುದು ಮತ್ತಿತರ ಅಂಶಗಳನ್ನೂ ಅಧಿಸೂಚನೆಯಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದ್ದಾರೆ.<br /> <br /> ಪ್ರಧಾನಿಗೆ ಪತ್ರ:ಯಡಿಯೂರಪ್ಪ ಅವರು ಫೆ. 4ರಂದು ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಪತ್ರವೊಂದನ್ನು ಬರೆದಿದ್ದು, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಲಭ್ಯವಾಗುವ ಆರ್ಥಿಕ ಅನುಕೂಲಗಳನ್ನು ಒದಗಿಸಲು ಹಣಕಾಸು ಸ್ಥಾಯಿ ಸಮಿತಿ ರಚಿಸುವಂತೆ ಒತ್ತಾಯ ಮಾಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>