<p><strong>ಬೆಂಗಳೂರು: </strong> ದಕ್ಷಿಣ ಕನ್ನಡ ಜೈನ ಮೈತ್ರಿಕೂಟವು ನಗರದ ಬಸವನಗುಡಿಯಲ್ಲಿನ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಗುರುವಾರ ಹಮ್ಮಿಕೊಂಡಿದ್ದ 27ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಜ್ಯೋತಿಷಿ ಹಾಗೂ ವಾಸ್ತುಶಾಸ್ತ್ರಜ್ಞ ಪಾದೂರು ಧರ್ಮರಾಜ ಇಂದ್ರ ಅವರಿಗೆ `ಮಹಾಕವಿ ರತ್ನಾಕರವರ್ಣಿ~ ಪ್ರಶಸ್ತಿ ಪ್ರದಾನ ಮಾಡಲಾಯಿತು.<br /> <br /> ಪ್ರಶಸ್ತಿ ಪ್ರದಾನ ಮಾಡಿದ ಕರ್ನಾಟಕ ಆಡಳಿತ ನ್ಯಾಯಮಂಡಳಿ ಅಧ್ಯಕ್ಷರಾದ ನ್ಯಾಯಮೂರ್ತಿ ಅಜಿತ್ ಸಿ. ಕಬ್ಬಿನ, `ಜ್ಯೋತಿಷದಲ್ಲಿ ಸಾಕಷ್ಟು ಸಾಧನೆ ಮಾಡಿರುವ ಪಾದೂರು ಧರ್ಮರಾಜ ಇಂದ್ರ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸೂಕ್ತವಾಗಿದೆ. ಸಮಾಜದಲ್ಲಿ ಖ್ಯಾತಿ ಪಡೆದವರ ಬದಲಿಗೆ ಎಲೆ ಮರೆ ಕಾಯಿಯಂತೆ ಸಾಧನೆ ಮಾಡುತ್ತಿರುವವರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಅರ್ಥಪೂರ್ಣವಾಗಿದೆ~ ಎಂದರು.<br /> <br /> `ಯಾವುದೇ ಅಭ್ಯಾಸ ನಡೆಸದೆ ಹಸ್ತರೇಖೆ, ಜಾತಕ ನೋಡಿ ಭವಿಷ್ಯ ಹೇಳುವುದರಲ್ಲಿ ಅರ್ಥವಿಲ್ಲ. ಆದರೆ ಆಳ ಅಧ್ಯಯನ ಮಾಡಿ ಜ್ಯೋತಿಷ ಅಭ್ಯಾಸ ಮಾಡಿದರೆ, ಭವಿಷ್ಯವನ್ನು ನಿಖರವಾಗಿ ಹೇಳಲು ಸಾಧ್ಯವಿದೆ. ಇದಕ್ಕೆ ಪುರಾವೆಗಳೂ ಇವೆ. ಧರ್ಮರಾಜ ಇಂದ್ರ ಅವರು ಈ ರೀತಿ ಅಭ್ಯಾಸ ನಡೆಸಿದವರ ಸಾಲಿನಲ್ಲಿ ನಿಲ್ಲುತ್ತಾರೆ~ ಎಂದು ಹೇಳಿದರು.<br /> <br /> `ಮೈತ್ರಿಕೂಟವು ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಉತ್ತಮವಾಗಿದೆ. ತಿಂಗಳಿಗೊಮ್ಮೆ ಎಲ್ಲರೂ ಸೇರುವುದರಿಂದ ಸೌಹಾರ್ದ ಬೆಳೆಯುತ್ತದೆ. ಇದರಿಂದ ಸಾಂಸ್ಕೃತಿಕ ಬೇರುಗಳು ಬಲಗೊಂಡು ಯುವಜನತೆ ಸಂಸ್ಕೃತಿಯನ್ನು ಪಾಲಿಸಲು ನೆರವಾಗುತ್ತದೆ. ಹಾಗಾಗಿ ಈ ರೀತಿಯ ಇನ್ನಷ್ಟು ಸಂಘಗಳು ರಚನೆಯಾಗಬೇಕು~ ಎಂದರು.<br /> <br /> ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಾದೂರು ಧರ್ಮರಾಜ ಇಂದ್ರ, `ಇದು ನನ್ನ ಜೀವನದ ಅತ್ಯಂತ ಸ್ಮರಣೀಯ ಸಂದರ್ಭ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರು ನೀಡಿದ ಪ್ರೋತ್ಸಾಹದಿಂದಾಗಿ ಒಂದಷ್ಟು ಸೇವೆ ಸಲ್ಲಿಸಿದ್ದೇನೆ~ ಎಂದು ಭಾವುಕರಾಗಿ ನುಡಿದರು.