<p><strong>ಬೆಂಗಳೂರು: </strong>ಲಂಚ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಶಾಸಕ ವೈ.ಸಂಪಂಗಿ ಅವರನ್ನು ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಹಾಗೂ ನೆಲಮಂಗಲ ಶಾಸಕ ಎಂ.ವಿ.ನಾಗರಾಜ್ ಶನಿವಾರ ಸಂಜೆ ಭೇಟಿಯಾಗಿದ್ದಾರೆ.<br /> <br /> `ಕಾರಾಗೃಹದ ಅಧೀಕ್ಷಕರ ಕಚೇರಿಯ ಕೊಠಡಿಯಲ್ಲಿ ಸಂಪಂಗಿ ಅವರೊಂದಿಗೆ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಲಾಯಿತು. ಮಾನಸಿಕವಾಗಿ ಕುಗ್ಗಿಹೋಗಿರುವ ಅವರಿಗೆ ಧೈರ್ಯ ತುಂಬಲು ಅವರನ್ನು ಭೇಟಿ ಮಾಡಿದ್ದೆವು. ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರು ದೂರವಾಣಿ ಮೂಲಕ ಸಂಪಂಗಿ ಅವರೊಂದಿಗೆ ಮಾತನಾಡಿ ಅವರಿಗೆ ಮಾನಸಿಕವಾಗಿ ಧೈರ್ಯ ನೀಡಿದ್ದಾರೆ. ಬಂಧನವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಈಶ್ವರಪ್ಪ ಅವರು ದೂರವಾಣಿ ಮೂಲಕ ಭರವಸೆ ನೀಡಿದ್ದಾರೆ~ ಎಂದು ನೆಲಮಂಗಲ ಶಾಸಕ ಎಂ.ವಿ.ನಾಗರಾಜ್ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `ಕಾನೂನು ಹೋರಾಟದ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಪಕ್ಷ ಸಿದ್ಧವಿದೆ. ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಸಂಪಂಗಿ ಅವರಿಗೆ ಸಾಂತ್ವನ ಹೇಳಿದ್ದಾರೆ. ಸುಮಾರು ಐದಾರು ನಿಮಿಷಗಳ ಕಾಲ ಮುಖ್ಯಮಂತ್ರಿಯವರು ಸಂಪಂಗಿ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು~ ಎಂದು ಅವರು ಹೇಳಿದರು.<br /> <br /> <strong>ನಿಯಮ ಉಲ್ಲಂಘನೆ : `</strong>ಕಾರಾಗೃಹ ನಿಯಮಾವಳಿಗಳ ಪ್ರಕಾರ ಕೈದಿಗಳನ್ನು ಭೇಟಿ ಮಾಡಲು ಕಾರಾಗೃಹಕ್ಕೆ ಬರುವವರು ಮೊಬೈಲ್ಗಳನ್ನು ಕಾರಾಗೃಹ ಪ್ರವೇಶ ದ್ವಾರದ ಬಳಿಯೇ ಇಟ್ಟು ಬರಬೇಕು. ಆದರೆ ಬಾಲಚಂದ್ರ ಜಾರಕಿಹೊಳಿ ಹಾಗೂ ನಾಗರಾಜ್ ಅವರು ಭೇಟಿ ನೀಡಿದ್ದ ವೇಳೆ ಮೊಬೈಲ್ಗಳೊಂದಿಗೇ ಕಾರಾಗೃಹ ಪ್ರವೇಶಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರ ಮೊಬೈಲ್ನಿಂದಲೇ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರು ಸಂಪಂಗಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಕಾರಾಗೃಹದ ಹಿರಿಯ ಅಧಿಕಾರಿಗಳೇ ನಿಯಮ ಉಲ್ಲಂಘನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ~ ಎಂದು ಕಾರಾಗೃಹದ ಮೂಲಗಳು `ಪ್ರಜಾವಾಣಿ~ಗೆ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲಂಚ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಶಾಸಕ ವೈ.ಸಂಪಂಗಿ ಅವರನ್ನು ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಹಾಗೂ ನೆಲಮಂಗಲ ಶಾಸಕ ಎಂ.ವಿ.ನಾಗರಾಜ್ ಶನಿವಾರ ಸಂಜೆ ಭೇಟಿಯಾಗಿದ್ದಾರೆ.<br /> <br /> `ಕಾರಾಗೃಹದ ಅಧೀಕ್ಷಕರ ಕಚೇರಿಯ ಕೊಠಡಿಯಲ್ಲಿ ಸಂಪಂಗಿ ಅವರೊಂದಿಗೆ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಲಾಯಿತು. ಮಾನಸಿಕವಾಗಿ ಕುಗ್ಗಿಹೋಗಿರುವ ಅವರಿಗೆ ಧೈರ್ಯ ತುಂಬಲು ಅವರನ್ನು ಭೇಟಿ ಮಾಡಿದ್ದೆವು. ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರು ದೂರವಾಣಿ ಮೂಲಕ ಸಂಪಂಗಿ ಅವರೊಂದಿಗೆ ಮಾತನಾಡಿ ಅವರಿಗೆ ಮಾನಸಿಕವಾಗಿ ಧೈರ್ಯ ನೀಡಿದ್ದಾರೆ. ಬಂಧನವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಈಶ್ವರಪ್ಪ ಅವರು ದೂರವಾಣಿ ಮೂಲಕ ಭರವಸೆ ನೀಡಿದ್ದಾರೆ~ ಎಂದು ನೆಲಮಂಗಲ ಶಾಸಕ ಎಂ.ವಿ.ನಾಗರಾಜ್ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `ಕಾನೂನು ಹೋರಾಟದ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಪಕ್ಷ ಸಿದ್ಧವಿದೆ. ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಸಂಪಂಗಿ ಅವರಿಗೆ ಸಾಂತ್ವನ ಹೇಳಿದ್ದಾರೆ. ಸುಮಾರು ಐದಾರು ನಿಮಿಷಗಳ ಕಾಲ ಮುಖ್ಯಮಂತ್ರಿಯವರು ಸಂಪಂಗಿ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು~ ಎಂದು ಅವರು ಹೇಳಿದರು.<br /> <br /> <strong>ನಿಯಮ ಉಲ್ಲಂಘನೆ : `</strong>ಕಾರಾಗೃಹ ನಿಯಮಾವಳಿಗಳ ಪ್ರಕಾರ ಕೈದಿಗಳನ್ನು ಭೇಟಿ ಮಾಡಲು ಕಾರಾಗೃಹಕ್ಕೆ ಬರುವವರು ಮೊಬೈಲ್ಗಳನ್ನು ಕಾರಾಗೃಹ ಪ್ರವೇಶ ದ್ವಾರದ ಬಳಿಯೇ ಇಟ್ಟು ಬರಬೇಕು. ಆದರೆ ಬಾಲಚಂದ್ರ ಜಾರಕಿಹೊಳಿ ಹಾಗೂ ನಾಗರಾಜ್ ಅವರು ಭೇಟಿ ನೀಡಿದ್ದ ವೇಳೆ ಮೊಬೈಲ್ಗಳೊಂದಿಗೇ ಕಾರಾಗೃಹ ಪ್ರವೇಶಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರ ಮೊಬೈಲ್ನಿಂದಲೇ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರು ಸಂಪಂಗಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಕಾರಾಗೃಹದ ಹಿರಿಯ ಅಧಿಕಾರಿಗಳೇ ನಿಯಮ ಉಲ್ಲಂಘನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ~ ಎಂದು ಕಾರಾಗೃಹದ ಮೂಲಗಳು `ಪ್ರಜಾವಾಣಿ~ಗೆ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>