<p><strong>ಬೆಂಗಳೂರು:</strong> ‘ಅನ್ನಭಾಗ್ಯ ಯೋಜನೆ ಅಡಿ ಕಾರ್ಯನಿರ್ವಹಿಸುತ್ತಿರುವ ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜ. 6ರಂದು ಬಂದ್ ನಡೆಸಲು ಉದ್ದೇಶಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ಲೋಡಿಂಗ್ ಮತ್ತು ಅನ್ಲೋಡಿಂಗ್ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ವರದರಾಜೇಂದ್ರ ತಿಳಿಸಿದರು.<br /> <br /> ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅಡಿ 13 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಹಮಾಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಕಾರ್ಮಿಕರಿಗೆ ಸರಿಯಾದ ಕೂಲಿ, ಅಗತ್ಯ ಸೌಲಭ್ಯ ನೀಡದೆ ವಂಚಿಸಲಾಗುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.<br /> <br /> ಗೋದಾಮಿನಿಂದ ಪಡಿತರ ಅಂಗಡಿಗೆ 1 ಕ್ವಿಂಟಲ್ ಅಕ್ಕಿದ ಮೂಟೆಯನ್ನು ಸಾಗಿಸಲು ರೂ6 ನೀಡಲಾಗುತ್ತಿದೆ. ಈ ಅಲ್ಪ ಹಣದಿಂದ ಕಾರ್ಮಿಕರ ಜೀವನ ನಿರ್ವಹಣೆ ಸಾಧ್ಯವಿಲ್ಲ. ಈ ಕುರಿತು ಕಳೆದ ಆಗಸ್ಟ್ನಲ್ಲಿ ಪ್ರತಿಭಟನೆ ನಡೆಸಿದಾಗ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದರು.<br /> <br /> ಅನ್ನಭಾಗ್ಯ ಯೋಜನೆ ಅಡಿ ಕೆಲಸ ಮಾಡುವ ಎಲ್ಲ ಹಮಾಲಿ ಕಾರ್ಮಿಕರಿಗೆ ಆಹಾರ ಇಲಾಖೆ ವತಿಯಿಂದ ಗುರುತಿನ ಚೀಟಿ ನೀಡಿ ಸೇವಾ ಭದ್ರತೆ ಒದಗಿಸಬೇಕು, ಎಲ್ಲ ಹಮಾಲಿ ಕಾರ್ಮಿಕರಿಗೆ ಇಎಸ್ಐ, ಪಿಎಫ್ ಸೌಲಭ್ಯವನ್ನು ಕಲ್ಪಿಸಬೇಕು, ಗೋದಾಮಿನಿಂದ ಪಡಿತರ ಅಂಗಡಿಗೆ ಸಾಗಿಸುವ 1 ಕ್ವಿಂಟಲ್ ಮೂಟೆಗೆ ರೂ18 ನಿಗದಿಪಡಿಸಬೇಕು ಮತ್ತು ಈಗಿರುವ ಆಹಾರ ಧಾನ್ಯಗಳ ಸಾಗಾಣಿಕೆ ಪದ್ಧತಿಯು ಕಾರ್ಮಿಕ ವಿರೋಧಿ ಪದ್ಧತಿಯಾಗಿದ್ದು ಅದನ್ನು ರದ್ದುಪಡಿಸಿ ಕೇಂದ್ರೀಕೃತ ಪದ್ಧತಿಯನ್ನು ಜಾರಿಗೊಳಿಸಬೇಕು ಎಂದು ಹೇಳಿದರು.<br /> <br /> ಈ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅನ್ನಭಾಗ್ಯ ಯೋಜನೆ ಅಡಿ ಕಾರ್ಯನಿರ್ವಹಿಸುತ್ತಿರುವ ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜ. 6ರಂದು ಬಂದ್ ನಡೆಸಲು ಉದ್ದೇಶಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ಲೋಡಿಂಗ್ ಮತ್ತು ಅನ್ಲೋಡಿಂಗ್ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ವರದರಾಜೇಂದ್ರ ತಿಳಿಸಿದರು.<br /> <br /> ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅಡಿ 13 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಹಮಾಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಕಾರ್ಮಿಕರಿಗೆ ಸರಿಯಾದ ಕೂಲಿ, ಅಗತ್ಯ ಸೌಲಭ್ಯ ನೀಡದೆ ವಂಚಿಸಲಾಗುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.<br /> <br /> ಗೋದಾಮಿನಿಂದ ಪಡಿತರ ಅಂಗಡಿಗೆ 1 ಕ್ವಿಂಟಲ್ ಅಕ್ಕಿದ ಮೂಟೆಯನ್ನು ಸಾಗಿಸಲು ರೂ6 ನೀಡಲಾಗುತ್ತಿದೆ. ಈ ಅಲ್ಪ ಹಣದಿಂದ ಕಾರ್ಮಿಕರ ಜೀವನ ನಿರ್ವಹಣೆ ಸಾಧ್ಯವಿಲ್ಲ. ಈ ಕುರಿತು ಕಳೆದ ಆಗಸ್ಟ್ನಲ್ಲಿ ಪ್ರತಿಭಟನೆ ನಡೆಸಿದಾಗ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದರು.<br /> <br /> ಅನ್ನಭಾಗ್ಯ ಯೋಜನೆ ಅಡಿ ಕೆಲಸ ಮಾಡುವ ಎಲ್ಲ ಹಮಾಲಿ ಕಾರ್ಮಿಕರಿಗೆ ಆಹಾರ ಇಲಾಖೆ ವತಿಯಿಂದ ಗುರುತಿನ ಚೀಟಿ ನೀಡಿ ಸೇವಾ ಭದ್ರತೆ ಒದಗಿಸಬೇಕು, ಎಲ್ಲ ಹಮಾಲಿ ಕಾರ್ಮಿಕರಿಗೆ ಇಎಸ್ಐ, ಪಿಎಫ್ ಸೌಲಭ್ಯವನ್ನು ಕಲ್ಪಿಸಬೇಕು, ಗೋದಾಮಿನಿಂದ ಪಡಿತರ ಅಂಗಡಿಗೆ ಸಾಗಿಸುವ 1 ಕ್ವಿಂಟಲ್ ಮೂಟೆಗೆ ರೂ18 ನಿಗದಿಪಡಿಸಬೇಕು ಮತ್ತು ಈಗಿರುವ ಆಹಾರ ಧಾನ್ಯಗಳ ಸಾಗಾಣಿಕೆ ಪದ್ಧತಿಯು ಕಾರ್ಮಿಕ ವಿರೋಧಿ ಪದ್ಧತಿಯಾಗಿದ್ದು ಅದನ್ನು ರದ್ದುಪಡಿಸಿ ಕೇಂದ್ರೀಕೃತ ಪದ್ಧತಿಯನ್ನು ಜಾರಿಗೊಳಿಸಬೇಕು ಎಂದು ಹೇಳಿದರು.<br /> <br /> ಈ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>