<br /> <br /> `ಹಿಂದೂಗಳು ಮಾತ್ರವಲ್ಲ ಮುಸ್ಲಿಮರು, ಕ್ರೈಸ್ತರು ಸಹ ಜ್ಯೋತಿಷಶಾಸ್ತ್ರವನ್ನು ಗೌರವಿಸುತ್ತಾರೆ. ಸರಿಯಾಗಿ ಅಧ್ಯಯನ ಮಾಡಿದರೆ ಕರ್ಮಫಲಗಳನ್ನು ತಿಳಿಯಲು ಸಾಧ್ಯವಿದೆ~ ಎಂದರು.<br /> <br /> ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಚಿರಾಗ್ ಜೈನ್ ಅವರನ್ನು ಸನ್ಮಾನಿಸಲಾಯಿತು. ಪಾದೂರು ಧರ್ಮರಾಜ ಇಂದ್ರ ಅವರ ಪತ್ನಿ ಚಾರಿತ್ರಮತಿ ಅವರನ್ನು ಅಭಿನಂದಿಸಲಾಯಿತು.<br /> <br /> ಮೈತ್ರಿಕೂಟದ ಅಧ್ಯಕ್ಷ ಡಿ.ಸುರೇಂದ್ರ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಸುರೇಂದ್ರ ಕುಮಾರ್, ಕಾರ್ಯಾಧ್ಯಕ್ಷ ಕೆ.ಬಿ. ಯುವರಾಜ ಬಲ್ಲಾಳ್, ಕಾರ್ಯದರ್ಶಿ ಕೆ. ಜಯರಾಜ ಆರಿಗ, ಸಹಾಯಕ ಕಾರ್ಯದರ್ಶಿ ಗುಣಪಾಲ ಜೈನ್ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong> ದಕ್ಷಿಣ ಕನ್ನಡ ಜೈನ ಮೈತ್ರಿಕೂಟವು ನಗರದ ಬಸವನಗುಡಿಯಲ್ಲಿನ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಗುರುವಾರ ಹಮ್ಮಿಕೊಂಡಿದ್ದ 27ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಜ್ಯೋತಿಷಿ ಹಾಗೂ ವಾಸ್ತುಶಾಸ್ತ್ರಜ್ಞ ಪಾದೂರು ಧರ್ಮರಾಜ ಇಂದ್ರ ಅವರಿಗೆ `ಮಹಾಕವಿ ರತ್ನಾಕರವರ್ಣಿ~ ಪ್ರಶಸ್ತಿ ಪ್ರದಾನ ಮಾಡಲಾಯಿತು.<br /> <br /> ಪ್ರಶಸ್ತಿ ಪ್ರದಾನ ಮಾಡಿದ ಕರ್ನಾಟಕ ಆಡಳಿತ ನ್ಯಾಯಮಂಡಳಿ ಅಧ್ಯಕ್ಷರಾದ ನ್ಯಾಯಮೂರ್ತಿ ಅಜಿತ್ ಸಿ. ಕಬ್ಬಿನ, `ಜ್ಯೋತಿಷದಲ್ಲಿ ಸಾಕಷ್ಟು ಸಾಧನೆ ಮಾಡಿರುವ ಪಾದೂರು ಧರ್ಮರಾಜ ಇಂದ್ರ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸೂಕ್ತವಾಗಿದೆ. ಸಮಾಜದಲ್ಲಿ ಖ್ಯಾತಿ ಪಡೆದವರ ಬದಲಿಗೆ ಎಲೆ ಮರೆ ಕಾಯಿಯಂತೆ ಸಾಧನೆ ಮಾಡುತ್ತಿರುವವರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಅರ್ಥಪೂರ್ಣವಾಗಿದೆ~ ಎಂದರು.