<p>ಕೊಪ್ಪಳ: ಜೈಲು, ಬೇಲು (ಜಾಮೀನು) ಹಾಗೂ ಸೇಲು (ಮಾರಾಟ) ಬಿಜೆಪಿ ಆಸ್ತಿ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಲೇವಡಿ ಮಾಡಿದರು.<br /> <br /> ಅವರು ನಗರದ ಮಿಟ್ಟಿಕೇರಿಯಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚನೆಗಾಗಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದರು.<br /> <br /> ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜನಾರ್ದನ ರೆಡ್ಡಿ ಜೈಲು ಸೇರಿದ್ದಾನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ಯಡಿಯೂರಪ್ಪ ಬೇಲ್ಗಾಗಿ ಪರದಾಡುತ್ತಿದ್ದಾರೆ ಹಾಗೂ ಉಳಿದ ಬಿಜೆಪಿ ಮುಖಂಡರು ಮತದಾರರನ್ನು ಮಾರಾಟ (ಸೇಲ್) ಮಾಡಲು ಹೊರಟಿದ್ದಾರೆ ಎಂದು ವಿಶ್ಲೇಷಿಸಿದರು.<br /> <br /> 60 ವರ್ಷಗಳಲ್ಲಿ ಕಾಂಗ್ರೆಸ್ಗೆ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾಗಿ ಬಿಜೆಪಿ ಹೇಳುತ್ತಿದೆ. ಆದರೆ, ಕೃಷ್ಣಾ ಮೇಲ್ದಂಡೆ ಯೋಜನೆ, ಸಿಂಗಟಾಲೂರು, ಹಿರೇಹಳ್ಳ ಯೋಜನೆ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳು ಕಾಂಗ್ರೆಸ್ನ ಕೊಡುಗೆ ಎಂದು ಹೇಳಿದರು.<br /> <br /> ಸಿ.ಎಂ.ಇಬ್ರಾಹಿಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಹನುಮಂತರಾವ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಅಲ್ಲಂ ವೀರಭದ್ರಪ್ಪ, ಡಿ.ಕೆ.ಶಿವಕುಮಾರ್, ಅಭ್ಯರ್ಥಿ ಕೆ.ಬಸವರಾಜ ಹಿಟ್ನಾಳ್ ಮತ್ತಿತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ಜೈಲು, ಬೇಲು (ಜಾಮೀನು) ಹಾಗೂ ಸೇಲು (ಮಾರಾಟ) ಬಿಜೆಪಿ ಆಸ್ತಿ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಲೇವಡಿ ಮಾಡಿದರು.<br /> <br /> ಅವರು ನಗರದ ಮಿಟ್ಟಿಕೇರಿಯಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚನೆಗಾಗಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದರು.<br /> <br /> ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜನಾರ್ದನ ರೆಡ್ಡಿ ಜೈಲು ಸೇರಿದ್ದಾನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ಯಡಿಯೂರಪ್ಪ ಬೇಲ್ಗಾಗಿ ಪರದಾಡುತ್ತಿದ್ದಾರೆ ಹಾಗೂ ಉಳಿದ ಬಿಜೆಪಿ ಮುಖಂಡರು ಮತದಾರರನ್ನು ಮಾರಾಟ (ಸೇಲ್) ಮಾಡಲು ಹೊರಟಿದ್ದಾರೆ ಎಂದು ವಿಶ್ಲೇಷಿಸಿದರು.<br /> <br /> 60 ವರ್ಷಗಳಲ್ಲಿ ಕಾಂಗ್ರೆಸ್ಗೆ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾಗಿ ಬಿಜೆಪಿ ಹೇಳುತ್ತಿದೆ. ಆದರೆ, ಕೃಷ್ಣಾ ಮೇಲ್ದಂಡೆ ಯೋಜನೆ, ಸಿಂಗಟಾಲೂರು, ಹಿರೇಹಳ್ಳ ಯೋಜನೆ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳು ಕಾಂಗ್ರೆಸ್ನ ಕೊಡುಗೆ ಎಂದು ಹೇಳಿದರು.<br /> <br /> ಸಿ.ಎಂ.ಇಬ್ರಾಹಿಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಹನುಮಂತರಾವ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಅಲ್ಲಂ ವೀರಭದ್ರಪ್ಪ, ಡಿ.ಕೆ.ಶಿವಕುಮಾರ್, ಅಭ್ಯರ್ಥಿ ಕೆ.ಬಸವರಾಜ ಹಿಟ್ನಾಳ್ ಮತ್ತಿತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>