<p><strong>ನವದೆಹಲಿ: </strong>ಲೋಕಸಭೆ ಚುನಾವಣೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ಜನವರಿ ಎರಡರಂದು ಹೈಕಮಾಂಡ್ಗೆ ಸಲ್ಲಿಸಲಿದೆ.<br /> <br /> ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮಧುಸೂದನ್ ಮಿಸ್ತ್ರಿ, ದಿಗ್ವಿಜಯ್ ಸಿಂಗ್ ಅವರನ್ನು ಸೋಮವಾರ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಜನವರಿ ಎರಡರಂದು ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಕೊಡುವುದಾಗಿ ತಿಳಿಸಿದರು.<br /> <br /> ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುವ ಸಂಬಂಧ ಶನಿವಾರ ಬೆಂಗಳೂರಿನಲ್ಲಿ ಸೇರಿದ್ದ ರಾಜ್ಯ ಚುನಾವಣಾ ಸಮಿತಿ ಮತ್ತೊಂದು ಸುತ್ತು ಎಲ್ಲರ ಜತೆ ಚರ್ಚಿಸುವಂತೆ ಸಲಹೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇನ್ನೊಂದು ಸಭೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.<br /> <br /> ಈಗಾಗಲೇ ಎಲ್ಲ ಕ್ಷೇತ್ರಗಳಿಗೂ ವೀಕ್ಷಕರನ್ನು ಕಳುಹಿಸಿ ಸಂಭವನೀಯರ ಪಟ್ಟಿ ತರಿಸಿಕೊಳ್ಳಲಾಗಿದೆ. ಅದನ್ನು ಅಂತಿಮಗೊಳಿಸುವ ಕೆಲಸವಷ್ಟೇ ಬಾಕಿ ಉಳಿದಿದೆ. ಅನಂತರ ಅದನ್ನು ಹೈಕಮಾಂಡ್ಗೆ ಸಲ್ಲಿಸಲಾಗುವುದೆಂದು ಮುಖ್ಯಮಂತ್ರಿ ನುಡಿದರು.<br /> <br /> ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವಾಗ ಕೆಲವು ಮಾನದಂಡವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಆಕಾಂಕ್ಷಿಗಳು ಪಕ್ಷದ ಕಾರ್ಯಕರ್ತರಾಗಿರಬೇಕು. ಕ್ರಿಮಿನಲ್ ಹಿನ್ನೆಲೆ ಇರಬಾರದು. ಹೊಂದಿರಬಾರದು. ಗೆಲ್ಲುವಂತವರಾಗಿರಬೇಕು ಎಂದು ಸಿದ್ದರಾಮಯ್ಯ ವಿವರಿಸಿದರು.<br /> <br /> ಚುನಾವಣೆ ಹಿನ್ನೆಲೆಯಲ್ಲಿ ಶೀಘ್ರವೇ ಎಲ್ಲ ವಿಭಾಗಗಳಲ್ಲೂ ಸಮಾವೇಶ ನಡೆಸಲಾಗುವುದು. ಪಕ್ಷದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳನ್ನು ಸಮಾವೇಶಕ್ಕೆ ಕರೆಯಲಾಗುವುದು ಎಂದರು.<br /> <br /> ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 22 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ. ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಯಾರ ಅಲೆಯೂ ಇಲ್ಲ. ಬಿಜೆಪಿ ಮುಖಂಡರೇ ಮೋದಿಯನ್ನು ವಿರೋಧಿಸುತ್ತಿದ್ದಾರೆ. ಇನ್ನು ಜನರು ಹೇಗೆ ಅವರನ್ನು ಒಪ್ಪಿಕೊಳ್ಳುತ್ತಾರೆ ಎಂದು ಕೇಳಿದರು.<br /> ಲೋಕಸಭೆ ಚುನಾವಣೆಗೂ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶಕ್ಕೂ ಸಂಬಂಧವಿಲ್ಲ. ಎರಡೂ ಬೇರೆಬೇರೆ. ಒಂದು ಚುನಾವಣೆಯಲ್ಲಿ ಸೋತ ತಕ್ಷಣ ಕಾಂಗ್ರೆಸ್ ಮುಳುಗಿಬಿಡುವುದಿಲ್ಲ. ಮತ್ತೆ ಪುಟಿದೇಳುವ ಶಕ್ತಿ ಪಕ್ಷಕ್ಕಿದೆ. ನಮ್ಮ ಪಕ್ಷದ ನಾಯಕತ್ವ ದುರ್ಬಲವಾಗಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.<br /> <br /> ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ. ನಿಗಮ, ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಕುರಿತು ಮಾತುಕತೆ ನಡೆದಿಲ್ಲ ಎಂದು ಸಿದ್ದರಾಮಯ್ಯ ಖಚಿತಪಡಿಸಿದರು.<br /> <br /> ಸಚಿವರಾದ ಎಚ್.ಸಿ. ಮಹಾದೇವಪ್ಪ, ಎಚ್.ಕೆ. ಪಾಟೀಲ, ಮಾಜಿ ಸಚಿವ ಡಿ.