<br /> <br /> `ಯಾವುದೇ ಅಭ್ಯಾಸ ನಡೆಸದೆ ಹಸ್ತರೇಖೆ, ಜಾತಕ ನೋಡಿ ಭವಿಷ್ಯ ಹೇಳುವುದರಲ್ಲಿ ಅರ್ಥವಿಲ್ಲ. ಆದರೆ ಆಳ ಅಧ್ಯಯನ ಮಾಡಿ ಜ್ಯೋತಿಷ ಅಭ್ಯಾಸ ಮಾಡಿದರೆ, ಭವಿಷ್ಯವನ್ನು ನಿಖರವಾಗಿ ಹೇಳಲು ಸಾಧ್ಯವಿದೆ. ಇದಕ್ಕೆ ಪುರಾವೆಗಳೂ ಇವೆ. ಧರ್ಮರಾಜ ಇಂದ್ರ ಅವರು ಈ ರೀತಿ ಅಭ್ಯಾಸ ನಡೆಸಿದವರ ಸಾಲಿನಲ್ಲಿ ನಿಲ್ಲುತ್ತಾರೆ~ ಎಂದು ಹೇಳಿದರು.<br /> <br /> `ಮೈತ್ರಿಕೂಟವು ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಉತ್ತಮವಾಗಿದೆ. ತಿಂಗಳಿಗೊಮ್ಮೆ ಎಲ್ಲರೂ ಸೇರುವುದರಿಂದ ಸೌಹಾರ್ದ ಬೆಳೆಯುತ್ತದೆ. ಇದರಿಂದ ಸಾಂಸ್ಕೃತಿಕ ಬೇರುಗಳು ಬಲಗೊಂಡು ಯುವಜನತೆ ಸಂಸ್ಕೃತಿಯನ್ನು ಪಾಲಿಸಲು ನೆರವಾಗುತ್ತದೆ. ಹಾಗಾಗಿ ಈ ರೀತಿಯ ಇನ್ನಷ್ಟು ಸಂಘಗಳು ರಚನೆಯಾಗಬೇಕು~ ಎಂದರು.<br /> <br /> ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಾದೂರು ಧರ್ಮರಾಜ ಇಂದ್ರ, `ಇದು ನನ್ನ ಜೀವನದ ಅತ್ಯಂತ ಸ್ಮರಣೀಯ ಸಂದರ್ಭ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರು ನೀಡಿದ ಪ್ರೋತ್ಸಾಹದಿಂದಾಗಿ ಒಂದಷ್ಟು ಸೇವೆ ಸಲ್ಲಿಸಿದ್ದೇನೆ~ ಎಂದು ಭಾವುಕರಾಗಿ ನುಡಿದರು.<br /> <br /> `ಹಿಂದೂಗಳು ಮಾತ್ರವಲ್ಲ ಮುಸ್ಲಿಮರು, ಕ್ರೈಸ್ತರು ಸಹ ಜ್ಯೋತಿಷಶಾಸ್ತ್ರವನ್ನು ಗೌರವಿಸುತ್ತಾರೆ. ಸರಿಯಾಗಿ ಅಧ್ಯಯನ ಮಾಡಿದರೆ ಕರ್ಮಫಲಗಳನ್ನು ತಿಳಿಯಲು ಸಾಧ್ಯವಿದೆ~ ಎಂದರು.<br /> <br /> ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಚಿರಾಗ್ ಜೈನ್ ಅವರನ್ನು ಸನ್ಮಾನಿಸಲಾಯಿತು. ಪಾದೂರು ಧರ್ಮರಾಜ ಇಂದ್ರ ಅವರ ಪತ್ನಿ ಚಾರಿತ್ರಮತಿ ಅವರನ್ನು ಅಭಿನಂದಿಸಲಾಯಿತು.<br /> <br /> ಮೈತ್ರಿಕೂಟದ ಅಧ್ಯಕ್ಷ ಡಿ.ಸುರೇಂದ್ರ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಸುರೇಂದ್ರ ಕುಮಾರ್, ಕಾರ್ಯಾಧ್ಯಕ್ಷ ಕೆ.ಬಿ. ಯುವರಾಜ ಬಲ್ಲಾಳ್, ಕಾರ್ಯದರ್ಶಿ ಕೆ. ಜಯರಾಜ ಆರಿಗ, ಸಹಾಯಕ ಕಾರ್ಯದರ್ಶಿ ಗುಣಪಾಲ ಜೈನ್ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>