ಕೆ. ಶಿವಕುಮಾರ್, ಸಂಸದರಾದ ಎಚ್. ವಿಶ್ವನಾಥ್ ಮತ್ತು ಧ್ರುವನಾರಾಯಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಲೋಕಸಭೆ ಚುನಾವಣೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ಜನವರಿ ಎರಡರಂದು ಹೈಕಮಾಂಡ್ಗೆ ಸಲ್ಲಿಸಲಿದೆ.<br /> <br /> ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮಧುಸೂದನ್ ಮಿಸ್ತ್ರಿ, ದಿಗ್ವಿಜಯ್ ಸಿಂಗ್ ಅವರನ್ನು ಸೋಮವಾರ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಜನವರಿ ಎರಡರಂದು ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಕೊಡುವುದಾಗಿ ತಿಳಿಸಿದರು.<br /> <br /> ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುವ ಸಂಬಂಧ ಶನಿವಾರ ಬೆಂಗಳೂರಿನಲ್ಲಿ ಸೇರಿದ್ದ ರಾಜ್ಯ ಚುನಾವಣಾ ಸಮಿತಿ ಮತ್ತೊಂದು ಸುತ್ತು ಎಲ್ಲರ ಜತೆ ಚರ್ಚಿಸುವಂತೆ ಸಲಹೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇನ್ನೊಂದು ಸಭೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.<br /> <br /> ಈಗಾಗಲೇ ಎಲ್ಲ ಕ್ಷೇತ್ರಗಳಿಗೂ ವೀಕ್ಷಕರನ್ನು ಕಳುಹಿಸಿ ಸಂಭವನೀಯರ ಪಟ್ಟಿ ತರಿಸಿಕೊಳ್ಳಲಾಗಿದೆ. ಅದನ್ನು ಅಂತಿಮಗೊಳಿಸುವ ಕೆಲಸವಷ್ಟೇ ಬಾಕಿ ಉಳಿದಿದೆ. ಅನಂತರ ಅದನ್ನು ಹೈಕಮಾಂಡ್ಗೆ ಸಲ್ಲಿಸಲಾಗುವುದೆಂದು ಮುಖ್ಯಮಂತ್ರಿ ನುಡಿದರು.<br /> <br /> ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವಾಗ ಕೆಲವು ಮಾನದಂಡವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಆಕಾಂಕ್ಷಿಗಳು ಪಕ್ಷದ ಕಾರ್ಯಕರ್ತರಾಗಿರಬೇಕು. ಕ್ರಿಮಿನಲ್ ಹಿನ್ನೆಲೆ ಇರಬಾರದು. ಹೊಂದಿರಬಾರದು. ಗೆಲ್ಲುವಂತವರಾಗಿರಬೇಕು ಎಂದು ಸಿದ್ದರಾಮಯ್ಯ ವಿವರಿಸಿದರು.<br /> <br /> ಚುನಾವಣೆ ಹಿನ್ನೆಲೆಯಲ್ಲಿ ಶೀಘ್ರವೇ ಎಲ್ಲ ವಿಭಾಗಗಳಲ್ಲೂ ಸಮಾವೇಶ ನಡೆಸಲಾಗುವುದು. ಪಕ್ಷದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳನ್ನು ಸಮಾವೇಶಕ್ಕೆ ಕರೆಯಲಾಗುವುದು ಎಂದರು.<br /> <br /> ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 22 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ. ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಯಾರ ಅಲೆಯೂ ಇಲ್ಲ. ಬಿಜೆಪಿ ಮುಖಂಡರೇ ಮೋದಿಯನ್ನು ವಿರೋಧಿಸುತ್ತಿದ್ದಾರೆ. ಇನ್ನು ಜನರು ಹೇಗೆ ಅವರನ್ನು ಒಪ್ಪಿಕೊಳ್ಳುತ್ತಾರೆ ಎಂದು ಕೇಳಿದರು.<br /> ಲೋಕಸಭೆ ಚುನಾವಣೆಗೂ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶಕ್ಕೂ ಸಂಬಂಧವಿಲ್ಲ. ಎರಡೂ ಬೇರೆಬೇರೆ. ಒಂದು ಚುನಾವಣೆಯಲ್ಲಿ ಸೋತ ತಕ್ಷಣ ಕಾಂಗ್ರೆಸ್ ಮುಳುಗಿಬಿಡುವುದಿಲ್ಲ. ಮತ್ತೆ ಪುಟಿದೇಳುವ ಶಕ್ತಿ ಪಕ್ಷಕ್ಕಿದೆ. ನಮ್ಮ ಪಕ್ಷದ ನಾಯಕತ್ವ ದುರ್ಬಲವಾಗಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.<br /> <br /> ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ. ನಿಗಮ, ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಕುರಿತು ಮಾತುಕತೆ ನಡೆದಿಲ್ಲ ಎಂದು ಸಿದ್ದರಾಮಯ್ಯ ಖಚಿತಪಡಿಸಿದರು.<br /> <br /> ಸಚಿವರಾದ ಎಚ್.ಸಿ. ಮಹಾದೇವಪ್ಪ, ಎಚ್.ಕೆ. ಪಾಟೀಲ, ಮಾಜಿ ಸಚಿವ ಡಿ.ಕೆ. ಶಿವಕುಮಾರ್, ಸಂಸದರಾದ ಎಚ್. ವಿಶ್ವನಾಥ್ ಮತ್ತು ಧ್ರುವನಾರಾಯಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>